Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಸಿಸಿಐ ವಿರುದ್ಧ ಐಸಿಸಿಗೆ ದೂರು ನೀಡಿದ್ದ ಪಾಕ್‍ಗೆ ಬಿತ್ತು ಭಾರೀ ದಂಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಬಿಸಿಸಿಐ ವಿರುದ್ಧ ಐಸಿಸಿಗೆ ದೂರು ನೀಡಿದ್ದ ಪಾಕ್‍ಗೆ ಬಿತ್ತು ಭಾರೀ ದಂಡ

Cricket

ಬಿಸಿಸಿಐ ವಿರುದ್ಧ ಐಸಿಸಿಗೆ ದೂರು ನೀಡಿದ್ದ ಪಾಕ್‍ಗೆ ಬಿತ್ತು ಭಾರೀ ದಂಡ

Public TV
Last updated: March 20, 2019 3:31 pm
Public TV
Share
2 Min Read
PCB ICC BCCI
SHARE

ದುಬೈ: ಪಾಕಿಸ್ತಾನ ಕ್ರಿಕೆಟ್ ನಿಯಂತ್ರಣ ಮಂಡಳಿ ಐಸಿಸಿಯಲ್ಲಿ ಬಿಸಿಸಿಐ ವಿರುದ್ಧ ದೂರಿನ ಪ್ರಕರಣದಲ್ಲಿ ಸೋಲುಂಡಿದ್ದು,ಪರಿಣಾಮ 1.6 ಮಿಲಿಯನ್ ಡಾಲರ್ (ಸುಮಾರು 11 ಕೋಟಿ ರೂ.) ದಂಡವನ್ನು ಬಿಸಿಸಿಐಗೆ ಪಾವತಿಸಿದೆ.

ಈ ಕುರಿತು ಪಾಕಿಸ್ತಾನದ ಕ್ರಿಕೆಟ್ ಬೋರ್ಡಿನ ಅಧ್ಯಕ್ಷ ಈಶನ್ ಮಣಿ ಮಾಹಿತಿ ನೀಡಿದ್ದು, 2.2 ಮಿಲಿಯನ್ ಡಾಲರ್ ಹಣವನ್ನು ಪರಿಹಾರವಾಗಿ ಪಾವತಿ ಮಾಡಿದಿದ್ದೇವೆ ಎಂದು ತಿಳಿಸಿದ್ದಾರೆ.

ಪಾಕಿಸ್ತಾನದೊಂದಿಗೆ ದ್ವಿಪಕ್ಷಿಯ ಒಪ್ಪಂದ ಕ್ರಿಕೆಟ್ ಪಂದ್ಯಗಳನ್ನು ಭಾರತ ಆಯೋಜಿಸದ ಕಾರಣ ತನಗೆ ನಷ್ಟವಾಗಿದೆ ಎಂದು ಕಳೆದ ವರ್ಷ ಪಿಸಿಬಿ ದೂರು ದಾಖಲಿಸಿತ್ತು. ಸುಮಾರು 480 ಕೋಟಿ ರೂ. ಪರಿಹಾರವಾಗಿ ಬಿಸಿಸಿಐನಿಂದ ಕೊಡಿಸುವಂತೆ ಪಾಕಿಸ್ತಾನ ಐಸಿಸಿಗೆ ನೀಡಿದ ದೂರಿನಲ್ಲಿ ತಿಳಿಸಿತ್ತು.

icc

2014 ರಲ್ಲಿ ಬಿಸಿಸಿಐ ಪಾಕ್ ನೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಆಡಲು ಒಪ್ಪಂದಕ್ಕೆ ಸಹಿ ಮಾಡಿತ್ತು. ಇದರಂತೆ ಭಾರತ 2014 ಹಾಗೂ 2015 ಅವಧಿಯಲ್ಲಿ ದ್ವಿಪಕ್ಷೀಯ ಸರಣಿಯಲ್ಲಿ ಭಾಗವಹಿಸಬೇಕಾಗಿತ್ತು. ಆದರೆ ಬಿಸಿಸಿಐಗೆ ಭಾರತ ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಪಾಕ್ ಪ್ರವಾಸವನ್ನು ಕೈಗೊಂಡಿರಲಿಲ್ಲ. ಪಾಕಿಸ್ತಾನದ ಮನವಿಯನ್ನು ತಿರಸ್ಕರಿಸಿದ ಐಸಿಸಿ ಸಮಿತಿ, ಈ ಪ್ರಕರಣದ ವಿಚಾರಣೆ ನಡೆಸಿದ ಐಸಿಸಿ ಬಿಸಿಸಿಐಗೆ ಕಾನೂನು ವೆಚ್ಚವಾಗಿ ಸುಮಾರು 11 ಕೋಟಿಗಳನ್ನು ಪಾವತಿಸಲು ಸೂಚನೆ ನೀಡಿದೆ.

2009ರ ಮಾರ್ಚ್ 3ರಂದು ಪಾಕಿಸ್ತಾನದಲ್ಲಿ ಶ್ರೀಲಂಕಾ ಕ್ರಿಕೆಟ್ ಆಟಗಾರರ ಮೇಲೆ ಭಯೋತ್ಪಾದಕ ಪಡೆ ದಾಳಿ ನಡೆಸಿತ್ತು. ಇದಾಗಿ ಇಂದಿಗೆ 10 ವರ್ಷಗಳು ಕಳೆದರು ಕೂಡ ಪಾಕಿಸ್ತಾನದಲ್ಲಿ ಮತ್ತೆ ಅಂತರಾಷ್ಟ್ರಿಯ ಕ್ರಿಕೆಟ್ ಪಂದ್ಯಗಳನ್ನು ಆರಂಭಿಸಲು ಪಿಸಿಬಿ ಹರಸಾಹಸ ಪಡುತ್ತಿದೆ. ಪಾಕ್ ನೆಲದಲ್ಲಿ ಆಟವಾಡಲು ರಾಷ್ಟ್ರಗಳು ನಿರಕರಿಸುತ್ತಿರುವ ಹಿನ್ನೆಲೆಯಲ್ಲಿ ದುಬೈನಲ್ಲಿ ಪಾಕಿಸ್ತಾನ ಕ್ರಿಕೆಟ್ ಆಯೋಜಿಸುತ್ತಿದೆ.

Cricket aa

ದಾಳಿ ಬಳಿಕ ಪಾಕಿಸ್ತಾನದಲ್ಲಿ ಇದುವರೆಗೂ 12 ಅಂತರಾಷ್ಟ್ರಿಯ ಕ್ರಿಕೆಟ್ ಪಂದ್ಯಗಳು ಮಾತ್ರ ನಡೆಸಿದ್ದು, ಇದರಲ್ಲಿ 9 ಸಮಿತಿ ಪಂದ್ಯಗಳಾಗಿವೆ. ಪ್ರಮುಖವಾಗಿ ಜಿಂಬಾಬ್ವೆ 5 ಪಂದ್ಯ, ವೆಸ್ಟ್ ಇಂಡೀಸ್/ ವಿಶ್ವ ಇಲೆವೆನ್ ಮತ್ತು ಶ್ರೀಲಂಕಾ 1 ಪಂದ್ಯದಲ್ಲಿ ಮಾತ್ರ ಆಡಿದೆ.

ಕೊನೆಯದಾಗಿ ಒತ್ತಡದ ಮೇಲೆ ಕಳೆದ ವರ್ಷ ಮೇ ತಿಂಗಳಿನಲ್ಲಿ ಪಾಕ್‍ನ ಕರಾಚಿ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ತಂಡ 3 ಟಿ20 ಪಂದ್ಯಗಳನ್ನು ಆಡಿದೆ. ಆದರೆ ಇದರ ಬೆನ್ನಲ್ಲೇ ನಡೆಯಬೇಕಿದ್ದ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳ ಸರಣಿಯನ್ನು ಆಡಲು ಎರಡು ರಾಷ್ಟ್ರ ನಿರಾಕರಿಸಿತ್ತು.

India Vs Pakistan Cricket copy

2015ರಲ್ಲಿ ಜಿಂಬಾಬ್ವೆ ಕ್ರಿಕೆಟ್ ಮಂಡಳಿ ಮೊಂಡು ಧೈರ್ಯ ಮಾಡಿ ಲಾಹೋರಿನಲ್ಲಿ ಕ್ರಿಕೆಟ್ ಆಡಲು ಮುಂದಾಗಿತ್ತು, ಆದರೆ ಅಂದು ಕೂಡ ಪಂದ್ಯ ನಡೆಯುವ ವೇಳೆ ಸ್ಟೇಡಿಯಂ ಹೊರ ಭಾಗದಲ್ಲಿ ಉಗ್ರ ಮಾನವ ಬಾಂಬ್ ಸ್ಫೋಟಿಸಿ ಓರ್ವ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಬಲಿ ಪಡೆದಿದ್ದ. ಈ ಘಟನೆ ಮತ್ತೆ ಪಾಕ್ ಕ್ರಿಕೆಟ್ ಆಡಲು ಆಸುರಕ್ಷಿತ ಎಂಬುವುದು ಖಚಿತವಾಯ್ತು. ಪರಿಣಾಮ ಐಸಿಸಿ ಕ್ರಿಕೆಟ್ ಟೂರ್ನಿಗಳನ್ನು ಏರ್ಪಡಿಸುವ ಅವಕಾಶವನ್ನು ಪಾಕಿಸ್ತಾದಿಂದ ಕಿತ್ತುಕೊಂಡಿತ್ತು.

2009ರಲ್ಲಿ ಏನಾಗಿತ್ತು?
ಸುಮಾರು 12 ಮಂದಿಯ ಭಯೋತ್ಪಾದಕರ ತಂಡ ಶ್ರೀಲಂಕಾ ಕ್ರಿಕೆಟಿಗರು ಹಾಗೂ ಅಂಪೈರ್ ಗಳ ಮೇಲೆ ಲಹೋರಿನ ಗಢಾಪಿ ಕ್ರೀಡಾಂಗಣದ ಬಳಿ ಗುಂಡಿನ ದಾಳಿ ನಡೆಸಿತ್ತು. ಪರಿಣಾಮ ಘಟನೆಯಲ್ಲಿ 8 ಪೊಲೀಸರು ಸಾವನ್ನಪ್ಪಿದ್ದರೆ, 6 ಮಂದಿ ಗಾಯಗೊಂಡಿದ್ದರು. ಈ ವೇಳೆ ಶ್ರೀಲಂಕಾ ತಂಡಕ್ಕೆ ಇಂಗ್ಲೆಂಡ್‍ನ ಬೇಲಿಸ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಉಗ್ರರು ಸಿಡಿಸಿದ್ದ ಗುಂಡು ಬಸ್ ಗ್ಲಾಸ್ ಸೀಳಿತ್ತು. ಪರಿಣಾಮ ಗಾಜಿನ ಚುರು ತಂಡದ ಸಹಾಯಕನಾಗಿದ್ದ ಫಾಬ್ರ್ರಾಸ್ ಎಂಬವರ ಭುಜಕ್ಕೆ ಹೊಕ್ಕಿತ್ತು. ಇಂದಿಗೂ ಘಟನೆಯನ್ನು ನೆನೆದರೆ ಫಾಬ್ರ್ರಾಸ್ ಬೆಚ್ಚಿ ಬೀಳುತ್ತಾರೆ.

bcci

TAGGED:bccicricketdubaiICCindiaNew DelhipakistanPCBPublic TVಐಸಿಸಿಕ್ರಿಕೆಟ್ದುಬೈನವದೆಹಲಿಪಬ್ಲಿಕ್ ಟಿವಿಪಾಕಿಸ್ತಾನಪಿಸಿಬಿಬಿಸಿಸಿಐಭಾರತ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Sanju Samson Ishan Kishan
Cricket

ಸಿಕ್ಸರ್‌, ಬೌಂಡರಿಗಳ ಸುರಿಮಳೆ – 255 ರನ್‌ ಹೊಡೆದು ವಿಶ್ವದಾಖಲೆ ಬರೆದ ಟೀಂ ಇಂಡಿಯಾ

Public TV
By Public TV
3 minutes ago
Abhishek Sharma 1
Cricket

ಫೈನಲಿನಲ್ಲಿ ಅಬ್ಬರಿಸಿ ಸ್ಫೋಟಕ ಬ್ಯಾಟಿಂಗ್‌ – ವಿಶ್ವದಾಖಲೆ ಬರೆದ ಅಭಿಷೇಕ್‌ ಶರ್ಮಾ

Public TV
By Public TV
37 minutes ago
HC Mahadevappa Shivanagouda Naik
Chitradurga

ದಲಿತರಿಗೆ ಅನ್ಯಾಯವೆಸಗಿರುವ ಸಚಿವ ಮಹದೇವಪ್ಪ ಸಿಕ್ಕರೆ ಕಪಾಳಮೋಕ್ಷ ಮಾಡುವಾಸೆ: ಶಿವನಗೌಡ

Public TV
By Public TV
1 hour ago
HD Kumaraswamy Womens Day
Bengaluru City

33% ಮಹಿಳಾ ಮೀಸಲು ಸಂಸದೀಯ ಹೆಗ್ಗಳಿಕೆ ಹೆಚ್ಚಿಸಲಿದೆ: ಹೆಚ್‌ಡಿಕೆ

Public TV
By Public TV
2 hours ago
Suryakumar Yadav
Cricket

ನಾವು ಹೇಗಿದ್ದರೂ ಮೊದಲು ಬ್ಯಾಟ್ ಮಾಡುತ್ತಿದ್ದೆವು: ಸೂರ್ಯ

Public TV
By Public TV
2 hours ago
Nitish Kumar Son Nishant Kumar Joins JDU
Latest

ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ರಾಜಕೀಯಕ್ಕೆ ಎಂಟ್ರಿ – ಜೆಡಿಯು ಪಕ್ಷಕ್ಕೆ ಸೇರ್ಪಡೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?