Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶಾದ್ಯಂತ ಬಕ್ರೀದ್‌ ಆಚರಣೆ ಸಂಭ್ರಮ; ಜಮ್ಮು-ಕಾಶ್ಮೀರದಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಸಲ್ಲಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇಶಾದ್ಯಂತ ಬಕ್ರೀದ್‌ ಆಚರಣೆ ಸಂಭ್ರಮ; ಜಮ್ಮು-ಕಾಶ್ಮೀರದಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಸಲ್ಲಿಕೆ

Latest

ದೇಶಾದ್ಯಂತ ಬಕ್ರೀದ್‌ ಆಚರಣೆ ಸಂಭ್ರಮ; ಜಮ್ಮು-ಕಾಶ್ಮೀರದಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಸಲ್ಲಿಕೆ

Public TV
Last updated: June 7, 2025 8:38 am
Public TV
Share
3 Min Read
Capture
SHARE

– ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಳಿಕ ಜಮ್ಮು-ಕಾಶ್ಮೀರದಲ್ಲಿ ಮೊದಲ ಹಬ್ಬ

ಶ್ರೀನಗರ: ದೇಶಾದ್ಯಂತ ಮುಸ್ಲಿಂ (Muslims) ಬಾಂಧವರಿಂದು ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನ ಸಂಕೇತಿಸುವ ಪವಿತ್ರ ಬಕ್ರೀದ್‌ (Eid Al Adha) ಹಬ್ಬ ಆಚರಿಸುತ್ತಿದ್ದಾರೆ.

#WATCH | Srinagar, J&K | People offer namaz at the Girls Higher Secondary, Palpora Sonwar, on the occasion of Eid Al Adha. pic.twitter.com/kIgOC2H1as

— ANI (@ANI) June 7, 2025

ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶದ ಸಂಭಾಲ್‌, ಪಾಟ್ನಾದ ಗಾಂಧಿ ಮೈದಾನ, ನವದೆಹಲಿ, ಬೆಂಗಳೂರು ಸೇರಿದಂತೆ ವಿವಿಧೆಡೆ ಶಾಂತಿಯುವಾಗಿ ನಮಾಜ್‌ ಮಾಡುವ ಮೂಲಕ ಬಕ್ರೀದ್‌ ಹಬ್ಬ ಆಚರಿಸುತ್ತಿದ್ದಾರೆ. ವಿಶೇಷವೆಂದರೆ ಕೆಲ ದಿನಗಳ ಹಿಂದೆಯಷ್ಟೇ ಪಹಲ್ಗಾಮ್‌ ಭಯೋತ್ಪಾದಕ ದಾಳಿ ಬಳಿಕ ಸಂಘರ್ಷಪೀಡಿತವಾಗಿದ್ದ ಜಮ್ಮು-ಕಾಶ್ಮೀರದ ಪಾಲ್ಪೋರಾ (Sonwar) ಸೋನ್ವಾರ್‌ನ ಬಾಲಕಿಯರ ಪ್ರೌಢಶಾಲೆಯಲ್ಲಿ ಶಾಂತಿಯುತವಾಗಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದ್ದಾರೆ.

#WATCH | Sambhal, UP: People offer namaz on the occasion of Eid Al Adha. pic.twitter.com/lmjPoYcElj

— ANI (@ANI) June 7, 2025

ಬಕ್ರೀದ್‌ ಹಿನ್ನೆಲೆ ಏನು?
ಪುಣ್ಯ ಸಂಪಾದಿರುವ ರಂಜಾನ್ ತಿಂಗಳ ಉಪವಾಸದ ಬಳಿಕ ‘ಈದ್ ಉಲ್ ಫಿತ್ರ್’ ಹಬ್ಬ ಆಚರಿಸುವುದಾದರೆ, ಇಸ್ಲಾಮಿಕ್ ಕ್ಯಾಲೆಂಡರಿನ ‘ದುಲ್ ಹಜ್’ ತಿಂಗಳ 10ರಂದು ಬಕ್ರೀದ್ ಆಚರಣೆ ನಡೆಯುತ್ತದೆ. 4 ಸಾವಿರ ವರ್ಷಗಳಿಗೂ ಹಿಂದೆ ಹುಟ್ಟಿದ್ದ ಪ್ರವಾದಿ ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸುವುದು ‘ಬಕ್ರೀದ್’ನ ಮುಖ್ಯ ಆಶಯ. ಇಬ್ರಾಹಿಂ ಅವರು ಪ್ರವಾದಿ ಮುಹಮ್ಮದ್ ಅವರಿಗಿಂತ ಎರಡೂವರೆ ಸಾವಿರ ವರ್ಷಗಳ ಹಿಂದೆ ಹುಟ್ಟಿದ್ದರು ಎಂದು ಮುಸ್ಲಿಂ ಬಾಂಧವರ ಪವಿತ್ರ ಗ್ರಂಥಗಳಲ್ಲಿ ಉಲ್ಲೇಖವಾಗಿದೆ. ಇದನ್ನೂ ಓದಿ: ತ್ಯಾಗದ ಪ್ರತೀಕ ʻಬಕ್ರೀದ್‌ʼ

ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವುದು, ಸೋದರತ್ವ ಬೆಳೆಸಿಕೊಳ್ಳುವುದು, ಅಲ್ಲಾಹುವಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಾಗಬೇಕು ಎಂಬ ಸಂದೇಶವನ್ನು ಈ ಹಬ್ಬ ಸಾರುತ್ತದೆ. ಈ ದಿನ ಮಸೀದಿಗಳಲ್ಲಿ ಸಾಮೂಹಿಕ ಈದ್ ನಮಾಜ್ ಇರುತ್ತದೆ. ಮಕ್ಕಳು, ಹಿರಿಯರು ಹೊಸ ಉಡುಗೆ ತೊಟ್ಟು ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವರು. ನಮಾಜ್‌ಗೂ ಮುನ್ನ ಕೆಲ ಹೊತ್ತು ‘ತಕ್ಷೀರ್’ ಮೊಳಗಿಸಲಾಗುತ್ತದೆ. ಇದನ್ನೂ ಓದಿ: ಈಗ ನಾನು ಇದ್ದಿದ್ರೆ ಕೆ.ಎಲ್‌.ರಾಹುಲ್‌ನ ಆರ್‌ಸಿಬಿಗೆ ಖರೀದಿ ಮಾಡ್ತಿದ್ದೆ: ವಿಜಯ್‌ ಮಲ್ಯ

#WATCH | People offered namaz at Gandhi Maidan in Patna, Bihar, on the occasion of Eid Al Adha. pic.twitter.com/tBnqgZiEEP

— ANI (@ANI) June 7, 2025

ಮನೆ ಮನೆಗಳಲ್ಲಿ ಹಬ್ಬದೂಟ:
ಮನೆಗಳಲ್ಲಿ ಹಬ್ಬದ ಊಟ, ವಿಶೇಷ ಖಾದ್ಯಗಳನ್ನು ತಯಾರಿಸುವರು. ಗೆಳೆಯರು, ಬಂಧುಗಳನ್ನು ಆಹ್ವಾನಿಸಿ ಜೊತೆಯಾಗಿ ಊಟ ಮಾಡಿ, ಸಂಭ್ರಮ ಹಂಚಿಕೊಳ್ಳುವರು. ಹಬ್ಬದ ದಿನ ದಾನವಾಗಿ ದೊರೆಯುವ ಮಾಂಸ, ಹಣ, ದಿನಸಿ ಸಾಮಗ್ರಿಗಳಿಂದ ಎಷ್ಟೋ ಬಡಕುಟುಂಬಗಳಿಗೂ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ಕಲ್ಪಿಸುತ್ತದೆ. ಇದನ್ನೂ ಓದಿ: Stampede Case | ಡಿಸಿ ನೇತೃತ್ವದ ತನಿಖೆ ಚುರುಕು – 25ಕ್ಕೂ ಹೆಚ್ಚು ಗಾಯಾಳುಗಳಿಗೆ ನೋಟಿಸ್, ಜೂ.11ಕ್ಕೆ ವಿಚಾರಣೆ

ಜಾನುವಾರು ಬಲಿ ನೀಡುವ ಆಚರಣೆ:
ಜಾನುವಾರುಗಳನ್ನು ಬಲಿ ಕೊಡುವುದು ಸಹ ‘ಬಕ್ರೀದ್’ನ ಪ್ರಮುಖ ಆಚರಣೆಯಾಗಿದೆ. ಪ್ರವಾದಿ ಇಬ್ರಾಹಿಂ ಅವರ ಜೀವನದಲ್ಲಿ ನಡೆದಿದ್ದ ಘಟನೆಯೊಂದರ ನೆನಪಿನಲ್ಲಿ ಜಾನುವಾರು ಬಲಿ ನೀಡಲಾಗುತ್ತದೆ. ಇದಕ್ಕೆ ಒಂದು ಹಿನ್ನೆಲೆಯೂ ಇದೆ.

ಅಲ್ಲಾಹುನ ಆದೇಶದಂತೆ ಇಬ್ರಾಹಿಂ, ತಮ್ಮ ಪುತ್ರ ಇಸ್ಮಾಯಿಲ್ ಅವರನ್ನು ಬಲಿಯರ್ಪಿಸಲು ಮುಂದಾಗುವರು. ತಮ್ಮ ಮಗನನ್ನೇ ಬಲಿ ನೀಡಲು ಸಿದ್ಧವಾಗಿದ್ದ ಇಬ್ರಾಹಿಂ ಅವರ ಭಕ್ತಿಯನ್ನು ಅಲ್ಲಾಹನು ಮೆಚ್ಚಿ ಪುತ್ರನ ಬದಲು ಒಂದು ಟಗರನ್ನು ಬಲಿಯರ್ಪಿಸುವಂತೆ ಸೂಚಿಸುತ್ತಾರೆ. ಇದು ತಮ್ಮ ಧರ್ಮಗ್ರಂಥಗಳಲ್ಲೂ ಉಲ್ಲೇಖವಾಗಿದೆ ಎಂದು ಮುಸ್ಲಿಂ ಧರ್ಮಗುರುಗಳು ಹೇಳಿದ್ದಾರೆ.

ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸಲು ಹಬ್ಬದ ದಿನ ಜಾನುವಾರು ಬಲಿ ಅರ್ಪಿಸಲಾಗುತ್ತದೆ. ಆರ್ಥಿಕವಾಗಿ ಸಬಲರಾಗಿರುವ ಎಲ್ಲರೂ ಪ್ರಾಣಿಬಲಿ ನೀಡಬೇಕು. ಪ್ರಾಣಿಯಿಂದ ಲಭಿಸಿದ ಮಾಂಸವನ್ನು ಸಮನಾಗಿ ಮೂರು ಪಾಲು ಮಾಡಬೇಕು. ಅದರಲ್ಲಿ ಒಂದು ಭಾಗವನ್ನು ಸ್ವತಃ ಬಳಸಿಕೊಳ್ಳಬಹುದು. ಇನ್ನೆರಡು ಪಾಲುಗಳನ್ನು ಸಂಬಂಧಿಕರು ಹಾಗೂ ಬಡವರಿಗೆ ಹಂಚಬೇಕು.

ಹಜ್ ಯಾತ್ರೆ:
ಸೌದಿ ಅರೇಬಿಯಾದ ಮಕ್ಕಾದಲ್ಲಿ ಪವಿತ್ರ ಹಜ್ ಯಾತ್ರೆ ನಡೆಯುವ ಸಮಯದಲ್ಲೇ ಈ ಹಬ್ಬ ಆಚರಿಸಲಾಗುತ್ತದೆ. ಜೀವನದಲ್ಲಿ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂದು ಇಸ್ಲಾಂ ಹೇಳುತ್ತದೆ. ಹಜ್‌ನ ಧಾರ್ಮಿಕ ವಿಧಿ-ವಿಧಾನಗಳು ಈ ಹಬ್ಬದೊಂದಿಗೆ ಮುಕ್ತಾಯಗೊಳ್ಳುತ್ತದೆ. ಬಕ್ರೀದ್ ಮುನ್ನಾದಿನ ಅಥವಾ ‘ದುಲ್ ಹಜ್’ ತಿಂಗಳ 9ರಂದು ಹಜ್ ಯಾತ್ರಿಕರು ಮಕ್ಕಾ ನಗರದ ಅರಫಾತ್ ಎಂಬ ಬೆಟ್ಟದ ಬಳಿ ಸೇರುತ್ತಾರೆ. ಈ ಯಾತ್ರಿಕರಿಗೆ ಬೆಂಬಲ ನೀಡಲು ವಿಶ್ವದಾದ್ಯಂತ ಮುಸ್ಲಿಮರು ಈ ದಿನ ಉಪವಾಸವಿರುತ್ತಾರೆ. ಪುಣ್ಯ ಸಂಪಾದಿಸುವ ರಂಜಾನ್ ಮಾಸದಲ್ಲೂ ಮುಸ್ಲಿಂ ಬಾಂಧವರು ಮಕ್ಕಾ, ಮದೀನಕ್ಕೆ ಭೇಟಿ ನೀಡುತ್ತಾರೆ.

TAGGED:BakridBakrid 2025Bakrid FestivalJammu and Kashmirkarnatakamuslimsಕರ್ನಾಟಕಜಮ್ಮು ಕಾಶ್ಮೀರಬಕ್ರೀದ್ಬಕ್ರೀದ್ ಹಬ್ಬಬೆಂಗಳೂರುಮುಸ್ಲಿಮರು
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Parameshwar
Bengaluru City

ಗನ್ ಹಿಡಿದು `ಕೈ’ ಮುಖಂಡ ಡ್ಯಾನ್ಸ್ – ಕ್ರಮ ನಿಶ್ಚಿತ ಎಂದ ಪರಮೇಶ್ವರ್

Public TV
By Public TV
7 minutes ago
Vasanth Naik Murder Case Kamalakar Bhat gets a honeytrap from Suchitra
Court

ಕೊಲೆ ಕೇಸ್; ಕಮಲಾಕರ್ ಭಟ್ ಸೇರಿ ಐವರಿಗೆ ಫೆ.21 ರವರೆಗೆ ನ್ಯಾಯಾಂಗ ಬಂಧನ

Public TV
By Public TV
11 minutes ago
Hardeep Singh Puri e1632403467811
Latest

Jeffrey Epstein Files | ನಾನು 3-4 ಬಾರಿ ಭೇಟಿಯಾಗಿದ್ದೆ – ಕೇಂದ್ರ ಸಚಿವ ಹರ್ದೀಪ್‌ ಪುರಿ

Public TV
By Public TV
27 minutes ago
h.d.deve gowda
Latest

ಕೈಗಾರಿಕಾ ಕಾರಿಡಾರ್; ಬೆಂಗಳೂರಿನಿಂದ ಮಂಗಳೂರಿಗೆ ವಿಸ್ತರಿಸಲು ಹೆಚ್.ಡಿ.ದೇವೇಗೌಡ ಸಲಹೆ

Public TV
By Public TV
49 minutes ago
Eshwar Khandre
Bengaluru City

ಎನ್.ಎಂ.ಡಿ.ಸಿ ಅಕ್ರಮ ಅದಿರು ರವಾನೆ ತನಿಖೆಗೆ ಈಶ್ವರ್ ಖಂಡ್ರೆ ಆದೇಶ

Public TV
By Public TV
1 hour ago
love jihad mangaluru
Dakshina Kannada

ಕರಾವಳಿಯಲ್ಲಿ ಮತ್ತೆ ಲವ್ ಜಿಹಾದ್ ಆರೋಪ; ಯುವಕನ ಜೊತೆ ಪರಾರಿಯದ ಕೇರಳ ಯುವತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?