ಬಳ್ಳಾರಿ: ಇತಿಹಾಸ ಪ್ರಸಿದ್ಧ ಕೊಟ್ಟೂರು ಬಸವೇಶ್ವರ ಜಾತ್ರೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿದೆ. ಒಂದೆಡೆ ಮೂಲಾ ನಕ್ಷತದಲ್ಲಿ ಈ ರಥೋತ್ಸವ ಜರಗುವುದು ಜಾತ್ರೆಯ ವಿಶೇಷವಾದರೆ, ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾದಯಾತ್ರೆ ಮೂಲಕ ಆಗಮಿಸಿ ರಥೋತ್ಸವದಲ್ಲಿ ಭಾಗಿಯಾಗುವುದು ಮತ್ತೊಂದು ವಿಶೇಷವಾಗಿತ್ತು.
ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನ ಇತಿಹಾಸ ಪ್ರಸಿದ್ಧ ಕೊಟ್ಟೂರು ಬಸವೇಶ್ವರ ಜಾತ್ರೆ ಈ ಬಾರಿ ಅದ್ಧೂರಿಯಾಗಿ ಜರುಗಿತು. ಪ್ರತಿ ವರ್ಷದಂತೆ ಈ ವರ್ಷವೂ ಸಹ ಜಾತ್ರೆಯಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ಭಕ್ತರು ಭಾಗವಹಿಸಿದ್ದು ವಿಶೇಷವಾಗಿತ್ತು ಎಂದು ಭಕ್ತರು ಹೇಳಿದ್ದಾರೆ.
- Advertisement 2
- Advertisement 3
ಮುಜರಾಯಿ ಸಚಿವ ಪರಮೇಶ್ವರ ನಾಯ್ಕ್, ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ ಸಹ ಪಾದಯಾತ್ರೆ ಮೂಲಕ ಆಗಮಿಸಿ ರಥೋತ್ಸವದಲ್ಲಿ ಭಾಗಿಯಾದ್ದರೂ. ಅಲ್ಲದೆ ಹೊಸ ದಂಪತಿ ರಥೋತ್ಸವದಲ್ಲಿ ಕಳಸ ನೋಡಿದರೆ ವೈವಾಹಿಕ ಜೀವನ ಸುಖಕರವಾಗಿರುತ್ತೆ ಅನ್ನೋ ನಂಬಿಕೆ ಲಕ್ಷಾಂತರ ಭಕ್ತರಲ್ಲಿದೆ.
- Advertisement 4
ಕೊಟ್ಟೂರು ಬಸವೇಶ್ವರ ಸ್ವಾಮಿಗೆ ರಾಜ್ಯ ಸೇರಿದಂತೆ ಹೊರ ರಾಜ್ಯದಲ್ಲೂ ಲಕ್ಷಾಂತರ ಭಕ್ತರಿದ್ದಾರೆ. ಈ ಭಕ್ತರು ಪ್ರತಿ ವರ್ಷ ಜಾತ್ರೆ ಸಂದರ್ಭದಲ್ಲಿ ಪಾದಯಾತ್ರೆ ಮೂಲಕ ಕೊಟ್ಟೂರಿಗೆ ಆಗಮಿಸಿ ಜಾತ್ರೆಯಲ್ಲಿ ಪಾಲ್ಗೊಳ್ಳುವುದು ವಿಶೇಷವಾಗಿದೆ. ಈ ಬಾರಿ ಸುಮಾರು 40 ಸಾವಿರಕ್ಕೂ ಅಧಿಕ ಭಕ್ತರು ಪಾದಯಾತ್ರೆ ಮೂಲಕ ಆಗಮಿಸಿ ರಥೋತ್ಸವದಲ್ಲಿ ಭಾಗಿಯಾಗುವ ಮೂಲಕ ಕೊಟ್ಟೂರೇಶ್ವರನ ದರ್ಶನ ಪಡೆದರು. ಈ ಜಾತ್ರೆಯ ವೇಳೆ ಪಾದಯಾತ್ರೆಯ ಮೂಲಕ ಆಗಮಿಸಿ ಪೂಜೆ ಸಲ್ಲಿಸಿದರೆ ಇಷ್ಟಾರ್ಥ ಸಿದ್ಧಿಯಾಗುತ್ತೆ ಅನ್ನೋ ನಂಬಿಕೆ ಕೂಡ ಲಕ್ಷಾಂತರ ಭಕ್ತರಲ್ಲಿದೆ ಎಂದು ಎಸ್. ಭೀಮಾನಾಯ್ಕ್ ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv