ವಿಜಯವಾಡ: ಮೊಘಲರ ಆಡಳಿತದ ಸಮಯದಲ್ಲಿ ನಡೆದ ದೌರ್ಜನ್ಯಗಳು ಮತ್ತು ದೇವಾಲಯಗಳ ಧ್ವಂಸದಂತಹ ಐತಿಹಾಸಿಕ ತಪ್ಪುಗಳನ್ನು ಪಠ್ಯಪುಸ್ತಕಗಳು ಮರೆಮಾಚಿವೆ ಎಂದು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಟೀಕಿಸಿದ್ದಾರೆ.
ವಿಜಯವಾಡದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಭಾರತದ ನಿಜವಾದ ಇತಿಹಾಸವನ್ನು ಯುವ ಜನಾಂಗಕ್ಕೆ ತಿಳಿಸುವ ಜವಾಬ್ದಾರಿಯನ್ನು ಶಿಕ್ಷಣ ವ್ಯವಸ್ಥೆಯು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.ಇದನ್ನೂ ಓದಿ: ಪೆದ್ದಿ ಚಿತ್ರಕ್ಕಾಗಿ ದೇಹ ಹುರಿಗೊಳಿಸಿದ ರಾಮ್ ಚರಣ್ : ಮತ್ತೆ ಶೂಟಿಂಗ್ ಶುರು
ವಿಶೇಷವಾಗಿ ಮೊಘಲ್ ಚಕ್ರವರ್ತಿ ಔರಂಗಜೇಬನನ್ನು “ಮಹಾನ್” ಎಂದು ಕರೆದಿರುವುದನ್ನು ಟೀಕಿಸಿದರು. ಔರಂಗಜೇಬನನ್ನು `ಮಹಾನ್’ ಎಂದು ಕರೆಯಲಾಗಿದೆ, ಆದರೆ ಅವನು ಹಿಂದೂಗಳ ಮೇಲೆ ಧಾರ್ಮಿಕ ಕಾರಣಕ್ಕಾಗಿ ಜಿಜಿಯಾ ತೆರಿಗೆ ವಿಧಿಸಿದ್ದನ್ನು ಯಾರೂ ತಿಳಿಸಿಲ್ಲ. ರಕ್ತದ ಚರಿತ್ರೆಯನ್ನು ಮರೆಮಾಚಲಾಗಿದೆ, ಸತ್ಯವನ್ನು ಅಳಿಸಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಇದರ ಜೊತೆಗೆ, ಕಾಂಗ್ರೆಸ್ ಪಕ್ಷವು ತನ್ನ ಆಡಳಿತದ ಅವಧಿಯಲ್ಲಿ ಇತಿಹಾಸವನ್ನು ತಿರುಚಿದೆ ಎಂದು ಆರೋಪಿಸಿದರು. ಇದರಿಂದ ಭಾರತೀಯ ಸಂಸ್ಕೃತಿಯ ನಿಜವಾದ ಚಿತ್ರಣಕ್ಕೆ ಧಕ್ಕೆಯಾಗಿದೆ ಎಂದು ಹೇಳಿದರು.ಇದನ್ನೂ ಓದಿ: ಕನ್ವರ್ ಯಾತ್ರೆಯ ಮಾರ್ಗದಲ್ಲಿ ಹೋಟೆಲ್ಗಳಿಗೆ ಕ್ಯೂಆರ್ ಕೋಡ್ ಕಡ್ಡಾಯ – ಆದೇಶ ಎತ್ತಿ ಹಿಡಿದ ಸುಪ್ರೀಂ