Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೋಹಿತ್ ಕೀರ್ತಿ ನಿರ್ದೇಶನದ ಚಿತ್ರಕ್ಕೆ ಪಾರು ಪಾರ್ವತಿ ಟೈಟಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರೋಹಿತ್ ಕೀರ್ತಿ ನಿರ್ದೇಶನದ ಚಿತ್ರಕ್ಕೆ ಪಾರು ಪಾರ್ವತಿ ಟೈಟಲ್

Cinema

ರೋಹಿತ್ ಕೀರ್ತಿ ನಿರ್ದೇಶನದ ಚಿತ್ರಕ್ಕೆ ಪಾರು ಪಾರ್ವತಿ ಟೈಟಲ್

Public TV
Last updated: September 3, 2024 4:27 pm
Public TV
Share
2 Min Read
Paru Parvathy 2
SHARE

ಪಿ.ಬಿ.ಪ್ರೇಮನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ “ಬಿಗ್ ಬಾಸ್” ಖ್ಯಾತಿಯ ದೀಪಿಕಾ ದಾಸ್, ಪೂನಂ ಸರ್ ನಾಯಕ್ ಹಾಗೂ ಫವಾಜ್ ಅಶ್ರಫ್ ಅವರು ಪ್ರಮುಖಪಾತ್ರದಲ್ಲಿ ನಟಿಸಿರುವ “#ಪಾರು ಪಾರ್ವತಿ” ಚಿತ್ರದ ಶೀರ್ಷಿಕೆ ಅನಾವರಣ ಹಾಗೂ EIGHTEEN THIRTY SIX ಪಿಕ್ಚರ್ಸ್ ನಿರ್ಮಾಣ ಸಂಸ್ಥೆ ಉದ್ಘಾಟನೆ ಇತ್ತೀಚೆಗೆ ನೆರವೇರಿತು. ಆನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.  ಮೊದಲು ಮಾತನಾಡಿದ ನಿರ್ಮಾಪಕ ಪ್ರೇಮನಾಥ್ ಅವರು, ನಾನು ಮೂಲತಃ ಐಟಿ ಉದ್ಯೋಗಿ. ಚಿಕ್ಕವಯಸ್ಸಿನಿಂದಲೂ ಸಿನಿಮಾ ನೋಡುತ್ತಿದ್ದ ನನಗೆ, ಸಿನಿಮಾ ನಿರ್ಮಾಣ ಮಾಡುವ ಕನಸ್ಸಿತ್ತು. ಅದು ಈಗ ನೆರವೇರಿದೆ‌.‌ ನಿರ್ದೇಶಕರು ಒಳ್ಳೆಯ ಕಥೆ ಮಾಡಿದ್ದಾರೆ. ನಾನು ಕೆಲಸದ ಮೇಲೆ ಅನೇಕ ಊರುಗಳಲ್ಲಿ ವಾಸವಾಗಿದ್ದೆ. ಇದು ಕೂಡ ಒಂದು ಪ್ರವಾಸದ  ಕಥೆಯಾಗಿರುವುದರಿಂದ ಇಷ್ಟವಾಯಿತು. ಇನ್ನು ನಮ್ಮ EIGHTEEN THIRTY SIX ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ ಉದ್ಘಾಟನೆಯಾಗಿದೆ. EIGHTEEN THIRTY SIX ಕೂಡಿದಾಗ 9 ಬರುತ್ತದೆ. ಅದು ನನ್ನ ಲಕ್ಕಿ ನಂಬರ್ ಎಂದರು.

Paru Parvathy 3

ಹತ್ತು ವರ್ಷಗಳಿಂದ ಪಿ.ವಾಸು, ಎಂ ಮನೋನ್, ಅರವಿಂದ್ ಶಾಸ್ತ್ರಿ, ಸುನಿ ಮುಂತಾದ ನಿರ್ದೇಶಕರ ಸಿನಿಮಾಗಳಿಗೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ಇದು ಮೊದಲ ನಿರ್ದೇಶನದ ಚಿತ್ರ. ಇದೊಂದು ಅಡ್ವೆಂಚರ್ಸ್ ಮತ್ತು ಪ್ರವಾಸ ಕಥನ. ಬೆಂಗಳೂರು, ಗೋವಾ, ಮಹಾರಾಷ್ಟ್ರ, ರಾಜಸ್ಥಾನ ಹಾಗೂ ಉತ್ತರ ಕಾಂಡ್ ನಲ್ಲಿ ಚಿತ್ರೀಕರಣ ನಡೆದಿದೆ. ಮೂರು ಮುಖ್ಯಪಾತ್ರಗಳ ಸುತ್ತ ಸಿನಿಮಾ ಕಥೆ ಸಾಗುತ್ತದೆ.  ಪಾಯಲ್ ಎಂಬ ಪಾತ್ರದಲ್ಲಿ ದೀಪಿಕಾ ದಾಸ್ ಕಾಣಿಸಿಕೊಂಡಿದ್ದಾರೆ. ನಿಜಜೀವನದಲ್ಲೂ ಅಡ್ವೆಂಚರ್ಸ್ ಹಾಗೂ ಜರ್ನಿಯಲ್ಲಿ ಆಸಕ್ತಿಯಿರುವ ದೀಪಿಕಾ ದಾಸ್ ಅವರಿಗೆ ಇದು ಹೇಳಿ ಮಾಡಿಸಿದ ಪಾತ್ರ. ಈವರೆಗೂ ನೀವು ನೋಡಿರದ ದೀಪಿಕಾ ದಾಸ್ ಅವರನ್ನು ಈ ಚಿತ್ರದಲ್ಲಿ ನೋಡಬಹುದು. ಇನ್ನೆರಡು ಪ್ರಮುಖ ಪಾತ್ರಗಳ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ. ಚಿತ್ರೀಕರಣ ಮುಗಿಸಿರುವ ನಮ್ಮ ಚಿತ್ರ ಈಗ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿದೆ ಎಂದು ನಿರ್ದೇಶಕ ರೋಹಿತ್ ಕೀರ್ತಿ ತಿಳಿಸಿದರು.

Paru Parvathy 1

ನನಗೆ ಮೊದಲಿನಿಂದಲೂ ಪ್ರವಾಸ ಹಾಗೂ ಅಡ್ವೆಂಚರ್ಸ್ ನಲ್ಲಿ ಆಸಕ್ತಿ. ಈ ಚಿತ್ರದಲ್ಲಿ ನಾನು ಏಕಾಂಗಿ ಸಂಚಾರಿ. ಪಾಯಲ್ ನನ್ನ ಪಾತ್ರದ ಹೆಸರು. ಪ್ರಯಾಣದಲ್ಲೇ ಚಿತ್ರದ ಹೆಚ್ಚು ಕಥೆ ನಡೆಯುತ್ತದೆ. ಈ ಚಿತ್ರಕ್ಕಾಗಿ ನಾನು ಒಂದು ತಿಂಗಳಲ್ಲಿ ಹತ್ತು ಕೆಜಿ ತೂಕ ಇಳಿಸಿಕೊಂಡಿದ್ದೇನೆ‌ ಹಾಗೂ ಉದ್ದವಾದ ಕೂದಲನ್ನು ಗಿಡ್ಡ ಕೂದಲು ಮಾಡಿಕೊಂಡಿದ್ದೇನೆ. ನನ್ನ ಪಾತ್ರ ಕೇಳಿದ್ದನ್ನು ಮಾಡಿದ್ದೇನೆ.  ಈ ಚಿತ್ರದಲ್ಲಿ ನಮ್ಮಷ್ಟೇ ಮುಖ್ಯ ಪಾತ್ರ ವಹಿಸಿರುವುದು ಚಿತ್ರದಲ್ಲಿ ನಾವು ಸಂಚಾರಿಸಿರುವ ಕಾರು ಎಂದರು ದೀಪಿಕಾದಾಸ್.

ಚಿತ್ರದಲ್ಲಿ ನಟಿಸಿರುವ ಪೂನಂ ಸರ್ ನಾಯಕ್ ಮತ್ತು ಫವಾಜ್ ಅಶ್ರಫ್ ಮಾತನಾಡಿ ಈ ಚಿತ್ರದಲ್ಲಿ ಅಭಿನಯಿಸಿದ್ದು ಖುಷಿಯಾಗಿದೆ. ಮುಂದಿನ ದಿನಗಳಲ್ಲಿ ನಿರ್ದೇಶಕರು ನಮ್ಮ ಪಾತ್ರಗಳನ್ನು ಪರಿಚಯಿಸುವ ಯೋಜನೆ ಹಾಕಿಕೊಂಡಿದ್ದಾರೆ ಎಂದರು. ಛಾಯಾಗ್ರಾಹಕ ಅಬಿನ್ ರಾಜೇಶ್, ಸಂಗೀತ ನಿರ್ದೇಶಕ ಅರ್ ಹರಿ, ಸಂಕಲನಕಾರ ಸಿ‌.ಕೆ.ಕುಮಾರ್, ಗೀತರಚನೆಕಾರ ನಾಗಾರ್ಜುನ ಶರ್ಮ ಹಾಗೂ ಕಲಾ ನಿರ್ದೇಶಕ ರಾಘು ಮೈಸೂರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಚೇತನ್ ಡಿಸೋಜ ಸಾಹಸ ನಿರ್ದೇಶನ ಹಾಗೂ ರಾಜಾಕೃಷ್ಣನ್ ಆಡಿಯೋಗ್ರಫಿ ಇರುವ ಈ ಚಿತ್ರದ ಡಿಸೈನರ್ ಆಗಿ ಮಹಮ್ಮದ್ ಹಮ್ಜ ಕಾರ್ಯ ನಿರ್ವಹಿಸಿದ್ದಾರೆ.

TAGGED:Deepika dasParu ParvathyRohit Keerthyದೀಪಿಕಾ ದಾಸ್ಪಾರು ಪಾರ್ವತಿರೋಹಿತ್ ಕೀರ್ತಿ
Share This Article
Facebook Whatsapp Whatsapp Telegram

Cinema news

Malashri Shirdi Sai Baba
ಶಿರಡಿ ಸಾಯಿಬಾಬಾನಿಗೆ ಚಿನ್ನದ ಕಿರೀಟ ನೀಡಿದ ನಟಿ ಮಾಲಾಶ್ರೀ
Cinema Latest Sandalwood Top Stories
Rukmini Vasanth
ಹುಟ್ಟುಹಬ್ಬದ ಸಂಭ್ರಮದಲ್ಲಿ ಕಾಂತಾರದ ಕನಕಾವತಿ
Cinema Latest Sandalwood Top Stories
gilli kavya 1
ಕಣ್ಣೀರಿಟ್ಟ ‘ಕಾವು’ – ವಿಲನ್‌ ಕೊಟ್ಟ ಟಾಸ್ಕಲ್ಲಿ ಗೆದ್ರಾ ಗಿಲ್ಲಿ?
Cinema Latest Top Stories TV Shows
Yash Radhika
ನನ್ನೆಲ್ಲ ಪ್ರಶ್ನೆಗೂ ನೀನೇ ಉತ್ತರ – ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ರಾಕಿಂಗ್‌ ಜೋಡಿ
Cinema Latest Sandalwood Top Stories

You Might Also Like

CRIME
Bengaluru City

ಬೆಂಗಳೂರಲ್ಲಿ ಕಳ್ಳತನ ಮಾಡಿದವನನ್ನೇ ದರೋಡೆ ಮಾಡಿದ ಗ್ಯಾಂಗ್

Public TV
By Public TV
14 minutes ago
BY Vijayendra
Belgaum

ಧರ್ಮಸ್ಥಳ ಷಡ್ಯಂತ್ರದ ಸೂತ್ರಧಾರಿಗಳು ಸಿಎಂ ಸುತ್ತನೇ ಇದ್ದಾರೆ: ವಿಜಯೇಂದ್ರ

Public TV
By Public TV
25 minutes ago
Rahul Gandhi
Latest

CIC ಆಯ್ಕೆ| ಮೋದಿ, ಶಾ ಜೊತೆ ಸಭೆ – ಸರ್ಕಾರ ಪ್ರಸ್ತಾಪಿಸಿದ ಹೆಸರುಗಳಿಗೆ ರಾಹುಲ್ ಆಕ್ಷೇಪ

Public TV
By Public TV
25 minutes ago
BASAVARAJ HORATTI
Belgaum

ಸಭಾಪತಿ ಹೊರಟ್ಟಿ ವಿರುದ್ಧ ಭ್ರಷ್ಟಾಚಾರ ಆರೋಪ; ವಿಧಾನ ಪರಿಷತ್ ಕಲಾಪದಲ್ಲಿ ಖಂಡನೆ

Public TV
By Public TV
48 minutes ago
Krishna Byre Gowda
Belgaum

ಭೂ ಪರಿವರ್ತನೆ ನಿಯಮಗಳ ಸರಳೀಕರಣಕ್ಕೆ ಕಾಯ್ದೆ ತಿದ್ದುಪಡಿ: ಕೃಷ್ಣ ಬೈರೇಗೌಡ

Public TV
By Public TV
53 minutes ago
r ashok
Bagalkot

ಉತ್ತರ ಕರ್ನಾಟಕದ ರೈತರಿಗೆ ಅನ್ಯಾಯ, ಬೆಳೆ ಹಾನಿ, ಮಳೆ ಹಾನಿ ಪರಿಹಾರ ಇಲ್ಲ, ಶ್ವೇತಪತ್ರ ಬಿಡುಗಡೆ ಮಾಡಲಿ: ಅಶೋಕ್‌ ಆಗ್ರಹ

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?