– ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಜಮ್ಮು-ಕಾಶ್ಮೀರದಲ್ಲಿ ಮೊದಲ ಹಬ್ಬ
ಶ್ರೀನಗರ: ದೇಶಾದ್ಯಂತ ಮುಸ್ಲಿಂ (Muslims) ಬಾಂಧವರಿಂದು ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನ ಸಂಕೇತಿಸುವ ಪವಿತ್ರ ಬಕ್ರೀದ್ (Eid Al Adha) ಹಬ್ಬ ಆಚರಿಸುತ್ತಿದ್ದಾರೆ.
#WATCH | Srinagar, J&K | People offer namaz at the Girls Higher Secondary, Palpora Sonwar, on the occasion of Eid Al Adha. pic.twitter.com/kIgOC2H1as
— ANI (@ANI) June 7, 2025
ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶದ ಸಂಭಾಲ್, ಪಾಟ್ನಾದ ಗಾಂಧಿ ಮೈದಾನ, ನವದೆಹಲಿ, ಬೆಂಗಳೂರು ಸೇರಿದಂತೆ ವಿವಿಧೆಡೆ ಶಾಂತಿಯುವಾಗಿ ನಮಾಜ್ ಮಾಡುವ ಮೂಲಕ ಬಕ್ರೀದ್ ಹಬ್ಬ ಆಚರಿಸುತ್ತಿದ್ದಾರೆ. ವಿಶೇಷವೆಂದರೆ ಕೆಲ ದಿನಗಳ ಹಿಂದೆಯಷ್ಟೇ ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಸಂಘರ್ಷಪೀಡಿತವಾಗಿದ್ದ ಜಮ್ಮು-ಕಾಶ್ಮೀರದ ಪಾಲ್ಪೋರಾ (Sonwar) ಸೋನ್ವಾರ್ನ ಬಾಲಕಿಯರ ಪ್ರೌಢಶಾಲೆಯಲ್ಲಿ ಶಾಂತಿಯುತವಾಗಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದ್ದಾರೆ.
#WATCH | Sambhal, UP: People offer namaz on the occasion of Eid Al Adha. pic.twitter.com/lmjPoYcElj
— ANI (@ANI) June 7, 2025
ಬಕ್ರೀದ್ ಹಿನ್ನೆಲೆ ಏನು?
ಪುಣ್ಯ ಸಂಪಾದಿರುವ ರಂಜಾನ್ ತಿಂಗಳ ಉಪವಾಸದ ಬಳಿಕ ‘ಈದ್ ಉಲ್ ಫಿತ್ರ್’ ಹಬ್ಬ ಆಚರಿಸುವುದಾದರೆ, ಇಸ್ಲಾಮಿಕ್ ಕ್ಯಾಲೆಂಡರಿನ ‘ದುಲ್ ಹಜ್’ ತಿಂಗಳ 10ರಂದು ಬಕ್ರೀದ್ ಆಚರಣೆ ನಡೆಯುತ್ತದೆ. 4 ಸಾವಿರ ವರ್ಷಗಳಿಗೂ ಹಿಂದೆ ಹುಟ್ಟಿದ್ದ ಪ್ರವಾದಿ ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸುವುದು ‘ಬಕ್ರೀದ್’ನ ಮುಖ್ಯ ಆಶಯ. ಇಬ್ರಾಹಿಂ ಅವರು ಪ್ರವಾದಿ ಮುಹಮ್ಮದ್ ಅವರಿಗಿಂತ ಎರಡೂವರೆ ಸಾವಿರ ವರ್ಷಗಳ ಹಿಂದೆ ಹುಟ್ಟಿದ್ದರು ಎಂದು ಮುಸ್ಲಿಂ ಬಾಂಧವರ ಪವಿತ್ರ ಗ್ರಂಥಗಳಲ್ಲಿ ಉಲ್ಲೇಖವಾಗಿದೆ. ಇದನ್ನೂ ಓದಿ: ತ್ಯಾಗದ ಪ್ರತೀಕ ʻಬಕ್ರೀದ್ʼ
ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವುದು, ಸೋದರತ್ವ ಬೆಳೆಸಿಕೊಳ್ಳುವುದು, ಅಲ್ಲಾಹುವಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಾಗಬೇಕು ಎಂಬ ಸಂದೇಶವನ್ನು ಈ ಹಬ್ಬ ಸಾರುತ್ತದೆ. ಈ ದಿನ ಮಸೀದಿಗಳಲ್ಲಿ ಸಾಮೂಹಿಕ ಈದ್ ನಮಾಜ್ ಇರುತ್ತದೆ. ಮಕ್ಕಳು, ಹಿರಿಯರು ಹೊಸ ಉಡುಗೆ ತೊಟ್ಟು ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವರು. ನಮಾಜ್ಗೂ ಮುನ್ನ ಕೆಲ ಹೊತ್ತು ‘ತಕ್ಷೀರ್’ ಮೊಳಗಿಸಲಾಗುತ್ತದೆ. ಇದನ್ನೂ ಓದಿ: ಈಗ ನಾನು ಇದ್ದಿದ್ರೆ ಕೆ.ಎಲ್.ರಾಹುಲ್ನ ಆರ್ಸಿಬಿಗೆ ಖರೀದಿ ಮಾಡ್ತಿದ್ದೆ: ವಿಜಯ್ ಮಲ್ಯ
#WATCH | People offered namaz at Gandhi Maidan in Patna, Bihar, on the occasion of Eid Al Adha. pic.twitter.com/tBnqgZiEEP
— ANI (@ANI) June 7, 2025
ಮನೆ ಮನೆಗಳಲ್ಲಿ ಹಬ್ಬದೂಟ:
ಮನೆಗಳಲ್ಲಿ ಹಬ್ಬದ ಊಟ, ವಿಶೇಷ ಖಾದ್ಯಗಳನ್ನು ತಯಾರಿಸುವರು. ಗೆಳೆಯರು, ಬಂಧುಗಳನ್ನು ಆಹ್ವಾನಿಸಿ ಜೊತೆಯಾಗಿ ಊಟ ಮಾಡಿ, ಸಂಭ್ರಮ ಹಂಚಿಕೊಳ್ಳುವರು. ಹಬ್ಬದ ದಿನ ದಾನವಾಗಿ ದೊರೆಯುವ ಮಾಂಸ, ಹಣ, ದಿನಸಿ ಸಾಮಗ್ರಿಗಳಿಂದ ಎಷ್ಟೋ ಬಡಕುಟುಂಬಗಳಿಗೂ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ಕಲ್ಪಿಸುತ್ತದೆ. ಇದನ್ನೂ ಓದಿ: Stampede Case | ಡಿಸಿ ನೇತೃತ್ವದ ತನಿಖೆ ಚುರುಕು – 25ಕ್ಕೂ ಹೆಚ್ಚು ಗಾಯಾಳುಗಳಿಗೆ ನೋಟಿಸ್, ಜೂ.11ಕ್ಕೆ ವಿಚಾರಣೆ
ಜಾನುವಾರು ಬಲಿ ನೀಡುವ ಆಚರಣೆ:
ಜಾನುವಾರುಗಳನ್ನು ಬಲಿ ಕೊಡುವುದು ಸಹ ‘ಬಕ್ರೀದ್’ನ ಪ್ರಮುಖ ಆಚರಣೆಯಾಗಿದೆ. ಪ್ರವಾದಿ ಇಬ್ರಾಹಿಂ ಅವರ ಜೀವನದಲ್ಲಿ ನಡೆದಿದ್ದ ಘಟನೆಯೊಂದರ ನೆನಪಿನಲ್ಲಿ ಜಾನುವಾರು ಬಲಿ ನೀಡಲಾಗುತ್ತದೆ. ಇದಕ್ಕೆ ಒಂದು ಹಿನ್ನೆಲೆಯೂ ಇದೆ.
ಅಲ್ಲಾಹುನ ಆದೇಶದಂತೆ ಇಬ್ರಾಹಿಂ, ತಮ್ಮ ಪುತ್ರ ಇಸ್ಮಾಯಿಲ್ ಅವರನ್ನು ಬಲಿಯರ್ಪಿಸಲು ಮುಂದಾಗುವರು. ತಮ್ಮ ಮಗನನ್ನೇ ಬಲಿ ನೀಡಲು ಸಿದ್ಧವಾಗಿದ್ದ ಇಬ್ರಾಹಿಂ ಅವರ ಭಕ್ತಿಯನ್ನು ಅಲ್ಲಾಹನು ಮೆಚ್ಚಿ ಪುತ್ರನ ಬದಲು ಒಂದು ಟಗರನ್ನು ಬಲಿಯರ್ಪಿಸುವಂತೆ ಸೂಚಿಸುತ್ತಾರೆ. ಇದು ತಮ್ಮ ಧರ್ಮಗ್ರಂಥಗಳಲ್ಲೂ ಉಲ್ಲೇಖವಾಗಿದೆ ಎಂದು ಮುಸ್ಲಿಂ ಧರ್ಮಗುರುಗಳು ಹೇಳಿದ್ದಾರೆ.
ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸಲು ಹಬ್ಬದ ದಿನ ಜಾನುವಾರು ಬಲಿ ಅರ್ಪಿಸಲಾಗುತ್ತದೆ. ಆರ್ಥಿಕವಾಗಿ ಸಬಲರಾಗಿರುವ ಎಲ್ಲರೂ ಪ್ರಾಣಿಬಲಿ ನೀಡಬೇಕು. ಪ್ರಾಣಿಯಿಂದ ಲಭಿಸಿದ ಮಾಂಸವನ್ನು ಸಮನಾಗಿ ಮೂರು ಪಾಲು ಮಾಡಬೇಕು. ಅದರಲ್ಲಿ ಒಂದು ಭಾಗವನ್ನು ಸ್ವತಃ ಬಳಸಿಕೊಳ್ಳಬಹುದು. ಇನ್ನೆರಡು ಪಾಲುಗಳನ್ನು ಸಂಬಂಧಿಕರು ಹಾಗೂ ಬಡವರಿಗೆ ಹಂಚಬೇಕು.
ಹಜ್ ಯಾತ್ರೆ:
ಸೌದಿ ಅರೇಬಿಯಾದ ಮಕ್ಕಾದಲ್ಲಿ ಪವಿತ್ರ ಹಜ್ ಯಾತ್ರೆ ನಡೆಯುವ ಸಮಯದಲ್ಲೇ ಈ ಹಬ್ಬ ಆಚರಿಸಲಾಗುತ್ತದೆ. ಜೀವನದಲ್ಲಿ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂದು ಇಸ್ಲಾಂ ಹೇಳುತ್ತದೆ. ಹಜ್ನ ಧಾರ್ಮಿಕ ವಿಧಿ-ವಿಧಾನಗಳು ಈ ಹಬ್ಬದೊಂದಿಗೆ ಮುಕ್ತಾಯಗೊಳ್ಳುತ್ತದೆ. ಬಕ್ರೀದ್ ಮುನ್ನಾದಿನ ಅಥವಾ ‘ದುಲ್ ಹಜ್’ ತಿಂಗಳ 9ರಂದು ಹಜ್ ಯಾತ್ರಿಕರು ಮಕ್ಕಾ ನಗರದ ಅರಫಾತ್ ಎಂಬ ಬೆಟ್ಟದ ಬಳಿ ಸೇರುತ್ತಾರೆ. ಈ ಯಾತ್ರಿಕರಿಗೆ ಬೆಂಬಲ ನೀಡಲು ವಿಶ್ವದಾದ್ಯಂತ ಮುಸ್ಲಿಮರು ಈ ದಿನ ಉಪವಾಸವಿರುತ್ತಾರೆ. ಪುಣ್ಯ ಸಂಪಾದಿಸುವ ರಂಜಾನ್ ಮಾಸದಲ್ಲೂ ಮುಸ್ಲಿಂ ಬಾಂಧವರು ಮಕ್ಕಾ, ಮದೀನಕ್ಕೆ ಭೇಟಿ ನೀಡುತ್ತಾರೆ.