ಬೀದರ್: ಉತ್ತರ ಪ್ರದೇಶದ ಖೇರಿ ಹೈವೆಯಲ್ಲಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ಮೂಲದ 7 ಜನ ಹಾಗೂ ಕಲಬುರಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರು.
ಇಂದು ಅವರ ಮೃತದೇಹಗಳು ಲಕ್ನೋದಿಂದ ಏರ್-ಲಿಫ್ಟ್ ಮಾಡಿ ಹೈದರಾಬಾದ್ಗೆ ತಂದು ಅಲ್ಲಿಂದ ರಸ್ತೆ ಮೂಲಕ 7 ಅಂಬುಲೆನ್ಸ್ಗಳಲ್ಲಿ 4 ಗಂಟೆಗೆ ಬೀದರ್ಗೆ ತರಲಾಯಿತು. ಓರ್ವ ವ್ಯಕ್ತಿಯ ಮೃತದೇಹವನ್ನು ಕಲಬುರಗಿಗೆ ರವಾನೆ ಮಾಡಲಾಯಿತು. ಇದನ್ನೂ ಓದಿ: ಯುಪಿಯಲ್ಲಿ ಬೀದರ್ ಪ್ರವಾಸಿಗರಿಗೆ ಅಪಘಾತ – ಸಂತ್ರಸ್ತರ ನೆರವಿಗೆ ಯೋಗಿ ಜೊತೆ ಬೊಮ್ಮಾಯಿ ಮಾತುಕತೆ
ಮೃತದೇಹಗಳು ಬೀದರ್ಗೆ ಬರುತ್ತಿದ್ದಂತೆ ಗುಂಪಾ ಬಳಿಯ ಅವರ ನಿವಾಸದಲ್ಲಿ ಕುಟುಂಬಸ್ಥರ ಹಾಗೂ ಸ್ಥಳೀಯರು ಆಕ್ರಂದನ ಮುಗಿಲು ಮುಟ್ಟಿತು. ಬಳಿಕ ಬೀದರ್ ತಾಲೂಕಿನ ಸುಲ್ತಾನಪುರ್ದಲ್ಲಿ 6 ಜನರನ್ನು ಲಿಂಗಾಯತ ಸಂಪ್ರದಾಯದಂತೆ ಸುರಿಯುವ ಮಳೆಯ ನಡುವೆ ಅಂತ್ಯಕ್ರಿಯೆ ಮಾಡಿದರು. ಇದನ್ನೂ ಓದಿ: ಯುಪಿಯಲ್ಲಿ ಬೀದರ್ ಟಿಟಿ ಅಪಘಾತ – ಯುವತಿ ಸಾವು, ಸಾವಿನ ಸಂಖ್ಯೆ 8ಕ್ಕೆ ಏರಿಕೆ
ಬೀದರ್ ತಾಲೂಕಿನ ಅಷ್ಟೂರಿನಲ್ಲಿ ಓರ್ವ ವ್ಯಕ್ತಿಯನ್ನು ಅಂತ್ಯಕ್ರಿಯೆ ಮಾಡಲಾಗಿದೆ. ಅಂತ್ಯಕ್ರಿಯೆ ಮಾಡುವ ಸ್ಥಳದಲ್ಲೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಕೇದಾರನಾಥ್, ಭದ್ರಿನಾಥ್, ಅಯೋಧ್ಯೆ ಸೇರಿದಂತೆ ತೀರ್ಥಯಾತ್ರೆಗೆ ಹೋಗಿದ್ದ ಬೀದರ್ ಮೂಲದ 16 ಜನರಲ್ಲಿ 7 ಜನ ಮಸಣ ಸೇರಿದ್ದು ಮಾತ್ರ ದುರಂತವೇ ಸರಿ.