Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತೆಲಂಗಾಣದಂತೆ ವೇತನ ನೀಡಿ, ತಿಂಗಳೊಳಗೆ ಔರಾದ್ಕರ್ ವರದಿ ಜಾರಿಗೆ ತನ್ನಿ: ಶಶಿಧರ್ ವೇಣುಗೋಪಾಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ತೆಲಂಗಾಣದಂತೆ ವೇತನ ನೀಡಿ, ತಿಂಗಳೊಳಗೆ ಔರಾದ್ಕರ್ ವರದಿ ಜಾರಿಗೆ ತನ್ನಿ: ಶಶಿಧರ್ ವೇಣುಗೋಪಾಲ್

Districts

ತೆಲಂಗಾಣದಂತೆ ವೇತನ ನೀಡಿ, ತಿಂಗಳೊಳಗೆ ಔರಾದ್ಕರ್ ವರದಿ ಜಾರಿಗೆ ತನ್ನಿ: ಶಶಿಧರ್ ವೇಣುಗೋಪಾಲ್

Public TV
Last updated: December 29, 2019 5:17 pm
Public TV
Share
2 Min Read
Shashidhara Venugopal app
SHARE

ಹಾವೇರಿ: ಪೊಲೀಸ್ ಇಲಾಖೆಯ ಸಿಬ್ಬಂದಿಗೆ ತೆಲಂಗಾಣದಂತೆ ವೇತನ ನೀಡಿ. ಮುಂದಿನ ಒಂದು ತಿಂಗಳೊಳಗೆ ಔರಾದ್ಕರ್ ವರದಿ ಜಾರಿಗೆ ತನ್ನಿ ಎಂದು ಕರ್ನಾಟಕ ರಾಜ್ಯ ಪೊಲೀಸ್ ಮಹಾ ಸಂಘದ ರಾಜ್ಯಾಧ್ಯಕ್ಷ ಶಶಿಧರ್ ವೇಣುಗೋಪಾಲ್ ಅವರು ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಕದ ರಾಜ್ಯ ತೆಲಂಗಾಣದಲ್ಲಿ ಒಬ್ಬ ಸಿವಿಲ್ ಪೊಲೀಸ್ 45 ಸಾವಿರ ರೂ. ಸಂಬಳ ಪಡೆಯುತ್ತಾರೆ. ಆದರೆ ನಮ್ಮ ರಾಜ್ಯದಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ 30 ಸಾವಿರ ರೂ. ಪಡೆಯುತ್ತಾರೆ. ಈ ವೇತನ ತಾರತಮ್ಯ ನಾವು ಖಂಡಿಸುತ್ತೇವೆ. ಜೊತೆಗೆ ಒಂದು ತಿಂಗಳೊಳಗೆ ಔರಾದ್ಕರ್ ವರದಿ ಜಾರಿಗೆ ಮಾಡದಿದ್ದರೆ, ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ಮಹಿಳಾ ಸಂಘಗಳ ಸಹಭಾಗಿತ್ವದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಚ್ಚರಿಕೆ ನೀಡಿದರು.

Shashidhara Venugopal a

ಪೊಲೀಸ್ ಇಲಾಖೆ ನಿತ್ಯ ಆಡಳಿತದಲ್ಲಿ ರಾಜಕಾರಣಿ ಕಪಿಮುಷ್ಠಿಯಲ್ಲಿ ಸಿಲುಕಿದೆ. ಇಲಾಖೆಯು ರಾಜಕಾರಣಿಗಳ ಅಣತಿ ಮೇಲೆ ಕಾರ್ಯನಿರ್ವಹಿಸುವ ಕೇಂದ್ರಗಳಾಗಿವೆ. ರಾಜಕೀಯ ನಾಯಕರ ಹಸ್ತಕ್ಷೇಪದಿಂದ ಇಲಾಖೆ ನಲುಗಿ ಹೋಗಿದೆ. ಸರಕಾರಗಳು ಬದಲಾದ ಸಮಯದಲ್ಲಿ ಪೊಲೀಸ್ ವರ್ಗಾವಣೆಯು ಒಂದು ರೀತಿಯಲ್ಲಿ ಹಣಗಳಿಸುವ ದಂಧೆಗಳಾಗಿ ಮಾರ್ಪಾಡು ಆಗಿವೆ. ಇಲಾಖೆಯಲ್ಲಿ ಕಾನೂನಿಗೆ ಅವಕಾಶ ಇಲ್ಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪೊಲೀಸರಲ್ಲಿ ರಾಜಕೀಯ ವ್ಯವಸ್ಥೆಯಿಂದ ಅಸಹಾಯಕತೆ ಹೆಚ್ಚಾಗಿದೆ. ಇಲಾಖೆಯ ಸಿಬ್ಬಂದಿಗಳು ವೇತನ ತಾರತಮ್ಯ ಖಂಡಿಸಿ ಹೋರಾಟ ಮಾಡಿದ್ದು ನಿಜ. ಹೋರಾಟದ ಫಲವಾಗಿ ಔರಾದ್ಕರ್ ವರದಿ ಬಂದಿದೆ. ಈ ವರದಿ ತುಲನಾತ್ಮಕವಾಗಿ ವಾಸ್ತವಿಕ ವಿಚಾರಗಳನ್ನು ಹೊಂದಿದೆ. ಆದರೆ ವರದಿಯಂತೆ ಪೊಲೀಸ್ ಇಲಾಖೆಯಲ್ಲಿ ವೇತನ ಹೆಚ್ಚಳವಾಗಿಲ್ಲ ಎಂದರು. ಇದನ್ನು ಓದಿ: ಔರಾದ್ಕರ್ ವರದಿ ಜಾರಿಗೆ ಮತ್ತೆ ಕಣ್ಣಾಮುಚ್ಚಾಲೆ

cm police

2018 ರಲ್ಲಿ ನೇಮಕಗೊಂಡ ಪೊಲೀಸ್ ಕಾನ್ಸಸ್ಟೆಬಲ್ 23,500 ರೂ. ವೇತನ ಪಡೆಯುತ್ತಾರೆ. ಆದರೆ 2012 ರಲ್ಲಿ ನೇಮಕಗೊಂಡವರು ಅಷ್ಟೇ ಪ್ರಮಾಣದಲ್ಲಿ ವೇತನ ಪಡೆಯುತ್ತಾರೆ. ಇದು ಎಷ್ಟರ ಮಟ್ಟಿಗೆ ಸರಿ? ನಾವು ಸೇವಾ ಹಿರಿತನವನ್ನು ಪ್ರಶ್ನೆ ಮಾಡುತ್ತಿದ್ದೇವೆ. ವೇತನ ಪರಿಷ್ಕರಣೆ ಮಾಡಿ ಎನ್ನುತ್ತಿದ್ದೇವೆ. ಅಭಿವ್ಯಕ್ತಿ ಸ್ವಾತಂತ್ರ್ಯ ಬಳಸಿಕೊಂಡ ಸಾಮಾಜಿಕ ಜಾಲತಾಣದ ಮೂಲಕ ನನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದೆ. ಕುಮಾರಸ್ವಾಮಿ ಸರ್ಕಾರ ನಾನು 420 ಸರ್ಕಾರ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಕ್ಕೆ ಬಂಧಿಸಿದರು. ಆಡಳಿತ ನಡೆಸುವರು ನನ್ನ ಧ್ವನಿ ಹತ್ತಿಕ್ಕುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು.

ನಿರ್ಲಕ್ಷ್ಯ ಸರಿಯಲ್ಲ: ಔರಾದ್ಕರ್ ವರದಿ ಜಾರಿ ವಿಚಾರದಲ್ಲಿ ಸರಕಾರ ನಿರ್ಲಕ್ಷ್ಯ ಮಾಡಬಾರದು. ಈ ವಿಚಾರದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಗಳಲ್ಲಿ ಬೂದಿ ಮುಚ್ಚಿದ ಕೆಂಡದಂತೆ ಇದೆ. ಅದನ್ನು ಗೃಹ ಸಚಿವರು ಸರಿಯಾಗಿ ನಿಭಾಯಿಸಬೇಕು. ಇನ್ನು ಒಂದು ತಿಂಗಳೊಳಗೆ ವರದಿಯನ್ನು ಜಾರಿಗೆ ತರದಿದ್ದರೆ 3 ಹಂತದಲ್ಲಿ ಹೋರಾಟ ಮಾಡಬೇಕಾಗುತ್ತದೆ. ಮೊದಲ ಹಂತದಲ್ಲಿ 35 ಸಾವಿರ ಸಿಬ್ಬಂದಿಗಳು, ಡಿಜಿಪಿ ಮನವಿ ಸಲ್ಲಿಸುವುದು. 2ನೇ ಹಂತದಲ್ಲಿ ಸಮಾನ ಮನಸ್ಕ ಸಂಘಟನೆಗಳೊಂದಿಗೆ ಸೇರಿ ಹೋರಾಟ ಮಾಡುವುದು. 3ನೇ ಹಂತವಾಗಿ ಹೈ ಕೋರ್ಟ್, ಸುಪ್ರೀಂ ಕೋರ್ಟಿನಲ್ಲಿ ಕಾನೂನ ಸಮರ ಮಾಡುತ್ತೇವೆ. ಈ ದೇಶ ನಮ್ಮದು, ಈ ಮಣ್ಣು ನಮ್ಮದು, ಇದನ್ನು ಹಾಳು ಮಾಡಲು ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

TAGGED:Auradkar committee reporthaveripolice departmentPublic TVsalaryShashidhar Venugopaltelanganaಔರಾದ್ಕರ್ ವರದಿತೆಲಂಗಾಣಪಬ್ಲಿಕ್ ಟಿವಿಪೊಲೀಸ್ ಇಲಾಖೆವೇತನಶಶಿಧರ್ ವೇಣುಗೋಪಾಲ್ಹಾವೇರಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
5 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
5 hours ago
01 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-1

Public TV
By Public TV
5 hours ago
03 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-2

Public TV
By Public TV
5 hours ago
02 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-3

Public TV
By Public TV
5 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?