ಕಾರವಾರ: ಪಾದಚಾರಿಗೆ ಲಾರಿ ಡಿಕ್ಕಿ ಹೊಡೆದಿದ್ದಕ್ಕೆ ಲಾರಿ ಚಾಲಕನಿಗೆ ಗೂಸ ಕೊಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
ತಮಿಳುನಾಡು ಮೂಲದ ಸೆಲ್ವಂ ಗೂಸ ತಿಂದ ಲಾರಿ ಚಾಲಕ. ಕಾರವಾರದ ಬೈತಕೋಲ್ ಬಂದರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಘಟನೆ ನಡೆದಿದೆ. ಪಾದಚಾರಿ ಬೈತಕೋಲ್ನಿಂದ ಕಾರವಾರಕ್ಕೆ ತೆರಳುತ್ತಿದ್ದ ವೇಳೆ ಬೈತಕೋಲ್ ಕ್ರಾಸ್ ನಲ್ಲಿ ತಮಿಳುನಾಡು ನೋಂದಣಿ ಹೊಂದಿದ ಗೂಡ್ಸ್ ಲಾರಿ ತಿರುವು ಪಡೆಯುವಾಗ ಪಕ್ಕದಲ್ಲಿ ನಿಂತಿದ್ದ ಪಾದಚಾರಿಗೆ ತಾಗಿದೆ. ಇದರಿಂದ ಸಿಟ್ಟಿಗೆದ್ದ ಸ್ಥಳಿಯರು ಚಾಲಕನನ್ನು ಹಿಡಿದು ಗೂಸಾ ನೀಡಿದ್ದಾರೆ.
ಲಾರಿ ಡಿಕ್ಕಿಯಾಗಿ ಪಾದಚಾರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ಹೇಳಲಾಗುತ್ತಿದೆ. ಸೆಲ್ವಂ ಪಾದಚಾರಿಗೆ ಡಿಕ್ಕಿ ಹೊಡೆದಿದ್ದಕ್ಕೆ ಕೋಪಗೊಂಡ ಪಾದಚಾರಿ ಸ್ವೆಲಂಗೆ ಸಖತ್ ಗೂಸ ಕೊಟ್ಟು ಬುದ್ದಿ ಹೇಳಿದ್ದಾರೆ.
ಸದ್ಯ ಈ ಘಟನೆ ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv