Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮಮಂದಿರಕ್ಕೆ ಉಡುಪಿಯಲ್ಲಿ ಮುಹೂರ್ತ!?- ಪೇಜಾವರಶ್ರೀ ಹೇಳಿದ್ದಿಷ್ಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಮಮಂದಿರಕ್ಕೆ ಉಡುಪಿಯಲ್ಲಿ ಮುಹೂರ್ತ!?- ಪೇಜಾವರಶ್ರೀ ಹೇಳಿದ್ದಿಷ್ಟು

Districts

ರಾಮಮಂದಿರಕ್ಕೆ ಉಡುಪಿಯಲ್ಲಿ ಮುಹೂರ್ತ!?- ಪೇಜಾವರಶ್ರೀ ಹೇಳಿದ್ದಿಷ್ಟು

Public TV
Last updated: June 27, 2017 4:15 pm
Public TV
Share
2 Min Read
udp sakshi maharaj 5
SHARE

ಉಡುಪಿ: ಬಹು ಚರ್ಚಿತ ಮತ್ತು ಬಹು ನಿರೀಕ್ಷೆಯ ರಾಮಮಂದಿರ ನಿರ್ಮಾಣ ವಿಚಾರ ಚುರುಕುಗೊಂಡಿದೆ. ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಪೇಜಾವರಶ್ರೀಗಳ ಜೊತೆ ಚರ್ಚೆ ಮಾಡಿದ್ದಾರೆ. ನವೆಂಬರ್ ತಿಂಗಳ ಸಂತ ಸಮಾವೇಶದಲ್ಲಿ ರಾಮಮಂದಿರದ ನಿರ್ಮಾಣದ ಮಹೂರ್ತ ಫಿಕ್ಸ್ ಆಗಲಿದ್ಯಂತೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಪೇಜಾವರಶ್ರೀ ಮಾತನಾಡಿದ್ದಾರೆ.

udp sakshi maharaj

ಸಂಸದ ಸಾಕ್ಷಿ ಮಹಾರಾಜ್ ಉಡುಪಿ ಶ್ರೀಕೃಷ್ಣಮಠಕ್ಕೆ ಬಂದು ದರ್ಶನ ಪಡೆದಿದ್ದಾರೆ. ಈ ಸಂದರ್ಭ ನನ್ನ ಜೊತೆ ಹಲವು ವಿಚಾರಗಳ ಬಗ್ಗೆ ಮಾತುಕತೆ ಮಾಡಿದ್ದಾರೆ. ರಾಮ ಮಂದಿರ ನಿರ್ಮಾಣ ಕುರಿತು ತನ್ನ ಅಭಿಪ್ರಾಯ ಮಂಡಿಸಿದರು. ನಮ್ಮ ಮೂರನೇ ಪರ್ಯಾಯ ಸಂದರ್ಭ ರಾಮ ಮಂದಿರ ಆವರಣಕ್ಕೆ ಹಾಕಿದ ಬೀಗ ಮುರಿದು ಒಳ ಪ್ರವೇಶ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿದ್ದೆವು. ಆ ಸಂದರ್ಭ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಬೀಗ ತೆಗೆದು ದರ್ಶನಕ್ಕೆ ಅನುವು ಮಾಡಿಕೊಟ್ಟರು. ಈ ಬಾರಿ ನವೆಂಬರ್ ತಿಂಗಳಲ್ಲಿ ಉಡುಪಿ ರಾಜಾಂಗಣದಲ್ಲಿ ವಿಶ್ವ ಸಂತ ಸಮ್ಮೇಳನ ನಡೆಸಲಾಗುವುದು. ಈ ಸಂದರ್ಭ ರಾಮಮಂದಿರ ವಿಚಾರದಲ್ಲಿ ಚರ್ಚೆ ನಡೆಸಿ ಒಂದು ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದರು.

ಸಾಕ್ಷಿ ಮಹಾರಾಜರು ತಮ್ಮ ಸ್ವಂತ ಅಭಿಪ್ರಾಯ ಹೇಳಿದ್ದಾರೆ. ಆದ್ರೆ ಕಮಿಟಿಯೊಂದು ರಚನೆಯಾಗಿ ಅದರಲ್ಲಿ ಈ ವಿಚಾರ ಚರ್ಚೆಯಾಗಬೇಕು. ಚರ್ಚೆಯ ನಂತರ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು. ಇಷ್ಟಕ್ಕೂ ಸಾಕ್ಷಿ ಮಹಾರಾಜ್ ಹಿಂದಿಯಲ್ಲಿ ರಾಮ ಮಂದಿರದ ಬಗ್ಗೆ ಒಂದೆರಡು ಮಾತುಗಳನ್ನು ಹೇಳಿ ನಕ್ಕರು, ನಾನೂ ನಕ್ಕೆ. ಇದಕ್ಕಿಂತ ಹೆಚ್ಚಾಗಿ ಏನೂ ಆಗಿಲ್ಲ ಎಂದು ಪೇಜಾವರ ಶ್ರೀ ಹೇಳಿದರು.

ರಾಮ ಮಂದಿರ ನಿರ್ಮಾಣಕ್ಕೆ ಮುನ್ನ ಕಾನೂನು ಇದೆ, ಸಂವಿಧಾನ ಇದೆ, ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಇದು ತೀರ್ಮಾನ ಆಗಬೇಕಿದೆ. ಉತ್ತರ ಪ್ರದೇಶದ ವಿಧಾನಸಭೆಯಲ್ಲಿ ರಾಮ ಮಂದಿರಕ್ಕೆ ಅಸ್ತು ಸಿಗಬಹುದು. ಆದ್ರೆ ಅದಕ್ಕೂ ಮೊದಲು ಬೇರೆಲ್ಲಾ ಕಾನೂನಾತ್ಮಕ ನಿರ್ಣಯಗಳು ಆಗಬೇಕಿದೆ ಎಂದು ಹೇಳಿದರು. ನವೆಂಬರ್ ತಿಂಗಳಲ್ಲಿ ಉಡುಪಿಯಲ್ಲಿ ನಡೆಯುವ ಸಂತ ಸಮಾವೇಶದಲ್ಲಿ ಈ ಬಗ್ಗೆ ಒಂದು ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆಯಿದೆ ಎಂದು ಹೇಳಿದರು.

udp sakshi maharaj 2

ಶಾಂತನಾಗಿ ಎಲ್ಲವನ್ನೂ ನೋಡುತ್ತಿದ್ದೇನೆ: ಉಡುಪಿ ಶ್ರೀಕೃಷ್ಣಮಠದಲ್ಲಿ ನಡೆದ ಇಫ್ತಾರ್ ಕೂಟಕ್ಕೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿರೋ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಪೇಜಾವರ ಸ್ವಾಮೀಜಿ, ಜಸ್ಟ್ ವೈಯ್ಟ್ ಆಂಡ್ ಸೀ ಎಂದಿದ್ದಾರೆ. ಮುಂದೆನಾಗುತ್ತದೆ ಎಂಬುದರ ಬಗ್ಗೆ ಕಾದು ನೋಡುತ್ತೇವೆ. ಯಾವ ರೀತಿಯ ಪ್ರತಿಭಟನೆ ನಡೆಸುತ್ತಾರೆ ಗೊತ್ತಿಲ್ಲ. ನಾನಂತೂ ಶಾಂತವಾಗಿಯೇ ಇದ್ದೇನೆ. ನನ್ನ ಕೆಲಸವನ್ನು ನಾನು ಮಾಡಿದ್ದೇನೆ ಎಂದಿದ್ದಾರೆ.

ಪ್ರಮೋದ್ ಮುತಾಲಿಕ್ ಅವರ ಜೊತೆ ನೆನ್ನೆ ಬಹಳ ಹೊತ್ತು ಮಾತನಾಡಿದ್ದೇನೆ. ಇರುವ ಎಲ್ಲಾ ವಿಚಾರಗಳ ಚರ್ಚೆ ನಡೆಸಿದ್ದೇನೆ. ಆದ್ರೆ ಯಾವುದಕ್ಕೂ ಮುತಾಲಿಕ್ ಕನ್ವಿನ್ಸ್ ಆಗಿಲ್ಲ. ಮಠದ ಪರ್ಯಾಯದ ಸಂದರ್ಭದಲ್ಲಿ ಬಹಳ ಮುಸ್ಲಿಮರು ದುಡಿದಿದ್ದಾರೆ. ಹೊರೆ ಕಾಣಿಕೆ ನೀಡಿದ್ದಾರೆ. ಮೆರವಣಿಗೆ ಸಾಗುವಾಗೆಲ್ಲಾ ಮಜ್ಜಿಗೆ ವಿತರಿಸಿದ್ದಾರೆ. ಉಡುಪಿ ಚಲೋ ಕಾರ್ಯಕ್ರಮ ಸಂದರ್ಭ ಕೃಷ್ಣಮಠಕ್ಕೆ ಮುತ್ತಿಗೆ ಹಾಕಲು ಡೇಟ್ ಫಿಕ್ಸಾದಾಗ ನನಗೆ ಮುಸ್ಲಿಮರು ಬೆಂಬಲ ನೀಡಿದ್ದಾರೆ. ಇಷ್ಟೆಲ್ಲಾ ಮಾಡಿದವರಿಗೆ ನಾನು ಔತಣ ನೀಡಿದ್ದೇನೆ. ಉಪಹಾರಕ್ಕೆ ಮೊದಲು ನಮಾಜ್ ಮಾಡಬೇಕೆಂದು ಸಂಪ್ರದಾಯವಿದೆ ಎಂದು ಹೇಳಿದರು. ಹೀಗಾಗಿ ಛತ್ರದಲ್ಲಿ ನಮಾಜ್ ಮಾಡಿದರು ಎಂದು ಸ್ಪಷ್ಟನೆ ನೀಡಿದರು.

ನನ್ನ ಮನಸ್ಸಿನಲ್ಲಿರುವ ಎಲ್ಲಾ ಅಭಿಪ್ರಾಯವನ್ನು ಸರಿಯಾಗಿ ತಿಳಿಸಿದ್ದೇನೆ. ಅವರಿಗೆ ಅದು ಒಪ್ಪಿಗೆ ಆಗದಿದ್ದರೆ ನಾನೇನು ಮಾಡಲಿ? ಏನಾಗುತ್ತೆ ಮುಂದೆ ನೋಡೋಣ ಅಂತ ಹೇಳಿದರು.

udp sakshi maharaj 1

udp sakshi maharaj 3

udp sakshi maharaj 4

TAGGED:Public TVrama mandirSakshi Maharajsri krishna mataudupiಉಡುಪಿಕೃಷ್ಣಮಠಪಬ್ಲಿಕ್ ಟಿವಿರಾಮಮಂದಿರಸಾಕ್ಷಿ ಮಹಾರಾಜ್
Share This Article
Facebook Whatsapp Whatsapp Telegram

Cinema news

ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories

You Might Also Like

Chalavadi narayanaswamy
Bengaluru City

ಮೀಸಲಾತಿ ಅನ್ವಯವಾಗದ ಹುದ್ದೆಗಳನ್ನು ಜನರಲ್ ಎಸ್‌ಸಿ ಎಂದು ಕರೆದರೆ ಅದು ಒಳಮೀಸಲಾತಿ ಹೇಗೆ ಆಗುತ್ತೆ: ಛಲವಾದಿ ಕಿಡಿ

Public TV
By Public TV
6 minutes ago
CET Exam Staff who cut Janavara and threw it dustbin Chikkaballapura
Chikkaballapur

CET Exam| ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದ ಸಿಬ್ಬಂದಿ

Public TV
By Public TV
36 minutes ago
Delhi Capitals Net Bowler Sahil Parakh injured
Cricket

ಪ್ರಾಕ್ಟೀಸ್ ವೇಳೆ ಚೆಂಡು ಬಡಿದು ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ ಗಂಭೀರ ಗಾಯ – ಆಸ್ಪತ್ರೆಗೆ ರವಾನೆ

Public TV
By Public TV
54 minutes ago
Vinay Kulkarni 1 1
Bengaluru City

ಯೋಗೇಶ್ ಗೌಡ ಕೊಲೆ ಕೇಸ್ – ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

Public TV
By Public TV
1 hour ago
Mallikarjun Kharge DK Shivakumar DK Suresh
Bengaluru City

ದೆಹಲಿ ಅಂಗಳದಲ್ಲಿ ಡಿಕೆ ಬ್ರದರ್ಸ್ ಪವರ್ ಗೇಮ್ – ಹೈಕಮಾಂಡ್ ಮುಂದೆ 2 ದಿನ, 2 ಭೇಟಿ, 2 ಖಡಕ್ ಷರತ್ತು!

Public TV
By Public TV
2 hours ago
HR Ranganath
Bengaluru City

AI ಕಾಲದಲ್ಲಿ ನಾಳೆ ಏನಾಗುತ್ತೆ ಅಂತ ಹೇಳೋದೇ ಕಷ್ಟ, ಜೋತಿಷ್ಯಿಗಳಂತೆ ಭವಿಷ್ಯವನ್ನು ಊಹೆ ಮಾಡ್ಬೇಕು: ಹೆಚ್.ಆರ್ ರಂಗನಾಥ್

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?