ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು- ಪಟ್ಟಣ ಪಂಚಾಯ್ತಿ ಮಾಜಿ ಸದಸ್ಯನ ಬರ್ಬರ ಕೊಲೆ

Public TV
1 Min Read
BJJ MURDER copy

ವಿಜಯಪುರ: ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ತಡರಾತ್ರಿ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ಭೀಕರ ಕೊಲೆ ನಡೆದಿದೆ.

ಆಲಮೇಲ ಪಟ್ಟಣ ಪಂಚಾಯ್ತಿ ಮಾಜಿ ಸದಸ್ಯ ಪ್ರದೀಪ ಎಂಟಮಾನ ಭೀಕರ ಕೊಲೆ ನಡೆದಿದೆ. ರೌಡಿ ಶೀಟರ್ ಆಗಿದ್ದ ಪ್ರದೀಪ ಎಂಟಮಾನ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಸ್ನೇಹಿತರೊಂದಿಗೆ ತೆರಳಿದ್ದ. ಇದೇ ವೇಳೆ ನಾಲ್ಕೈದು ದುಷ್ಕರ್ಮಿಗಳಿಂದ ಅಟ್ಯಾಕ್ ನಡೆದಿದೆ.

BIJ MURDER 2

ಕಲ್ಲು ಹಾಗೂ ಬಡಿಗೆಗಳಿಂದ ಹೊಡೆದು ಪ್ರದೀಪ ಎಂಟಮಾನ ಕೊಲೆ ಮಾಡಲಾಗಿದ್ದು, ಪ್ರದೀಪ ಎಂಟಮಾನ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಆಲಮೇಲ ಪೊಲೀಸರ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನನ್ನ ಹುಟ್ಟಿಸಿದ್ಯಾಕೆ?- ತಾಯಿಯ ಹೆರಿಗೆ ಮಾಡಿಸಿದ್ದ ವೈದ್ಯರ ವಿರುದ್ಧ ಯುವತಿ ಕೇಸ್

Share This Article
Leave a Comment

Leave a Reply

Your email address will not be published. Required fields are marked *