ಬೆಂಗಳೂರು: ಅರ್ಹತೆ ಇಲ್ಲದೇ ಬಿಪಿಎಲ್ ಕಾರ್ಡ್ (BPL Card) ಪಡೆದಿರುವವರ ಮೇಲೆ ದಂಡ ಪ್ರಯೋಗಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಆಹಾರ ಸಚಿವ ಮುನಿಯಪ್ಪ (KH Muniyappa) ಮಾಹಿತಿ ನೀಡಿದ್ದು, ಅರ್ಹತೆ ಇಲ್ಲದೇ ಇರೋರು ಬಿಪಿಎಲ್ ಕಾರ್ಡ್ ವಾಪಸ್ ಮಾಡಿ ಎಂದು ಕರೆ ಕೊಟ್ಟಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅರ್ಹತೆ ಇಲ್ಲದೇ ಇರೋರು ಸಾಕಷ್ಟು ಜನ ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ಇವರಿಗೆ ಕಾರ್ಡ್ ವಾಪಸ್ ಕೊಡಲು ಮನವಿ ಮಾಡುತ್ತೇವೆ. ಈ ಸಂಬಂಧ ಇನ್ನೊಂದು ವಾರದಲ್ಲಿ ಜಾಹೀರಾತು ಹೊರಡಿಸುತ್ತೇವೆ. ಮನವಿ ಮಾಡಿದ ಮೇಲೂ ಕಾರ್ಡ್ ವಾಪಸ್ ಕೊಡದೇ ಹೋದರೆ ಬಳಿಕ ದಂಡ ಪ್ರಯೋಗ ಮಾಡುವ ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಮುಡಾ ಕೇಸ್ನಲ್ಲಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಸಿಗಲಿದೆ: ಪರೋಕ್ಷ ಸುಳಿವು ಕೊಟ್ಟ ಕುಮಾರಸ್ವಾಮಿ
ಕಾನೂನಿನಲ್ಲಿ ಅವಕಾಶ ಇರುವ ದಂಡ ಪ್ರಯೋಗ ಮಾಡೋದಾಗಿ ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಡ್ ಪರಿಶೀಲನೆ ಪ್ರಾರಂಭ ಮಾಡಲಾಗುತ್ತದೆ. ಮನವಿ ಬಳಿಕವೂ ಕಾರ್ಡ್ ವಾಪಸ್ ಕೊಡದೇ ಹೋದರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪರಿಶೀಲನೆ ಮಾಡಿದ ಬಳಿಕ ಸಿಕ್ಕಿ ಹಾಕಿಕೊಂಡರೆ ದಂಡ ಪ್ರಯೋಗ ಮಾಡೋದಾಗಿ ಸಚಿವರು ಎಚ್ಚರಿಕೆ ನೀಡಿದ್ದಾರೆ. ಇದೇವೇಳೆ ಬಿಪಿಎಲ್ ಕಾರ್ಡ್ ಮಾನದಂಡಗಳನ್ನು ಪರಿಷ್ಕರಣೆ ಮಾಡೋ ಬಗ್ಗೆ ವಿಚಾರ ಮಾಡಿ, ಕ್ಯಾಬಿನೆಟ್ನಲ್ಲಿ ಈ ಬಗ್ಗೆ ನಿರ್ಧಾರ ಮಾಡೋದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು| ಜೆಸಿಬಿ ಹರಿದು 2 ವರ್ಷದ ಮಗು ಸಾವು