ಕೋಲಾರ: ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಲು ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಬಿರಿಯಾನಿ ಊಟಕ್ಕಾಗಿ ಜನ ತಳ್ಳಾಟ, ನೂಕಾಟ ಮಾಡಿದ್ದಾರೆ.
ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಬಯಲು ರಂಗಮಂದಿರದಲ್ಲಿ ಶಾಸಕ ಎಸ್.ಎನ್. ನಾರಾಯಣಸ್ವಾಮಿಗೆ ನಿಗಮ ಮಂಡಳಿ ಸ್ಥಾನ ಸಿಕ್ಕ ಹಿನ್ನೆಲೆ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಬಿರಿಯಾನಿ ಊಟಕ್ಕಾಗಿ ಜನ ಮುಗಿಬಿದ್ದಿದ್ದಾರೆ.
ಕಾರ್ಯಕ್ರಮ ವೇದಿಕೆಯ ಹಿಂಭಾಗ ಭರ್ಜರಿ ಬಿರಿಯಾನಿ ಊಟದ ವ್ಯವಸ್ಥೆಯನ್ನು ಏರ್ಪಡಿಸಲಾಗಿತ್ತು. ಬಿರಿಯಾನಿ ಜೊತೆ ಕಬಾಬ್, ಚಿಕನ್ ಚಾಪ್ಸ್ ಊಟ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ ನೂರಾರು ಜನರು ಬಿರಿಯಾನಿ ತಿನ್ನಲು ನಾ ಮುಂದು ತಾ ಮುಂದು ಎಂದು ಮುಗ್ಗಿಬಿದಿದ್ದಾರೆ.
ಕಾರ್ಯಕರ್ತರನ್ನು ನಿಯಂತ್ರಿಸಲು ಬಂಗಾರಪೇಟೆ ಪೊಲೀಸರು ಹರಸಾಹಸ ಪಡಬೇಕಾಯಿತು. ಒಂದು ಹಂತದಲ್ಲಿ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರೇ ತಳ್ಳಾಡಬೇಕಾಯಿತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv