ಜೈಪುರ: ಉದಯಪುರದಿಂದ (Udaipur) ದೆಹಲಿಗೆ (Delhi) ಹೊರಟಿದ್ದ ಏರ್ ಇಂಡಿಯಾ ವಿಮಾನವೊಂದರಲ್ಲಿ (Air India Flight) ಪ್ರಯಾಣಿಕರೊಬ್ಬರ ಮೊಬೈಲ್ ಸ್ಫೋಟಗೊಂಡಿದ್ದು (Mobile Blast) ತಕ್ಷಣವೇ ವಿಮಾನವನ್ನು ವಾಪಸ್ ಉದಯಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ (Emergency Landing) ಮಾಡಲಾಗಿದೆ.
ಸೋಮವಾರ ಏರ್ ಇಂಡಿಯಾದ ಎಐ470 ವಿಮಾನ ಉದಯಪುರ ವಿಮಾನ ನಿಲ್ದಾಣದಿಂದ ಟೇಕಾಫ್ ಆಗುತ್ತಿದ್ದ ವೇಳೆ ಪ್ರಯಾಣಿಕರೊಬ್ಬರ ಮೊಬೈಲ್ ಬ್ಯಾಟರಿ ಸ್ಫೋಟಗೊಂಡಿದೆ. ತಕ್ಷಣವೇ ವಿಮಾನವನ್ನು ಮತ್ತೆ ಅದೇ ನಿಲ್ದಾಣದಲ್ಲಿ ಇಳಿಸಲಾಗಿದೆ. ಇದನ್ನೂ ಓದಿ: ಬೇಗ ಬಂದುಬಿಡು ಸೀಮಾ, ಹೊಸ ಜೀವನ ಶುರು ಮಾಡೋಣ – ಸೌದಿಯಲ್ಲಿ ಮೊದಲ ಪತಿಯ ಗೋಳಾಟ
ಸದ್ಯ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರೂ ಸುರಕ್ಷಿತವಾಗಿದ್ದಾರೆ. ವಿಮಾನವನ್ನು ಎಲ್ಲಾ ರೀತಿಯ ತಾಂತ್ರಿಕ ತಪಾಸಣೆಗೆ ಒಳಪಡಿಸಲಾಗಿದೆ. ಆದರೆ ಘಟನೆಯ ಬಳಿಕ ಕೆಲ ಪ್ರಯಾಣಿಕರು ವಿಮಾನ ಹತ್ತಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಅಮಿತ್ ಶಾ ಉಪಸ್ಥಿತಿಯಲ್ಲೇ 2,400 ಕೋಟಿ ಮೌಲ್ಯದ ಡ್ರಗ್ಸ್ ನಾಶ
Web Stories