Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಿಡಿಓ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆ- 12 ಜನ, ಇತರೆ ಪಿಡಿಓ ಪರೀಕ್ಷಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪಿಡಿಓ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆ- 12 ಜನ, ಇತರೆ ಪಿಡಿಓ ಪರೀಕ್ಷಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲು

Districts

ಪಿಡಿಓ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆ- 12 ಜನ, ಇತರೆ ಪಿಡಿಓ ಪರೀಕ್ಷಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲು

Public TV
Last updated: November 18, 2024 9:11 am
Public TV
Share
3 Min Read
pdo question paper leak protest
SHARE

ರಾಯಚೂರು: ಪಿಡಿಓ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆಯಲ್ಲಿ 12 ಜನ ಹಾಗೂ ಇತರೆ ಪಿಡಿಓ ಪರೀಕ್ಷಾರ್ಥಿಗಳ ವಿರುದ್ಧ ಸಿಂಧನೂರು (Sidhanuru) ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ರಾಯಚೂರಿನ (Raichur) ಸಿಂಧನೂರಿನ ಸರ್ಕಾರಿ ಪದವಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆ ಪರೀಕ್ಷೆಯಲ್ಲಿ ಅಕ್ರಮ, ಪೇಪರ್ ಲೀಕ್ ಆರೋಪಿಸಿ ಪರೀಕ್ಷೆ ಬಹಿಷ್ಕರಿಸಿ ನಿನ್ನೆ (ನ.17) ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ಪರೀಕ್ಷಾ ಮೇಲ್ವಿಚಾರಕ ಬಸವರಾಜ ತಡಕಲ್ ದೂರು ನೀಡಿದ್ದು, ಪರೀಕ್ಷಾರ್ಥಿಗಳ ವಿರುದ್ಧ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಹುತೇಕ ಯಾದಗಿರಿ ಜಿಲ್ಲೆಯ ಪರೀಕ್ಷಾರ್ಥಿಗಳ ಮೇಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಓರ್ವ ಪರೀಕ್ಷಾರ್ಥಿಯನ್ನ ವಶಕ್ಕೆ ಪಡೆದು ಸ್ಟೇಷನ್ ಬೇಲ್ ಮೇಲೆ ಬಿಟ್ಟಿದ್ದಾರೆ. ಇದನ್ನೂ ಓದಿ: Nelamangala| ಚಿರತೆ ದಾಳಿ- ಮಹಿಳೆ ಬಲಿ

vlcsnap 2024 11 18 08h56m36s412

ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದೀರಿ ಎಂದು ತಪ್ಪು ಭಾವಿಸಿ ಅನಗತ್ಯ ಗೊಂದಲ ಸೃಷ್ಟಿಸಲಾಗಿದೆ. ಪರೀಕ್ಷಾ ವೀಕ್ಷಕರೊಂದಿಗೆ ವಾಗ್ವಾದ ಮಾಡಿ, ಪರೀಕ್ಷಾ ನಿಯಮಗಳ ಉಲ್ಲಂಘನೆ ಮಾಡಿದ್ದಾರೆ. ಪರೀಕ್ಷೆ ಬರೆಯಲು ಕುಳಿತಿದ್ದ ವಿದ್ಯಾರ್ಥಿಗಳಿಗೆ ಪ್ರಚೋದನೆ ನೀಡಿದ್ದಾರೆ. ಇತರ ಪರೀಕ್ಷಾರ್ಥಿಗಳು ಕೊಠಡಿಗಳಿಂದ ಹೊರ ಬರುವಂತೆ ಮಾಡಿ, ರಸ್ತೆಗಿಳಿದು ಪ್ರತಿಭಟನೆ ಮಾಡಿದ್ದಾರೆ. ಅನಗತ್ಯ ಗೊಂದಲ ಸೃಷ್ಟಿಸಿ ಇತರ ಪರೀಕ್ಷಾರ್ಥಿಗಳನ್ನ ಹೊರಗೆ ಕರೆದೊಯ್ಯಲಾಗಿದೆ. ಸುಳ್ಳು ಸುದ್ದಿ ಹರಡಿ ಕಾಲೇಜಿನ ಮುಂದುಗಡೆ ಗಲಾಟೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆ, ಕೊಠಡಿ ಸಂಖ್ಯೆ 05ರಲ್ಲಿ ಗೊಂದಲ ಸೃಷ್ಟಿಸಿ ಗಲಾಟೆ ಮಾಡಿದ ಪರೀಕ್ಷಾರ್ಥಿ ಕಾಶಿಪತಿಯನ್ನ ವಶಕ್ಕೆ ಪಡೆದು, ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ. ಬಾಬು, ಅಯ್ಯನಗೌಡ, ಅಮಿತ್, ವೆಂಕಟೇಶ್ ಸೇರಿ 12 ಜನ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Chitraduraga| 240 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಒಂದೇ ಕೊಠಡಿಯಲ್ಲಿ ಪಾಠ!

ಗ್ರಾಮೀಣಾಭಿವೃದ್ಧಿ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದದ 97 (ಪಿಡಿಒ) ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಸಿದ್ದಪಡಿಸಲಾಗಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ಯಾ ಎಂಬ ಗಂಭೀರ ಪ್ರಶ್ನೆ ಎದ್ದಿದೆ. (ಪಿಡಿಒ) ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕ ಭಾಗದ 298 ಪರೀಕ್ಷಾ ಉಪ ಕೇಂದ್ರಗಳಲ್ಲಿ ನಿನ್ನೆ ಸ್ಪರ್ಧಾತ್ಮಕ ಪರೀಕ್ಷೆ ಆಯೋಜನೆಗೊಂಡಿತ್ತು. ಈ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ಸಿಂಧನೂರು ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಇದನ್ನೂ ಓದಿ: ಒಂದೇ ದಿನ ಮೂವರು ಗರ್ಭಿಣಿಯರು ಸಾವು – ಇನ್ನೂ ಬಳ್ಳಾರಿಗೆ ಮುಖ ಮಾಡದ ಜಮೀರ್‌

ವಿದ್ಯಾರ್ಥಿಗಳು ಹೇಳಿದ್ದೇನು?
ಒಂದು ಕೋಣೆಯಲ್ಲಿ 24 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಆದರೆ ಕೊಠಡಿಗೆ 24 ಪ್ರಶ್ನೆಪತ್ರಿಕೆ ಬದಲು ಕೇವಲ 12 ಪ್ರಶ್ನೆಪ್ರತಿಕೆಯನ್ನು ಕೆಪಿಎಸ್‌ಸಿ ಕಳುಹಿಸಿದೆ. ಈ ಹಿನ್ನೆಲೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು ಮಾತ್ರವಲ್ಲದೇ ಕೊಠಡಿಗೆ ತರುವಾಗಲೇ ಬಂಡಲ್‌ಗಳು ತೆರೆದಿದ್ದವು. ಅಷ್ಟೇ ಅಲ್ಲದೇ ಪರೀಕ್ಷೆ ನಿಗದಿಯಾದ ಸಮಯಕ್ಕಿಂತಲೂ ತಡವಾಗಿ ಆರಂಭವಾಗಿತ್ತು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು.

ಸರ್ಕಾರಿ ಪದವಿ ಕಾಲೇಜಿನ ಎದುರಿನ ಕುಷ್ಟಗಿ ಸಿಂಧನೂರು ರಸ್ತೆ ಬಂದ್ ಮಾಡಿ ಪ್ರತಿಭಟಿಸಿ ಬೀದರ್, ಕಲಬುರಗಿ ಹಾಗೂ ಯಾದಗಿರಿಯಿಂದ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ನೂರಾರು ಅಭ್ಯರ್ಥಿಗಳು ಕೆಪಿಎಸ್‌ಸಿ ವಿರುದ್ಧ ಪ್ರತಿಭಟಿಸಿದ್ದು, ಸ್ಥಳಕ್ಕೆ ಸಿಂಧನೂರು ನಗರ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ವಿದೇಶಿ ಸ್ವತ್ತು, ಆದಾಯ ಘೋಷಿಸದಿದ್ರೆ 10 ಲಕ್ಷ ರೂ. ದಂಡ – ಕೊನೇ ದಿನ ಯಾವಾಗ?

ಬೀದರ್ (Bidar), ಕಲಬುರಗಿ (Kalaburagi), ಯಾದಗಿರಿ, ರಾಯಚೂರು, ವಿಜಯನಗರ, ಬಳ್ಳಾರಿ, ಕೊಪ್ಪಳ ಜಿಲ್ಲಾ ಕೇಂದ್ರಗಳು ಹಾಗೂ ಭಾಲ್ಕಿ, ಜೇವರ್ಗಿ, ಶಹಾಪುರ, ಸಿಂಧನೂರು, ಹಗರಿ ಬೊಮ್ಮನಹಳ್ಳಿ, ಕೂಡ್ಲಿಗಿ, ಗಂಗಾವತಿ ಮತ್ತು ಕುಷ್ಟಗಿ ತಾಲೂಕು ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತಿದೆ. ಭಾನುವಾರದ ಪರೀಕ್ಷೆಗೆ 99,107 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು ಎಂದು ಕೆಪಿಎಸ್‌ಸಿ ತಿಳಿಸಿತ್ತು. ಇದನ್ನೂ ಓದಿ: ರಸ್ತೆ ಅಗಲೀಕರಣಕ್ಕಾಗಿ 70ಕ್ಕೂ ಹೆಚ್ಚು ಮನೆಗಳ ನೆಲಸಮ – ನೋಟಿಸ್‌ ನೀಡದೆ ತೆರವು ಆರೋಪ

TAGGED:KPSCPDO Examprotestraichurusindhanuruಕೆಪಿಎಸ್‍ಸಿಪಿಡಿಓ ಪರೀಕ್ಷೆಪ್ರತಿಭಟನೆರಾಯಚೂರುಸಿಂಧನೂರು
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Sangamesh
Davanagere

ಪೈಲ್ವಾನ್ ಬಳಿಕ ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಮನವೊಲಿಕೆಗೆ `ಕೈ’ ಕಸರತ್ತು

Public TV
By Public TV
22 minutes ago
Artemis II 1
Latest

ಆರ್ಟೆಮಿಸ್-2 ಪಯಣಕ್ಕೆ ಕೌಂಟ್‌ಡೌನ್ – ಉಡಾವಣೆಗೂ ಮುನ್ನ ಸೂರ್ಯನ ಮೇಲೆ ನಾಸಾ ಕಣ್ಣಿಟ್ಟಿದ್ದು ಯಾಕೆ? ಮಿಷನ್‌ ಉದ್ದೇಶ ಏನು?

Public TV
By Public TV
23 minutes ago
Bengaluru Kempegowda International Airport 3
Bengaluru City

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಸೀಜ್ – ಐವರು ಅರೆಸ್ಟ್

Public TV
By Public TV
44 minutes ago
R Ashok 1
Bengaluru City

ಡಿಕೆಶಿಯಿಂದ ಕುರ್ಚಿ ಉಳಿಸಿಕೊಳ್ಳೋಕೆ ಸಿಎಂ ಐದೈದು ದಿನ ಉಪಚುನಾವಣೆ ಪ್ರಚಾರ ಮಾಡ್ತಿದ್ದಾರೆ – ಅಶೋಕ್

Public TV
By Public TV
1 hour ago
DK Shivakumar KSCA IPL
Cricket

ಗೋಗರೆದಿದ್ದ ಶಾಸಕರಿಗೆ ಸಿಗುತ್ತೆ 3 ಟಿಕೆಟ್‌ – ಚಿನ್ನಸ್ವಾಮಿಯಲ್ಲಿ 55 ಸಾವಿರ ಸೀಟ್‌ ಸಾಧ್ಯವಾಗುತ್ತಾ?

Public TV
By Public TV
1 hour ago
Vinay Kulkarni
Dharwad

ಮಾತು ಬಾರದ ವೃದ್ಧೆ ಜೊತೆ ಕೈ ಸನ್ನೆಯಲ್ಲೇ ಸಂಭಾಷಣೆ ನಡೆಸಿದ ವಿನಯ್‌ ಕುಲಕರ್ಣಿ -‌ ವೀಡಿಯೋ ವೈರಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?