ಚಿಕ್ಕಬಳ್ಳಾಪುರ: ಬಸ್ ನಿಲ್ದಾಣದಲ್ಲಿರುವ ಒಂಟಿ ಯುವತಿಯರನ್ನ ಟಾರ್ಗೆಟ್ ಮಾಡಿ ಅನ್ಯಧರ್ಮಕ್ಕೆ ಮತಾಂತರಗೊಳಿಸಲು ಯತ್ನಿಸುತ್ತಿದ್ದ ಮೂವರು ಮಹಿಳೆಯರನ್ನ ಸಾರ್ವಜನಿಕರು ತರಾಟೆಗೆ ತೆಗದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ಇಂದು ನಡೆದಿದೆ.
ಆರೋಪಿಗಳಾದ ಮೂವರು ಮಹಿಳೆಯರನ್ನು ಭಾರತಿ, ನಿರ್ಮಲ ಹಾಗೂ ಐಶ್ವರ್ಯ ಎಂದು ಗುರುತಿಸಲಾಗಿದೆ. ಈ ಮಹಿಳೆಯರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಏಕಾಂಗಿಯಾಗಿರುತ್ತಿದ್ದ ಯುವತಿಯರ ಬಳಿ ಹೋಗಿ ತಮ್ಮ ಧರ್ಮಕ್ಕೆ ಸೇರುವಂತೆ ಮನಪರಿವರ್ತನೆಗೆ ಮುಂದಾಗಿದ್ದರು. ಇದನ್ನ ಕಂಡ ಸ್ಥಳೀಯರು ಮನಪರಿವರ್ತನೆಯ ದೃಶ್ಯವನ್ನ ಮೊಬೈಲ್ ನಲ್ಲಿ ಸೆರೆ ಹಿಡಿದು ತದನಂತರ ಮೂವರು ಮಹಿಳೆಯರನ್ನು ಸುತ್ತುವರಿದು ತರಾಟೆಗೆ ತೆಗೆದುಕೊಂಡಿದ್ದಾರೆ.
ಸದ್ಯ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರ ಪೊಲೀಸರು ಮೂವರು ಮಹಿಳೆಯರನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv