ಆಸ್ಪತ್ರೆಯಿಂದ ಪೇಜಾವರ ಶ್ರೀ ಡಿಸ್ಚಾರ್ಜ್-ವೈದ್ಯರು ಶ್ರೀಗಳಿಗೆ ಸೂಚಿಸಿದ್ದು ಏನು?

Public TV
1 Min Read
pejawar shree 3

ಉಡುಪಿ: ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿಗಳು ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೆಎಂಸಿ ಆಸ್ಪತ್ರೆಗೆ ಭಾನುವಾರ ದಾಖಲಾಗಿ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸ್ವಾಮೀಜಿ ಅವರಿಗೆ ಆಪರೇಷನ್ ಮಾಡಲಾಗಿತ್ತು. ಮೂರು ದಿನಗಳ ಕಾಲ ಆಸ್ಪತ್ರೆಯಲ್ಲೆ ವಿಶ್ರಾಂತಿ ಪಡೆದ ಸ್ವಾಮೀಜಿ ಇಂದು ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದಾರೆ.

ಶಿಷ್ಯಂದಿರ ಜೊತೆ ಕಾರಿನಲ್ಲಿ ಆಗಮಿಸಿದ ಸ್ವಾಮೀಜಿ ಮಠದ ಬಡಗು ಮಾಳಿಗೆಯ ಪಕ್ಕದ ಗೆಸ್ಟ್ ಹೌಸಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಆರೋಗ್ಯವಾಗಿದ್ದೇನೆ. ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ನನ್ನನ್ನು ಚೆನ್ನಾಗಿ ನೋಡಿಕೊಂಡರು. ಹೆಚ್ಚು ಮಾತನಾಡಬಾರದೆಂದು ವೈದ್ಯರು ಸೂಚನೆ ನೀಡಿದ್ದಾರೆ. ಸೋಮವಾರದ ನಂತರ ಮಾತನಾಡಬಹುದು ಎಂದು ಸಲಹೆ ನೀಡಿದ್ದಾರೆ ಎಂದು ಹೇಳಿದರು.

pejawar shree 2

ಸ್ವಾಮೀಜಿ ಆಪ್ತ ಸಹಾಯಕ, ವಿಷ್ಣು ಮಾತನಾಡಿ, ಇನ್ಫೆಕ್ಷನ್ ಆಗುವ ಸಾಧ್ಯತೆಯಿರುವುದರಿಂದ ಒಂದು ವಾರಗಳ ಕಾಲ ಸ್ವಾಮೀಜಿ ಭಕ್ತರನ್ನು ಕೂಡಾ ಭೇಟಿಯಾಗುವುದಿಲ್ಲ. ಎರಡು ದಿನಕ್ಕೊಮ್ಮೆ ಕೆಎಂಸಿ ವೈದ್ಯರೇ ಮಠಕ್ಕೆ ಆಗಮಿಸಿ ಸ್ವಾಮೀಜಿಯ ಆರೋಗ್ಯ ತಪಾಸಣೆ ಮಾಡಲಿದ್ದಾರೆ ಎಂದು ಹೇಳಿದರು.

ಇಂದು ಸಂಜೆಯ ಮಹಾಪೂಜೆಯಲ್ಲಿ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ. ಗಂಜಿ ಮತ್ತು ಹಾಲು ಸೇವನೆ ಮಾಡಲು ವೈದ್ಯರು ಸಲಹೆ ನೀಡಿದ್ದಾರೆ. ಆಪರೇಷನ್ ನಂತರ ಎರಡು ಬಗೆಯ ಮಾತ್ರೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.

 

Share This Article
Leave a Comment

Leave a Reply

Your email address will not be published. Required fields are marked *