ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡ (Pavithra Gowda) ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಬೆಂಗಳೂರಿನ ಸಂಧ್ಯಾ ನಾಗರಾಜ್ ವಿರುದ್ಧ ದೂರು ನೀಡಲಾಗಿದೆ.
ಇತ್ತೀಚೆಗೆ ಮಾಧ್ಯಮವೊಂದರಲ್ಲಿ ಮಾತನಾಡಿದ್ದ ಸಂಧ್ಯಾ ನಾಗರಾಜ್ (Sandhya Nagaraj), ಜೈಲಿನಲ್ಲಿ ಅಧಿಕಾರಿಗಳು ಆಕೆಗೆ ಸಹಕಾರ ಕೊಡ್ತಿದ್ದಾರೆ. ಪ್ರತಿದಿನ ಬಾಕ್ಸ್ನಲ್ಲಿ ಊಟ ತಂದುಕೊಡ್ತಾರೆ. ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ಹೆಲ್ಪ್ಲೈನ್ ಹೆಸರಲ್ಲಿ ವಂಚನೆ ಆರೋಪ – ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ ಎಫ್ಐಆರ್

ಈ ಹಿಂದೆ ಜೈಲಿನಲ್ಲಿ ಇದ್ದ ಸಂಧ್ಯಾ ನಾಗರಾಜ್ ಪವಿತ್ರಾಗೌಡ ಅವರನ್ನ ಭೇಟಿ ಮಾಡಿದ್ರಂತೆ. ಹೀಗಾಗಿ ಅವರಿಗೆ ಎಲ್ಲಾ ಸೌಲಭ್ಯ ಸಿಗ್ತಿದೆ ಅಂತ ಮಾಧ್ಯಮಗಳ ಮುಂದೆ ಹೇಳಿದ್ರು. ಈ ಆರೋಪವನ್ನು ಅಲ್ಲಗಳೆದಿರುವ ಪವಿತ್ರಾಗೌಡ ಜೈಲಿನಲ್ಲಿ ಇದ್ದುಕೊಂಡೇ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜೊತೆಗೆ ರಶ್ಮಿ ಎಂಬ ಆರೋಪಿಯೂ ದೂರು ನೀಡಿದ್ದಾರೆ.
ಸದ್ಯ ಜೈಲಿನಲ್ಲಿರುವ ಪವಿತ್ರಾಗೌಡ ತಮ್ಮ ಆತ್ಮಚರಿತ್ರೆ ಬರೆಯಲು ಆರಂಭಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನಿರ್ಮಾಪಕನ ಜೊತೆ ನಟಿ ಶರ್ಮಿಳಾ ಮಾಂಡ್ರೆ ಮದುವೆ ಫಿಕ್ಸ್
