Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶಾದ್ಯಂತ ಬಕ್ರೀದ್‌ ಆಚರಣೆ ಸಂಭ್ರಮ; ಜಮ್ಮು-ಕಾಶ್ಮೀರದಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಸಲ್ಲಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇಶಾದ್ಯಂತ ಬಕ್ರೀದ್‌ ಆಚರಣೆ ಸಂಭ್ರಮ; ಜಮ್ಮು-ಕಾಶ್ಮೀರದಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಸಲ್ಲಿಕೆ

Latest

ದೇಶಾದ್ಯಂತ ಬಕ್ರೀದ್‌ ಆಚರಣೆ ಸಂಭ್ರಮ; ಜಮ್ಮು-ಕಾಶ್ಮೀರದಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಸಲ್ಲಿಕೆ

Public TV
Last updated: June 7, 2025 8:38 am
Public TV
Share
3 Min Read
Capture
SHARE

– ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಳಿಕ ಜಮ್ಮು-ಕಾಶ್ಮೀರದಲ್ಲಿ ಮೊದಲ ಹಬ್ಬ

ಶ್ರೀನಗರ: ದೇಶಾದ್ಯಂತ ಮುಸ್ಲಿಂ (Muslims) ಬಾಂಧವರಿಂದು ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನ ಸಂಕೇತಿಸುವ ಪವಿತ್ರ ಬಕ್ರೀದ್‌ (Eid Al Adha) ಹಬ್ಬ ಆಚರಿಸುತ್ತಿದ್ದಾರೆ.

#WATCH | Srinagar, J&K | People offer namaz at the Girls Higher Secondary, Palpora Sonwar, on the occasion of Eid Al Adha. pic.twitter.com/kIgOC2H1as

— ANI (@ANI) June 7, 2025

ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶದ ಸಂಭಾಲ್‌, ಪಾಟ್ನಾದ ಗಾಂಧಿ ಮೈದಾನ, ನವದೆಹಲಿ, ಬೆಂಗಳೂರು ಸೇರಿದಂತೆ ವಿವಿಧೆಡೆ ಶಾಂತಿಯುವಾಗಿ ನಮಾಜ್‌ ಮಾಡುವ ಮೂಲಕ ಬಕ್ರೀದ್‌ ಹಬ್ಬ ಆಚರಿಸುತ್ತಿದ್ದಾರೆ. ವಿಶೇಷವೆಂದರೆ ಕೆಲ ದಿನಗಳ ಹಿಂದೆಯಷ್ಟೇ ಪಹಲ್ಗಾಮ್‌ ಭಯೋತ್ಪಾದಕ ದಾಳಿ ಬಳಿಕ ಸಂಘರ್ಷಪೀಡಿತವಾಗಿದ್ದ ಜಮ್ಮು-ಕಾಶ್ಮೀರದ ಪಾಲ್ಪೋರಾ (Sonwar) ಸೋನ್ವಾರ್‌ನ ಬಾಲಕಿಯರ ಪ್ರೌಢಶಾಲೆಯಲ್ಲಿ ಶಾಂತಿಯುತವಾಗಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದ್ದಾರೆ.

#WATCH | Sambhal, UP: People offer namaz on the occasion of Eid Al Adha. pic.twitter.com/lmjPoYcElj

— ANI (@ANI) June 7, 2025

ಬಕ್ರೀದ್‌ ಹಿನ್ನೆಲೆ ಏನು?
ಪುಣ್ಯ ಸಂಪಾದಿರುವ ರಂಜಾನ್ ತಿಂಗಳ ಉಪವಾಸದ ಬಳಿಕ ‘ಈದ್ ಉಲ್ ಫಿತ್ರ್’ ಹಬ್ಬ ಆಚರಿಸುವುದಾದರೆ, ಇಸ್ಲಾಮಿಕ್ ಕ್ಯಾಲೆಂಡರಿನ ‘ದುಲ್ ಹಜ್’ ತಿಂಗಳ 10ರಂದು ಬಕ್ರೀದ್ ಆಚರಣೆ ನಡೆಯುತ್ತದೆ. 4 ಸಾವಿರ ವರ್ಷಗಳಿಗೂ ಹಿಂದೆ ಹುಟ್ಟಿದ್ದ ಪ್ರವಾದಿ ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸುವುದು ‘ಬಕ್ರೀದ್’ನ ಮುಖ್ಯ ಆಶಯ. ಇಬ್ರಾಹಿಂ ಅವರು ಪ್ರವಾದಿ ಮುಹಮ್ಮದ್ ಅವರಿಗಿಂತ ಎರಡೂವರೆ ಸಾವಿರ ವರ್ಷಗಳ ಹಿಂದೆ ಹುಟ್ಟಿದ್ದರು ಎಂದು ಮುಸ್ಲಿಂ ಬಾಂಧವರ ಪವಿತ್ರ ಗ್ರಂಥಗಳಲ್ಲಿ ಉಲ್ಲೇಖವಾಗಿದೆ. ಇದನ್ನೂ ಓದಿ: ತ್ಯಾಗದ ಪ್ರತೀಕ ʻಬಕ್ರೀದ್‌ʼ

ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವುದು, ಸೋದರತ್ವ ಬೆಳೆಸಿಕೊಳ್ಳುವುದು, ಅಲ್ಲಾಹುವಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಾಗಬೇಕು ಎಂಬ ಸಂದೇಶವನ್ನು ಈ ಹಬ್ಬ ಸಾರುತ್ತದೆ. ಈ ದಿನ ಮಸೀದಿಗಳಲ್ಲಿ ಸಾಮೂಹಿಕ ಈದ್ ನಮಾಜ್ ಇರುತ್ತದೆ. ಮಕ್ಕಳು, ಹಿರಿಯರು ಹೊಸ ಉಡುಗೆ ತೊಟ್ಟು ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವರು. ನಮಾಜ್‌ಗೂ ಮುನ್ನ ಕೆಲ ಹೊತ್ತು ‘ತಕ್ಷೀರ್’ ಮೊಳಗಿಸಲಾಗುತ್ತದೆ. ಇದನ್ನೂ ಓದಿ: ಈಗ ನಾನು ಇದ್ದಿದ್ರೆ ಕೆ.ಎಲ್‌.ರಾಹುಲ್‌ನ ಆರ್‌ಸಿಬಿಗೆ ಖರೀದಿ ಮಾಡ್ತಿದ್ದೆ: ವಿಜಯ್‌ ಮಲ್ಯ

#WATCH | People offered namaz at Gandhi Maidan in Patna, Bihar, on the occasion of Eid Al Adha. pic.twitter.com/tBnqgZiEEP

— ANI (@ANI) June 7, 2025

ಮನೆ ಮನೆಗಳಲ್ಲಿ ಹಬ್ಬದೂಟ:
ಮನೆಗಳಲ್ಲಿ ಹಬ್ಬದ ಊಟ, ವಿಶೇಷ ಖಾದ್ಯಗಳನ್ನು ತಯಾರಿಸುವರು. ಗೆಳೆಯರು, ಬಂಧುಗಳನ್ನು ಆಹ್ವಾನಿಸಿ ಜೊತೆಯಾಗಿ ಊಟ ಮಾಡಿ, ಸಂಭ್ರಮ ಹಂಚಿಕೊಳ್ಳುವರು. ಹಬ್ಬದ ದಿನ ದಾನವಾಗಿ ದೊರೆಯುವ ಮಾಂಸ, ಹಣ, ದಿನಸಿ ಸಾಮಗ್ರಿಗಳಿಂದ ಎಷ್ಟೋ ಬಡಕುಟುಂಬಗಳಿಗೂ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ಕಲ್ಪಿಸುತ್ತದೆ. ಇದನ್ನೂ ಓದಿ: Stampede Case | ಡಿಸಿ ನೇತೃತ್ವದ ತನಿಖೆ ಚುರುಕು – 25ಕ್ಕೂ ಹೆಚ್ಚು ಗಾಯಾಳುಗಳಿಗೆ ನೋಟಿಸ್, ಜೂ.11ಕ್ಕೆ ವಿಚಾರಣೆ

ಜಾನುವಾರು ಬಲಿ ನೀಡುವ ಆಚರಣೆ:
ಜಾನುವಾರುಗಳನ್ನು ಬಲಿ ಕೊಡುವುದು ಸಹ ‘ಬಕ್ರೀದ್’ನ ಪ್ರಮುಖ ಆಚರಣೆಯಾಗಿದೆ. ಪ್ರವಾದಿ ಇಬ್ರಾಹಿಂ ಅವರ ಜೀವನದಲ್ಲಿ ನಡೆದಿದ್ದ ಘಟನೆಯೊಂದರ ನೆನಪಿನಲ್ಲಿ ಜಾನುವಾರು ಬಲಿ ನೀಡಲಾಗುತ್ತದೆ. ಇದಕ್ಕೆ ಒಂದು ಹಿನ್ನೆಲೆಯೂ ಇದೆ.

ಅಲ್ಲಾಹುನ ಆದೇಶದಂತೆ ಇಬ್ರಾಹಿಂ, ತಮ್ಮ ಪುತ್ರ ಇಸ್ಮಾಯಿಲ್ ಅವರನ್ನು ಬಲಿಯರ್ಪಿಸಲು ಮುಂದಾಗುವರು. ತಮ್ಮ ಮಗನನ್ನೇ ಬಲಿ ನೀಡಲು ಸಿದ್ಧವಾಗಿದ್ದ ಇಬ್ರಾಹಿಂ ಅವರ ಭಕ್ತಿಯನ್ನು ಅಲ್ಲಾಹನು ಮೆಚ್ಚಿ ಪುತ್ರನ ಬದಲು ಒಂದು ಟಗರನ್ನು ಬಲಿಯರ್ಪಿಸುವಂತೆ ಸೂಚಿಸುತ್ತಾರೆ. ಇದು ತಮ್ಮ ಧರ್ಮಗ್ರಂಥಗಳಲ್ಲೂ ಉಲ್ಲೇಖವಾಗಿದೆ ಎಂದು ಮುಸ್ಲಿಂ ಧರ್ಮಗುರುಗಳು ಹೇಳಿದ್ದಾರೆ.

ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸಲು ಹಬ್ಬದ ದಿನ ಜಾನುವಾರು ಬಲಿ ಅರ್ಪಿಸಲಾಗುತ್ತದೆ. ಆರ್ಥಿಕವಾಗಿ ಸಬಲರಾಗಿರುವ ಎಲ್ಲರೂ ಪ್ರಾಣಿಬಲಿ ನೀಡಬೇಕು. ಪ್ರಾಣಿಯಿಂದ ಲಭಿಸಿದ ಮಾಂಸವನ್ನು ಸಮನಾಗಿ ಮೂರು ಪಾಲು ಮಾಡಬೇಕು. ಅದರಲ್ಲಿ ಒಂದು ಭಾಗವನ್ನು ಸ್ವತಃ ಬಳಸಿಕೊಳ್ಳಬಹುದು. ಇನ್ನೆರಡು ಪಾಲುಗಳನ್ನು ಸಂಬಂಧಿಕರು ಹಾಗೂ ಬಡವರಿಗೆ ಹಂಚಬೇಕು.

ಹಜ್ ಯಾತ್ರೆ:
ಸೌದಿ ಅರೇಬಿಯಾದ ಮಕ್ಕಾದಲ್ಲಿ ಪವಿತ್ರ ಹಜ್ ಯಾತ್ರೆ ನಡೆಯುವ ಸಮಯದಲ್ಲೇ ಈ ಹಬ್ಬ ಆಚರಿಸಲಾಗುತ್ತದೆ. ಜೀವನದಲ್ಲಿ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂದು ಇಸ್ಲಾಂ ಹೇಳುತ್ತದೆ. ಹಜ್‌ನ ಧಾರ್ಮಿಕ ವಿಧಿ-ವಿಧಾನಗಳು ಈ ಹಬ್ಬದೊಂದಿಗೆ ಮುಕ್ತಾಯಗೊಳ್ಳುತ್ತದೆ. ಬಕ್ರೀದ್ ಮುನ್ನಾದಿನ ಅಥವಾ ‘ದುಲ್ ಹಜ್’ ತಿಂಗಳ 9ರಂದು ಹಜ್ ಯಾತ್ರಿಕರು ಮಕ್ಕಾ ನಗರದ ಅರಫಾತ್ ಎಂಬ ಬೆಟ್ಟದ ಬಳಿ ಸೇರುತ್ತಾರೆ. ಈ ಯಾತ್ರಿಕರಿಗೆ ಬೆಂಬಲ ನೀಡಲು ವಿಶ್ವದಾದ್ಯಂತ ಮುಸ್ಲಿಮರು ಈ ದಿನ ಉಪವಾಸವಿರುತ್ತಾರೆ. ಪುಣ್ಯ ಸಂಪಾದಿಸುವ ರಂಜಾನ್ ಮಾಸದಲ್ಲೂ ಮುಸ್ಲಿಂ ಬಾಂಧವರು ಮಕ್ಕಾ, ಮದೀನಕ್ಕೆ ಭೇಟಿ ನೀಡುತ್ತಾರೆ.

TAGGED:BakridBakrid 2025Bakrid FestivalJammu and Kashmirkarnatakamuslimsಕರ್ನಾಟಕಜಮ್ಮು ಕಾಶ್ಮೀರಬಕ್ರೀದ್ಬಕ್ರೀದ್ ಹಬ್ಬಬೆಂಗಳೂರುಮುಸ್ಲಿಮರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
6 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
7 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
8 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
8 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
8 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?