ದುಬೈ: ಪಾಕಿಸ್ತಾನ ಕ್ರಿಕೆಟ್ ನಿಯಂತ್ರಣ ಮಂಡಳಿ ಐಸಿಸಿಯಲ್ಲಿ ಬಿಸಿಸಿಐ ವಿರುದ್ಧ ದೂರಿನ ಪ್ರಕರಣದಲ್ಲಿ ಸೋಲುಂಡಿದ್ದು,ಪರಿಣಾಮ 1.6 ಮಿಲಿಯನ್ ಡಾಲರ್ (ಸುಮಾರು 11 ಕೋಟಿ ರೂ.) ದಂಡವನ್ನು ಬಿಸಿಸಿಐಗೆ ಪಾವತಿಸಿದೆ.
ಈ ಕುರಿತು ಪಾಕಿಸ್ತಾನದ ಕ್ರಿಕೆಟ್ ಬೋರ್ಡಿನ ಅಧ್ಯಕ್ಷ ಈಶನ್ ಮಣಿ ಮಾಹಿತಿ ನೀಡಿದ್ದು, 2.2 ಮಿಲಿಯನ್ ಡಾಲರ್ ಹಣವನ್ನು ಪರಿಹಾರವಾಗಿ ಪಾವತಿ ಮಾಡಿದಿದ್ದೇವೆ ಎಂದು ತಿಳಿಸಿದ್ದಾರೆ.
ಪಾಕಿಸ್ತಾನದೊಂದಿಗೆ ದ್ವಿಪಕ್ಷಿಯ ಒಪ್ಪಂದ ಕ್ರಿಕೆಟ್ ಪಂದ್ಯಗಳನ್ನು ಭಾರತ ಆಯೋಜಿಸದ ಕಾರಣ ತನಗೆ ನಷ್ಟವಾಗಿದೆ ಎಂದು ಕಳೆದ ವರ್ಷ ಪಿಸಿಬಿ ದೂರು ದಾಖಲಿಸಿತ್ತು. ಸುಮಾರು 480 ಕೋಟಿ ರೂ. ಪರಿಹಾರವಾಗಿ ಬಿಸಿಸಿಐನಿಂದ ಕೊಡಿಸುವಂತೆ ಪಾಕಿಸ್ತಾನ ಐಸಿಸಿಗೆ ನೀಡಿದ ದೂರಿನಲ್ಲಿ ತಿಳಿಸಿತ್ತು.
2014 ರಲ್ಲಿ ಬಿಸಿಸಿಐ ಪಾಕ್ ನೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಆಡಲು ಒಪ್ಪಂದಕ್ಕೆ ಸಹಿ ಮಾಡಿತ್ತು. ಇದರಂತೆ ಭಾರತ 2014 ಹಾಗೂ 2015 ಅವಧಿಯಲ್ಲಿ ದ್ವಿಪಕ್ಷೀಯ ಸರಣಿಯಲ್ಲಿ ಭಾಗವಹಿಸಬೇಕಾಗಿತ್ತು. ಆದರೆ ಬಿಸಿಸಿಐಗೆ ಭಾರತ ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಪಾಕ್ ಪ್ರವಾಸವನ್ನು ಕೈಗೊಂಡಿರಲಿಲ್ಲ. ಪಾಕಿಸ್ತಾನದ ಮನವಿಯನ್ನು ತಿರಸ್ಕರಿಸಿದ ಐಸಿಸಿ ಸಮಿತಿ, ಈ ಪ್ರಕರಣದ ವಿಚಾರಣೆ ನಡೆಸಿದ ಐಸಿಸಿ ಬಿಸಿಸಿಐಗೆ ಕಾನೂನು ವೆಚ್ಚವಾಗಿ ಸುಮಾರು 11 ಕೋಟಿಗಳನ್ನು ಪಾವತಿಸಲು ಸೂಚನೆ ನೀಡಿದೆ.
2009ರ ಮಾರ್ಚ್ 3ರಂದು ಪಾಕಿಸ್ತಾನದಲ್ಲಿ ಶ್ರೀಲಂಕಾ ಕ್ರಿಕೆಟ್ ಆಟಗಾರರ ಮೇಲೆ ಭಯೋತ್ಪಾದಕ ಪಡೆ ದಾಳಿ ನಡೆಸಿತ್ತು. ಇದಾಗಿ ಇಂದಿಗೆ 10 ವರ್ಷಗಳು ಕಳೆದರು ಕೂಡ ಪಾಕಿಸ್ತಾನದಲ್ಲಿ ಮತ್ತೆ ಅಂತರಾಷ್ಟ್ರಿಯ ಕ್ರಿಕೆಟ್ ಪಂದ್ಯಗಳನ್ನು ಆರಂಭಿಸಲು ಪಿಸಿಬಿ ಹರಸಾಹಸ ಪಡುತ್ತಿದೆ. ಪಾಕ್ ನೆಲದಲ್ಲಿ ಆಟವಾಡಲು ರಾಷ್ಟ್ರಗಳು ನಿರಕರಿಸುತ್ತಿರುವ ಹಿನ್ನೆಲೆಯಲ್ಲಿ ದುಬೈನಲ್ಲಿ ಪಾಕಿಸ್ತಾನ ಕ್ರಿಕೆಟ್ ಆಯೋಜಿಸುತ್ತಿದೆ.
ದಾಳಿ ಬಳಿಕ ಪಾಕಿಸ್ತಾನದಲ್ಲಿ ಇದುವರೆಗೂ 12 ಅಂತರಾಷ್ಟ್ರಿಯ ಕ್ರಿಕೆಟ್ ಪಂದ್ಯಗಳು ಮಾತ್ರ ನಡೆಸಿದ್ದು, ಇದರಲ್ಲಿ 9 ಸಮಿತಿ ಪಂದ್ಯಗಳಾಗಿವೆ. ಪ್ರಮುಖವಾಗಿ ಜಿಂಬಾಬ್ವೆ 5 ಪಂದ್ಯ, ವೆಸ್ಟ್ ಇಂಡೀಸ್/ ವಿಶ್ವ ಇಲೆವೆನ್ ಮತ್ತು ಶ್ರೀಲಂಕಾ 1 ಪಂದ್ಯದಲ್ಲಿ ಮಾತ್ರ ಆಡಿದೆ.
ಕೊನೆಯದಾಗಿ ಒತ್ತಡದ ಮೇಲೆ ಕಳೆದ ವರ್ಷ ಮೇ ತಿಂಗಳಿನಲ್ಲಿ ಪಾಕ್ನ ಕರಾಚಿ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ತಂಡ 3 ಟಿ20 ಪಂದ್ಯಗಳನ್ನು ಆಡಿದೆ. ಆದರೆ ಇದರ ಬೆನ್ನಲ್ಲೇ ನಡೆಯಬೇಕಿದ್ದ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳ ಸರಣಿಯನ್ನು ಆಡಲು ಎರಡು ರಾಷ್ಟ್ರ ನಿರಾಕರಿಸಿತ್ತು.
2015ರಲ್ಲಿ ಜಿಂಬಾಬ್ವೆ ಕ್ರಿಕೆಟ್ ಮಂಡಳಿ ಮೊಂಡು ಧೈರ್ಯ ಮಾಡಿ ಲಾಹೋರಿನಲ್ಲಿ ಕ್ರಿಕೆಟ್ ಆಡಲು ಮುಂದಾಗಿತ್ತು, ಆದರೆ ಅಂದು ಕೂಡ ಪಂದ್ಯ ನಡೆಯುವ ವೇಳೆ ಸ್ಟೇಡಿಯಂ ಹೊರ ಭಾಗದಲ್ಲಿ ಉಗ್ರ ಮಾನವ ಬಾಂಬ್ ಸ್ಫೋಟಿಸಿ ಓರ್ವ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಬಲಿ ಪಡೆದಿದ್ದ. ಈ ಘಟನೆ ಮತ್ತೆ ಪಾಕ್ ಕ್ರಿಕೆಟ್ ಆಡಲು ಆಸುರಕ್ಷಿತ ಎಂಬುವುದು ಖಚಿತವಾಯ್ತು. ಪರಿಣಾಮ ಐಸಿಸಿ ಕ್ರಿಕೆಟ್ ಟೂರ್ನಿಗಳನ್ನು ಏರ್ಪಡಿಸುವ ಅವಕಾಶವನ್ನು ಪಾಕಿಸ್ತಾದಿಂದ ಕಿತ್ತುಕೊಂಡಿತ್ತು.
2009ರಲ್ಲಿ ಏನಾಗಿತ್ತು?
ಸುಮಾರು 12 ಮಂದಿಯ ಭಯೋತ್ಪಾದಕರ ತಂಡ ಶ್ರೀಲಂಕಾ ಕ್ರಿಕೆಟಿಗರು ಹಾಗೂ ಅಂಪೈರ್ ಗಳ ಮೇಲೆ ಲಹೋರಿನ ಗಢಾಪಿ ಕ್ರೀಡಾಂಗಣದ ಬಳಿ ಗುಂಡಿನ ದಾಳಿ ನಡೆಸಿತ್ತು. ಪರಿಣಾಮ ಘಟನೆಯಲ್ಲಿ 8 ಪೊಲೀಸರು ಸಾವನ್ನಪ್ಪಿದ್ದರೆ, 6 ಮಂದಿ ಗಾಯಗೊಂಡಿದ್ದರು. ಈ ವೇಳೆ ಶ್ರೀಲಂಕಾ ತಂಡಕ್ಕೆ ಇಂಗ್ಲೆಂಡ್ನ ಬೇಲಿಸ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಉಗ್ರರು ಸಿಡಿಸಿದ್ದ ಗುಂಡು ಬಸ್ ಗ್ಲಾಸ್ ಸೀಳಿತ್ತು. ಪರಿಣಾಮ ಗಾಜಿನ ಚುರು ತಂಡದ ಸಹಾಯಕನಾಗಿದ್ದ ಫಾಬ್ರ್ರಾಸ್ ಎಂಬವರ ಭುಜಕ್ಕೆ ಹೊಕ್ಕಿತ್ತು. ಇಂದಿಗೂ ಘಟನೆಯನ್ನು ನೆನೆದರೆ ಫಾಬ್ರ್ರಾಸ್ ಬೆಚ್ಚಿ ಬೀಳುತ್ತಾರೆ.