Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಾಲುಕ್ಯ ಉತ್ಸವ ಪರಂಪರೆಗೆ ನಾಂದಿ ಹಾಡಿದ ಪಟ್ಟದಕಲ್ಲು- ಕ್ಷೇತ್ರದ ಶಾಸಕ ಸಿದ್ದರಾಮಯ್ಯನವರಿಗಿಲ್ಲ ಆಸಕ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಚಾಲುಕ್ಯ ಉತ್ಸವ ಪರಂಪರೆಗೆ ನಾಂದಿ ಹಾಡಿದ ಪಟ್ಟದಕಲ್ಲು- ಕ್ಷೇತ್ರದ ಶಾಸಕ ಸಿದ್ದರಾಮಯ್ಯನವರಿಗಿಲ್ಲ ಆಸಕ್ತಿ

Bagalkot

ಚಾಲುಕ್ಯ ಉತ್ಸವ ಪರಂಪರೆಗೆ ನಾಂದಿ ಹಾಡಿದ ಪಟ್ಟದಕಲ್ಲು- ಕ್ಷೇತ್ರದ ಶಾಸಕ ಸಿದ್ದರಾಮಯ್ಯನವರಿಗಿಲ್ಲ ಆಸಕ್ತಿ

Public TV
Last updated: December 8, 2018 9:19 am
Public TV
Share
3 Min Read
bgk chalukya ustyava kirik 3
SHARE

ಬಾಗಲಕೋಟೆ: ಪಾರಂಪರಿಕವಾಗಿ ನಡೆಸಿಕೊಂಡು ಬಂದಿದ್ದ ಚಾಲುಕ್ಯ ಉತ್ಸವಕ್ಕೆ ಕಳೆದ ನಾಲ್ಕು ವರ್ಷದಿಂದ ಗರ ಬಡಿದಂತಾಗಿದೆ. ಈ ಕುರಿತು ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಅವರಿಗೆ ಆಸಕ್ತಿಯಿಲ್ಲ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.

ಗೋದಾವರಿಯಿಂದ ನರ್ಮದಾ ನದಿವರೆಗೆ ಕನ್ನಡ ರಾಜ್ಯವನ್ನು ವಿಸ್ತರಿಸಿದ ಕೀರ್ತಿ ಬಾದಾಮಿ ಚಾಲುಕ್ಯರಿಗೆ ಸಲ್ಲುತ್ತದೆ. ಕನ್ನಡಿಗರ ಕೀರ್ತಿ ಪತಾಕೆಯನ್ನು ವಿಶ್ವವ್ಯಾಪಿ ಹಾರಿಸಿದ ರಾಜ ಮನೆತನಗಳಲ್ಲಿ ಬಾದಾಮಿ ಚಾಲುಕ್ಯರು ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ. ಆದ್ರೆ ಕನ್ನಡಿಗರ ಹೆಮ್ಮೆಯ ಈ ಚಾಲುಕ್ಯರ ಉತ್ಸವ ಇಂದು ಕಣ್ಮರೆಯಾಗ್ತಿದೆ. ದಸರಾ ಬಳಿಕ ರಾಜ್ಯದಲ್ಲಿ ಚಾಲುಕ್ಯ ಉತ್ಸವಕ್ಕೆ ನಾಂದಿ ಹಾಡಲಾಗಿತ್ತು. ಆದರೆ ಕಳೆದ ನಾಲ್ಕು ವರ್ಷದಿಂದ ಚಾಲುಕ್ಯ ಉತ್ಸವಕ್ಕೆ ಗರ ಬಡಿದಂತಾಗಿದೆ.

bgk chalukya ustava kirik 4

ಅಖಂಡ ವಿಜಯಪುರ ಜಿಲ್ಲೆ ಇದ್ದಾಗ 1986ರಲ್ಲಿ ಪಟ್ಟದಕಲ್ಲು ರಾಷ್ಟ್ರೀಯ ಉತ್ಸವ ಅಂತ ಆರಂಭವಾಗಿತ್ತು. ಪ್ರಾರಂಭದ ಐದಾರು ವರ್ಷಗಳು ಅದೇ ಮೆರುಗು, ಉತ್ಸವ ಕಣ್ತುಂಬಿಕೊಳ್ಳಲು ನಾಡಿನ ಮೂಲೆ ಮೂಲೆಯಿಂದ ಲಕ್ಷಾಂತರ ಜನರು ಹರಿದು ಬರುತ್ತಿದ್ದರು. ದೊಡ್ಡ ಕಲಾವಿದರು, ರಾಜಕೀಯ ಮುಖಂಡರು ಸೇರಿ ವಿವಿಧ ಕ್ಷೇತ್ರಗಳ ಗಣ್ಯರು ಸೇರಿ ಶ್ರೀಸಾಮಾನ್ಯರು ಉತ್ಸವದಲ್ಲಿ ಭಾಗಿ ಆಗಿರುತ್ತಿದ್ದರು. ಆದರೆ, ನಂತರದಲ್ಲಿ ಸರ್ಕಾರದ ನಿರ್ಲಕ್ಷ್ಯ ಧೋರಣೆಗೆ ಸಿಕ್ಕಿ ರಾಷ್ಟ್ರೀಯ ಉತ್ಸವ ಜಿಲ್ಲಾ ಉತ್ಸವವಾಗಿದ್ದು, ಇದೀಗ ಅದೂ ಸಹ ಇಲ್ಲ ಎನ್ನುವಂತಾಗಿರುವುದು ವಿಪರ್ಯಾಸವಾಗಿದೆ.

BGK chalukya ustava kirik1

ಸದ್ಯ ಬಾಗಲಕೋಟೆ ಜಿಲ್ಲೆ ಪ್ರತಿ ವರ್ಷ ಅತಿವೃಷ್ಠಿ ಇಲ್ಲವೇ ಅನಾವೃಷ್ಠಿಗೆ ಸಿಲುಕುವುದು ಸಾಮಾನ್ಯವಾಗಿದೆ. ಹಾಗೆಂದು ಜಿಲ್ಲೆಯಲ್ಲಿ ನಡೆಯುವ ಯಾವುದೇ ಸರ್ಕಾರಿ ಕಾರ್ಯಕ್ರಮಗಳು ನಿಲ್ಲುವುದಿಲ್ಲ. ಆದರೆ, ಚಾಲುಕ್ಯ ಉತ್ಸವಕ್ಕೆ ಮಾತ್ರ ಅದನ್ನು ತೋರಿಸುತ್ತಾ ಬರಲಾಗುತ್ತಿದೆ. ಈ ವರ್ಷವೂ ಸಹ ಅದೇ `ಬರ’ ಉತ್ಸವಕ್ಕೆ ಗರ ಹಿಡಿಯುವ ಸಾಧ್ಯತೆ ಇದ್ದು, ಈವರೆಗೂ ಚಾಲುಕ್ಯ ಉತ್ಸವ ನಡೆಸುವ ಬಗ್ಗೆ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಅವರಾಗಲಿ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರಾಗಲಿ ತುಟಿಪಿಟಿಕ್ ಎಂದಿಲ್ಲ. ಇತ್ತ ವಿಪಕ್ಷಗಳು ಸಹ ಆ ಬಗ್ಗೆ ಚಕಾರ ಎತ್ತುತ್ತಿಲ್ಲ. ಇದರಿಂದ ಚಾಲುಕ್ಯ ಉತ್ಸವಕ್ಕೆ ಮತ್ತೊಮ್ಮೆ ಕರಿನೆರಳು ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಈ ಕುರಿತು ಕ್ಷೇತ್ರದ ಶಾಸಕರಾಗಿರುವ ಸಿದ್ದರಾಮಯ್ಯ ಅವ್ರನ್ನ ಕೇಳಿದ್ರೆ ಗೊತ್ತಿಲ್ಲಪ್ಪಾ.. ಸರ್ಕಾರದಲ್ಲಿ ನಾನಿದಿನೇನ್ರಿ.. ಆ ಬಗ್ಗೆ ಮಾತಾಡಬೇಕು ಅಂತ ಹಗುರವಾಗಿ ಪ್ರತಿಕ್ರಿಯಿಸುತ್ತಾರೆ ಅಂತ ಸ್ಥಳೀಯರು ತಿಳಿಸಿದ್ದಾರೆ.

BGK chlukya ustava kirik 2

2009 ರಿಂದ 2018ರ ಈ ಹತ್ತು ವರ್ಷಗಳ ಅವಧಿಯಲ್ಲಿ ಚಾಲುಕ್ಯ ಉತ್ಸವ ಅಂತ ನಡೆದಿದ್ದು ಮೂರು ಬಾರಿ ಮಾತ್ರ. 2010 ರ ಉತ್ಸವನ್ನು 2011ರ ಫೆಬ್ರವರಿಯಲ್ಲಿ ನಡೆಸಿದರು. ಹಾಗೆಯೇ 2013 ಮತ್ತು 2014ನೇ ಸಾಲಿನ ಉತ್ಸವಗಳನ್ನು ಕ್ರಮವಾಗಿ 14 ಮತ್ತು 15-ಫಬ್ರವರಿ ತಿಂಗಳಲ್ಲಿ ನಡೆಸಲಾಗಿದೆ. ಉಳಿದಂತೆ ಏಳು ವರ್ಷ ಚಾಲುಕ್ಯ ವೈಭವವನ್ನು ಆಚರಿಸಿಯೇ ಇಲ್ಲ. ಇದೀಗ 2015ರಿಂದ ಈ ನಾಲ್ಕು ವರ್ಷ ಉತ್ಸವದ ಬಗ್ಗೆ ಯಾರೊಬ್ಬರೂ ಮಾತನಾಡುತ್ತಿಲ್ಲ.

ಇನ್ನೂ ಅಚ್ಚರಿಯ ವಿಷಯ ಎಂದರೆ ಈ ಹತ್ತು ವರ್ಷದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದು ಇದೇ ಬಾಗಲಕೋಟೆ ಜಿಲ್ಲೆಯ ಶಾಸಕರು. ಬಿಜೆಪಿ ಸರ್ಕಾರದಲ್ಲಿ ಗೋವಿಂದ ಕಾರಜೋಳ ಹಾಗೂ ಕಾಂಗ್ರೆಸ್ ಸರ್ಕಾರದಲ್ಲಿ ಉಮಾಶ್ರೀ ಸಚಿವರಾಗಿದ್ದರು. ಈ ಇಬ್ಬರೂ ರಾಜ್ಯದ ವಿವಿಧೆಡೆ ನಡೆಯುವ ಉತ್ಸವಗಳಲ್ಲಿ ಭಾಗವಹಿಸಿ ಬರುತ್ತಿದ್ದರೂ ತಮ್ಮದೇ ಜಿಲ್ಲೆಯಲ್ಲಿ ಸೊರಗಿ ಹೋಗುತ್ತಿರುವ ಚಾಲುಕ್ಯ ಉತ್ಸವದ ಕಡೆಗೆ ಹೆಚ್ಚು ಗಮನ ಕೊಡಲಿಲ್ಲ ಎನ್ನುವ ಅಪವಾದಗಳೂ ಇವೆ. ಇನ್ನು ಮೈಸೂರು ದಸರಾ ನಡೆಸುವ ಸರ್ಕಾರಕ್ಕೆ ಬರ ಎದುರಾಗಲ್ಲ. ಆದ್ರೆ ಚಾಲುಕ್ಯ ಮತ್ತು ಹಂಪಿ ಉತ್ಸವಗಳನ್ನು ಬಂದಾಗ ಸರ್ಕಾರಕ್ಕೆ ದಿಢೀರನೆ ಬರದ ಛಾಯೆ ಎದುರಾಗುತ್ತೆ. ಇದಕ್ಕೆಲ್ಲ ನಮ್ಮಲ್ಲಿನ ರಾಜಕೀಯ ಮುಖಂಡರ ಇಚ್ಛಾಶಕ್ತಿ ಕೊರತೆ ಇದೆ. ಸಿದ್ದರಾಮಯ್ಯ ಬಾದಾಮಿ ಶಾಸಕರಾದರೂ ಉತ್ಸವ ಬಗ್ಗೆ ನಿರಾಸಕ್ತಿ ತೋರಿಸುತ್ತಿದ್ದು, ಏನೇ ಆಗಲಿ ಚಾಲುಕ್ಯ ಉತ್ಸವ ಈ ಬಾರಿ ನಡೆಸಲೇಬೇಕೆಂದು ಆಗ್ರಹ ಮಾಡುತ್ತಿದ್ದಾರೆ.

BGK chalukya utsava kirik

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜಕೀಯ ಪುನರ್ಜನ್ಮ ನೀಡಿದ ಕ್ಷೇತ್ರ ಬಾದಾಮಿ. ಇದೇ ಕ್ಷೇತ್ರದ ಚಾಲುಕ್ಯ ಉತ್ಸವ ಮೆರುಗಿಲ್ಲದೆ ಸೊರಗಿದೆ. ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯ ಮನಸ್ಸು ಮಾಡಿದ್ರೆ ಮತ್ತೆ ಚಾಲುಕ್ಯ ಉತ್ಸವ ಕಳೆಗಟ್ಟುತ್ತೆ ಅನ್ನೋ ನಂಬಿಕೆಯಲ್ಲಿ ಕ್ಷೇತ್ರದ ಜನರಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

Health Minister Dinesh Gundu Rao Defends Using Urdu For Governemnt Invitation
Latest

ಉರ್ದುವಿನಲ್ಲಿ ಸರ್ಕಾರಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿದ್ರೆ ತಪ್ಪೇನು? – ದಿನೇಶ್‌ ಗುಂಡೂರಾವ್‌

Public TV
By Public TV
42 seconds ago
CT RAVI
Latest

ಭರ್ತಿಯಾಗಿದ್ದು 8,157 ಹುದ್ದೆ, 40 ಸಾವಿರ ಎಲ್ಲಿ ಮುಖ್ಯಮಂತ್ರಿಗಳೇ? – ದಾಖಲೆಯೊಂದಿಗೆ ತಿರುಗೇಟು ನೀಡಿದ ಸಿಟಿ ರವಿ

Public TV
By Public TV
51 minutes ago
Supreme Court NCERT
Court

ನ್ಯಾಯಾಂಗಕ್ಕೆ ಕಳಂಕ ತರಲು ಬಿಡಲ್ಲ – NCERT ನ್ಯಾಯಾಂಗ ಭ್ರಷ್ಟಾಚಾರ ಅಧ್ಯಾಯದ ಬಗ್ಗೆ ಸುಪ್ರೀಂ ಗರಂ

Public TV
By Public TV
59 minutes ago
Ranji Trophy Final Hubballi Jammu and Kashmir captain Paras Dogra headbutts Karnataka K V Aneesh
Cricket

Ranji Trophy Final- ರಾಜ್ಯದ ಅನೀಶ್‌ಗೆ ಡಿಚ್ಚಿ ಹೊಡೆದ ಜಮ್ಮು ಕಾಶ್ಮೀರದ ನಾಯಕ

Public TV
By Public TV
1 hour ago
G Parameshwar
Bengaluru City

ದಲಿತ ಸಿಎಂ ಜಟಾಪಟಿ; ನನ್ನ ಸಾಮರ್ಥ್ಯ ಯಾರೂ ಪ್ರಶ್ನೆ ಮಾಡಲು ಆಗಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಪರಮೇಶ್ವರ್

Public TV
By Public TV
2 hours ago
Pradeep Eshwar
Bengaluru City

ಉದ್ಯೋಗಾಂಕ್ಷಿಗಳು ಬಿಜೆಪಿ ಮಾತು ಕೇಳಿ FIR ಹಾಕಿಸಿಕೊಳ್ಳಬೇಡಿ: ಪ್ರದೀಪ್ ಈಶ್ವರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?