ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿ ಸಾವು: ಕುಟುಂಬಸ್ಥರ ಆಕ್ರೋಶ

Public TV
1 Min Read
CTD DOCTOR NEGLET 1

ಚಿತ್ರದುರ್ಗ: ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.

ತಾಲೂಕಿನ ತುರುವನೂರು ಗ್ರಾಮದ ಟಿ.ದೇವರಾಜ (45) ಮೃತ ದುರ್ದೈವಿ. ತಡರಾತ್ರಿ ಎದೆನೋವು ಕಾಣಿಸಿಕೊಂಡ ಕೂಡಲೇ ಜಿಲ್ಲಾಸ್ಪತ್ರೆಗೆ ಟಿ.ದೇವರಾಜ್ ಅವರನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದ್ರೆ ರಾತ್ರಿ 12 ಗಂಟೆಯಿಂದಲೂ ಚಿಕಿತ್ಸೆಗಾಗಿ ಪರದಾಡಿದರೂ ದೇವರಾಜ್‍ಗೆ ಸೂಕ್ತ ಚಿಕಿತ್ಸೆ ಸಿಗಲೇ ಇಲ್ಲ.

ದೇವರಾಜ್ ಕುಟುಂಬಸ್ಥರು ಚಿಕಿತ್ಸೆಗಾಗಿ ಅಂಗಲಾಚಿದರೂ ಬೆಳಗಿನ ಜಾವ 3 ಗಂಟೆಯವರೆಗೂ ಆಸ್ಪತ್ರೆಯತ್ತ ಯಾವುದೇ ವೈದ್ಯರು ತಿರುಗಿ ನೋಡಲೇ ಇಲ್ಲ. ಪರಿಣಾಮ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ದೇವರಾಜ್ ಮೃತಪಟ್ಟಿದ್ದಾರೆ.

ದೇವರಾಜ್ ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಅನ್ನೋದು ಕುಟುಂಬಸ್ಥರ ಆರೋಪ. ಅಲ್ಲದೆ ಸ್ಥಳಕ್ಕೆ ಜಿಲ್ಲಾ ಶಸ್ತ್ರಚಿಕಿತ್ಸಕ ಬರೋವರೆಗೂ ಮೃತ ವ್ಯಕ್ತಿಯ ಶವ ಪಡೆಯಲು ಕುಟುಂಬಸ್ಥರು ಹಾಗೂ ಸಂಬಂಧಿಕರು ನಿರಾಕರಿಸಿದ್ದಾರೆ.

CTD DOCTOR NEGLET 3

CTD DOCTOR NEGLET 4

Share This Article
Leave a Comment

Leave a Reply

Your email address will not be published. Required fields are marked *