ಮಳೆ ಬಂದಾಗ ಅಂಡರ್‌ಪಾಸ್‌ನಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿದರೆ ದಂಡ

Public TV
1 Min Read
Bengaluru underpass during rain 1

ಬೆಂಗಳೂರು: ಮಳೆ ಬಂದರೆ ಅಂಡರ್‌ಪಾಸ್‌ನಲ್ಲಿ ಸವಾರರು ದ್ವಿಚಕ್ರ ವಾಹನ ನಿಲ್ಲಿಸಿದರೆ ಇನ್ನು ಮುಂದೆ ದಂಡ ಕಟ್ಟಬೇಕಾಗುತ್ತದೆ.

ಹೌದು. ಒಂದು ವೇಳೆ ವಾಹನ ಏನಾದರೂ ನಿಲ್ಲಿಸಿದರೆ ಸಂಚಾರಿ ಪೊಲೀಸರು ದಂಡ ಹಾಕಲಿದ್ದಾರೆ. ಅಂಡರ್ ಪಾಸ್‌ನಲ್ಲಿ ವಾಹನ ನಿಲ್ಲಿಸುವುದರಿಂದ ಹಿಂಬದಿಯಿಂದ ಬರುವ ವಾಹನ ಅಪಘಾತ ಸಂಭವಿಸಿದೆ. ಒಟ್ಟು 3 ಕಡೆ ಈ ರೀತಿಯ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: ಮೈಸೂರಿನಲ್ಲಿ ಹಂದಿಜ್ವರಕ್ಕೆ ತುಂಬು ಗರ್ಭಿಣಿ ಬಲಿ

Bengaluru underpass during rain 2

ಈ ಅಪಘಾತವನ್ನು ತಡೆಯುವ ಉದ್ದೇಶದಿಂದ ಪೊಲೀಸರು ದಂಡ ಪ್ರಯೋಗಕ್ಕೆ ಮುಂದಾಗಿದ್ದಾರೆ. ಸಂಚಾರಿ ಪೊಲೀಸರ ಕ್ರಮವನ್ನು ಸಚಿವ ಸೋಮಣ್ಣ ಸಮರ್ಥನೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಅಂಡರ್‌ಪಾಸ್‌ನಲ್ಲಿ ದ್ವಿಚಕ್ರ ವಾಹನ ನಿಲ್ಲಿಸುತ್ತಿದ್ದಾರೆ. ಭಾರೀ ಸಂಖ್ಯೆಯಲ್ಲಿ ಬೈಕ್‌/ ಸ್ಕೂಟರ್‌ಗಳು ನಿಲ್ಲುವುದರಿಂದ ಇತರೇ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಈ ಸಂಬಂಧ ದೂರು ಬಂದ ಹಿನ್ನೆಲೆಯಲ್ಲಿ ಈಗ ಸಂಚಾರಿ ಪೊಲೀಸರು ದಂಡ ಹಾಕಲು ಮುಂದಾಗಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *