Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: PayCM ಅಂದ್ರೆ ಪೇ ಟು ಕಾಂಗ್ರೆಸ್ ಮೇಡಂ – ನಳಿನ್ ಕುಮಾರ್ ಕಟೀಲ್ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | PayCM ಅಂದ್ರೆ ಪೇ ಟು ಕಾಂಗ್ರೆಸ್ ಮೇಡಂ – ನಳಿನ್ ಕುಮಾರ್ ಕಟೀಲ್ ತಿರುಗೇಟು

Bengaluru City

PayCM ಅಂದ್ರೆ ಪೇ ಟು ಕಾಂಗ್ರೆಸ್ ಮೇಡಂ – ನಳಿನ್ ಕುಮಾರ್ ಕಟೀಲ್ ತಿರುಗೇಟು

Public TV
Last updated: September 22, 2022 7:29 pm
Public TV
Share
4 Min Read
BJP BOOK RELEASE
SHARE

ಬೆಂಗಳೂರು: ಪೇ ಸಿಎಂ ಅಂದ್ರೆ ‘ಪೇ ಕಾಂಗ್ರೆಸ್ ಮೇಡಂ’ (Pay Congress Madam) ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ (Nalin Kumar Kateel) ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲಿಂದು ಸಿದ್ದರಾಮಣ್ಣ ಅಧಿಕಾರಾವಧಿಯ ಶೇ 100 ಭ್ರಷ್ಟಾಚಾರವನ್ನು ಅನಾವರಣಗೊಳಿಸುವ ʻಸ್ಕ್ಯಾಮ್ ರಾಮಯ್ಯ” (Scam Ramaiah) ಪುಸ್ತಕ ಬಿಡುಗಡೆ ಮಾಡಿದರು. ಕಾಂಗ್ರೆಸ್ (Congress) ಮೇಡಂಗೆ ಮಾಡುವ ಪೇಮೆಂಟ್ ಬಗ್ಗೆ ಉಲ್ಲೇಖ ಇದಾಗಿದೆ. ಶಿವಕುಮಾರ್ (DK Shivakumar) ಚೀಟಿ ನುಂಗಿದ್ದನ್ನು ನೋಡಿದ್ದೀರಿ. ಅವರು ಚೀಟಿ ಶಿವಕುಮಾರ್ ಆಗಿದ್ದಾರೆ. ಪೇ ಸಿಎಂ ಅಭಿಯಾನವು ಕರ್ನಾಟಕಕ್ಕೆ (Karnataka) ಮಾಡುತ್ತಿರುವ ಅವಮಾನ. ಸಿದ್ದರಾಮಯ್ಯ ಅವರು ಕೋರ್ಟಿನ (Court) ಆದೇಶದನ್ವಯ ಬಂಧನಕ್ಕೆ ಒಳಗಾಗಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಗೌರವ ಹೋದ್ರೆ ಎಲ್ಲರದ್ದೂ ಹೋಗಲಿದೆ – ಪೇ ಸಿಎಂ ಗದ್ದಲ, ಗಲಾಟೆ: ಕಲಾಪ ಮುಂದೂಡಿಕೆ

PAY CM 2

ಕಾಂಗ್ರೆಸ್‌ ಪಕ್ಷವು ತನ್ನ ಸುದೀರ್ಘ ರಾಜಕಾರಣದಲ್ಲಿ (Politics) ಭ್ರಷ್ಟಾಚಾರಕ್ಕೆ ಅತಿದೊಡ್ಡ ಕೊಡುಗೆ ನೀಡಿದೆ. ದೇಶದಲ್ಲಿ ಉಗ್ರವಾದ ಭಯೋತ್ಪಾದನೆಗೂ (Terrorism) ಕಾಂಗ್ರೆಸ್ ಪಕ್ಷವೇ ಕಾರಣ. 1947ರಿಂದ 2014ರವರೆಗೆ ಗರಿಷ್ಠ ವರ್ಷಗಳ ಕಾಲ ದೇಶವನ್ನು ಆಳಿದ ಕಾಂಗ್ರೆಸ್ (Congress) ಪಕ್ಷವು ಭ್ರಷ್ಟಾಚಾರಕ್ಕೆ ಬೃಹತ್ತಾದ ಕೊಡುಗೆ ನೀಡಿದೆ ಎಂದು ಟೀಕಿಸಿದರು. ಇದನ್ನೂ ಓದಿ: ನಾನು ಆರೋಗ್ಯವಾಗಿದ್ದೇನೆ, ಕಾರ್ಯಕರ್ತರು ಆತಂಕ ಪಡೋ ಅಗತ್ಯವಿಲ್ಲ: ಹೆಚ್.ಡಿ ದೇವೇಗೌಡ

ಕಾಂಗ್ರೆಸ್‍ನ ಅತಿ ಹೆಚ್ಚು ಜನರು ಕಾಂಗ್ರೆಸ್‍ನ ರಾಷ್ಟ್ರೀಯ ನಾಯಕರು (National Congress Leader), ರಾಜ್ಯದ ನಾಯಕರು ಹಗರಣಗಳಲ್ಲಿ ಸಿಲುಕಿದ್ದಾರೆ. ತನಿಖೆಯ ಫಲಿತಾಂಶಗಳು ಕಾಂಗ್ರೆಸ್ ಪಕ್ಷವನ್ನು ಮುಜುಗರಕ್ಕೆ ಈಡುಮಾಡಿವೆ. ಜನರ ದಾರಿ ತಪ್ಪಿಸಲು ಕಾಂಗ್ರೆಸ್ ಪಕ್ಷ ಪ್ರಯತ್ನಿಸುತ್ತಿದೆ. ಸಿದ್ದರಾಮಣ್ಣನ ಕಾಲಘಟ್ಟದಲ್ಲೂ ಅತಿಹೆಚ್ಚು ಹಗರಣಗಳು ನಡೆದಿದ್ದು, ಲೋಕಾಯುಕ್ತ ಶಕ್ತಿ ಕುಂದಿಸಿ ಹಗರಣಗಳನ್ನು ಮುಚ್ಚಿ ಹಾಕಲು ಆಗಿನ ಸರ್ಕಾರ ಮುಂದಾಗಿತ್ತು ಎಂದು ತಿಳಿಸಿದರು.

PAY CM

ಸಾಲು ಸಾಲು ಹಗರಣ:
ನೆಹರೂರಿಂದ ಆರಂಭಿಸಿ ಮನಮೋಹನ್ ಸಿಂಗ್ (Manmohan Singh) ಕಾಲಘಟ್ಟದವರೆಗೆ ಈ ದೇಶದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಹೊರತುಪಡಿಸಿ ಕಾಂಗ್ರೆಸ್ ಪಕ್ಷದ ಇತರ ಎಲ್ಲ ಪ್ರಧಾನಮಂತ್ರಿಗಳು ಭ್ರಷ್ಟಾಚಾರ ಮತ್ತು ವಿವಿಧ ಹಗರಣಗಳಲ್ಲಿ ಸಿಲುಕಿದವರೇ ಆಗಿದ್ದಾರೆ. 1948ರ ಜೀಪ್ ಹಗರಣದಿಂದ ಬೊಫೋರ್ಸ್ (Bofors Case), ಸಿಮೆಂಟ್ ಹಗರಣ, ಕಾಮನ್‍ವೆಲ್ತ್ ಹಗರಣದಿಂದ 2ಜಿ ಹಗರಣದವರೆಗೆ ಆಕಾಶ, ನೀರು, ಮಣ್ಣು ಮತ್ತು ಗಾಳಿಯಲ್ಲಿ ಗರಿಷ್ಠ ಹಗರಣಗಳನ್ನು ಕಾಂಗ್ರೆಸ್ ಪಕ್ಷ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

PAY CM 3

ಅನ್ವರ್ ಮಾಣಿಪ್ಪಾಡಿ ವರದಿ 2.5 ಲಕ್ಷ ಕೋಟಿ ಹಗರಣವನ್ನು ಬೆಳಕಿಗೆ ತರಲಿದೆ. ಅರ್ಕಾವತಿ, ಮೊಟ್ಟೆ, ಹಾಸಿಗೆ, ದಿಂಬು ಸೇರಿ ಅನೇಕ ಹಗರಣಗಳು ನಡೆದಿದ್ದವು. ಇವೆಲ್ಲವುಗಳನ್ನು ಮುಚ್ಚಿಡಲು ಕಾಂಗ್ರೆಸ್ ಪ್ರಯತ್ನಿಸಿತು. ಡ್ರಗ್ ದಂಧೆ, ಮರಳು ಮಾಫಿಯಾಗಳು ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ನಡೆಸುತ್ತಿದ್ದವು. ಆ ದಂಧೆಗಳನ್ನು ನಮ್ಮ ಸರ್ಕಾರ ನಿಯಂತ್ರಿಸಿದೆ ಎಂದು ವಿವರಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದವರ ಬಂಧನವೇಕಿಲ್ಲ?: ದಿನೇಶ್ ಗುಂಡೂರಾವ್

ಕಾಂಗ್ರೆಸ್ ಹಗರಣಗಳ ಸಂಪೂರ್ಣ ತನಿಖೆ ನಡೆಯಲಿದ್ದು, ತಪ್ಪಿತಸ್ಥರ ಬಂಧನವಾಗಲಿದೆ. ನಮ್ಮ ಸಾಧನೆ ಮತ್ತು ಅಭಿವೃದ್ಧಿಗಳನ್ನು ನೋಡಿ ಆತಂಕಗೊಂಡ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ. ಹಾಗಾಗಿ ದಾಖಲೆಗಳನ್ನು ಸಂಗ್ರಹಿಸಿ, ʻಸ್ಕ್ಯಾಮ್ ರಾಮಯ್ಯʼ ಪುಸ್ತಕ ಹೊರತಂದಿದ್ದೇವೆ. ಅಧಿಕಾರಿಗಳಾದ ಕೆಂಪಯ್ಯ ಮತ್ತು ಕಾಂಟ್ರಾಕ್ಟರ್ ಕೆಂಪಣ್ಣನ ಮೂಲಕ ಸಿದ್ದರಾಮಣ್ಣ ರಾಜಕೀಯ ಮಾಡುತ್ತಿದ್ದಾರೆ. ಆದರೆ, ನಾವು ಲೋಕಾಯುಕ್ತಕ್ಕೆ ಜೀವ ಕೊಡುವ ಕೆಲಸ ಮಾಡಿದ್ದೇವೆ. ಕಾಂಗ್ರೆಸ್ ಆಡಳಿತ ಅವಧಿಯ ಎಲ್ಲ ಹಗರಣಗಳನ್ನು ತನಿಖೆ ಮಾಡಿಸಲಿದ್ದೇವೆ. ಪ್ರಕರಣ ದಾಖಲಿಸಿ, ಎಷ್ಟೇ ದೊಡ್ಡವರಿದ್ದರೂ ಬಂಧಿಸಲಿದ್ದೇವೆ. ಪಾರದರ್ಶಕ ಆಡಳಿತ ನಡೆಸಲಿದ್ದೇವೆ ಎಂದು ನುಡಿದರು.

R ASHOK

ಉಗ್ರವಾದವನ್ನು ಪೋಷಿಸಿದ ಪಕ್ಷ ಕಾಂಗ್ರೆಸ್. ನಾವು ಉಗ್ರರನ್ನು ಮಟ್ಟ ಹಾಕಲು ಎನ್‍ಐಎ ಮೂಲಕ ದಾಳಿಗಳನ್ನು ಸಂಘಟಿಸಿದ್ದೇವೆ. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಅಭಿನಂದನೆಗಳು. ಕಾಶ್ಮೀರ ಉಳಿಸಲು ನಮ್ಮ ಸರ್ಕಾರ ಕ್ರಮ ಕೈಗೊಂಡಿತ್ತು ಎಂದ ಅವರು, ಸಿದ್ದರಾಮಯ್ಯರ ಎಲ್ಲ ಹಗರಣಗಳ ದಾಖಲೆ ಸಂಗ್ರಹಿಸಲಾಗಿದೆ. ಈಗ ತನಿಖೆ ಮುಂದುವರಿಯಲಿದೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಎನ್‌ಐಎ ದಾಳಿ- ಅಪರಾಧಗಳ ಹಿನ್ನೆಲೆ ಮಾತ್ರ ಗಣನೆ, ಧರ್ಮ ಅಲ್ಲ: ಆರಗ ಜ್ಞಾನೇಂದ್ರ

RASHOK

ಕಾಂಗ್ರೆಸ್ ಶಾಪಗ್ರಸ್ಥ ಪಕ್ಷ:
ಕಾಂಗ್ರೆಸ್ ಪಕ್ಷವು ಭ್ರಷ್ಟರ ಮೂಲ ಕೇಂದ್ರ. ಭಾರತ್ ಜೋಡೋಗಿಂತ ಮೊದಲು ಕಾಂಗ್ರೆಸ್ ಜೋಡೋ ಮಾಡಬೇಕಿದೆ. ಜಾತಿ-ಜಾತಿಗಳನ್ನು ಒಡೆದ, ರಾಜ್ಯಗಳನ್ನು ಮತ್ತು ದೇಶ ಒಡೆದ ಶಾಪ ಕಾಂಗ್ರೆಸ್‍ಗಿದೆ. ಅದೊಂದು ಶಾಪಗ್ರಸ್ಥ ಪಕ್ಷ. ಡಿಕೆಶಿ ಡೀಲ್ ಮಾಸ್ಟರ್ ಎಂದು ಅವರ ಪಕ್ಷದವರೇ ಹೇಳಿದ್ದಾರೆ. ಇಲ್ಲಿಯೂ ಡಿಕೆಶಿ- ಸಿದ್ದರಾಮಣ್ಣ ನಡುವೆ ಜಗಳ ನಡೆಯುತ್ತಿದೆ. ಪಿಎಸ್‍ಐ ನೇಮಕಾತಿ ಹಗರಣದಲ್ಲಿ ಡಿಐಜಿ ಮಟ್ಟದ ಅಧಿಕಾರಿಯನ್ನು ನಮ್ಮ ಸರ್ಕಾರ ಬಂಧಿಸಿದೆ ಎಂದು ಮಾಹಿತಿ ನೀಡಿದರು.

ಭ್ರಷ್ಟಾಚಾರ ಕುರಿತು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನಿಗೆ ಕಾಲಾವಕಾಶ ಕೊಟ್ಟಿದ್ದರೂ ದಾಖಲೆ ಕೊಟ್ಟಿಲ್ಲ. ಇಂದಿನ ವರೆಗೆ ಕಾಂಗ್ರೆಸ್ ಮತ್ತು ಅವರ ಏಜೆಂಟರು ದಾಖಲೆಗಳನ್ನು ಕೊಟ್ಟಿಲ್ಲ. ಸಾಕ್ಷಿ ಇಲ್ಲದೆ ತನಿಖೆ ಮಾಡಲು ಹೇಗೆ ಸಾಧ್ಯ? ಅದಕ್ಕಾಗಿ ಪಕ್ಷದ ಮೂಲಕ ಮಾನನಷ್ಟ ಮೊಕದ್ದಮೆ ದಾಖಲಿಸಲಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್. ರವಿಕುಮಾರ್ ಹಾಗೂ ಸಿದ್ದರಾಜು, ರಾಜ್ಯ ಬಿಜೆಪಿ ವಕ್ತಾರ ಎಂ.ಜಿ. ಮಹೇಶ್, ಎಸ್ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

TAGGED:Basavaraj BommaibjpcongressDKShivakumarnalinkumar kateelPayCMPayCongressMadamScamRammaiahsiddaramaiahಕಾಂಗ್ರೆಸ್ನಳೀನ್ ಕುಮಾರ್ ಕಟೀಲ್ಪೇಸಿಎಂಬಸವರಾಜ ಬೊಮ್ಮಾಯಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Basavaraj Rayareddy Daughter
Koppal

ಇಸ್ರೇಲ್‌-ಇರಾನ್‌ ಯುದ್ಧ; ದುಬೈನಲ್ಲಿ ಸಿಲುಕಿರೋ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಪುತ್ರಿ

Public TV
By Public TV
7 hours ago
Sanju Samson
Cricket

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ – ಸೆಮಿಗೆ ಟೀಂ ಇಂಡಿಯಾ

Public TV
By Public TV
8 hours ago
bjp leader
Chamarajanagar

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ – ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಮುಖಂಡ

Public TV
By Public TV
8 hours ago
mohammed bin salman and trump
Latest

ಇರಾನ್‌ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್‌ ಮಾಡಿ ಒತ್ತಡ ಹೇರಿದ್ದ ಸೌದಿ

Public TV
By Public TV
9 hours ago
iran
Latest

ಇರಾನ್‌ ದಾಳಿಗೆ ಅಮೆರಿಕದ ಮೂವರು ಸೈನಿಕರು ಸಾವು

Public TV
By Public TV
9 hours ago
Strait of Hormuz closed india oil
Latest

ವಿಶ್ವದ ಪ್ರಮುಖ ತೈಲಮಾರ್ಗ ಹಾರ್ಮೂಜ್‌ ಜಲಸಂಧಿ ಬಂದ್‌ – ಭಾರತದ ಮೇಲೆ ಪರಿಣಾಮ ಏನು?

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?