ಹಾವೇರಿ: ಗ್ರಾಮದಲ್ಲಿ ಸ್ಮಶಾನಕ್ಕೆ ಜಾಗ ಇಲ್ಲದ್ದರಿಂದ ರಸ್ತೆ ಪಕ್ಕದಲ್ಲಿಯೇ ಮೃತ ರೈತನ ಅಂತ್ಯಕ್ರಿಯೆ ಮಾಡಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶೀಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಬಳಿ ಇರುವ ಹಾವೇರಿ-ಹಾನಗಲ್ ರಸ್ತೆಯ ಪಕ್ಕದಲ್ಲಿ ಅಂತ್ಯಕ್ರಿಯೆ ಮಾಡಲಾಗಿದ್ದು, ಮೃತ ವ್ಯಕ್ತಿಯನ್ನು ಗ್ರಾಮದ ಹನುಮಂತಪ್ಪ ಹೊಸಮನಿ(57) ಎಂದು ಗುರುತಿಸಲಾಗಿದೆ. ಹಾವು ಕಡಿದ ರೈತ ಹನುಮಂತಪ್ಪ ಮೃತಪಟ್ಟಿದ್ದ. ಇದನ್ನೂ ಓದಿ: 40 ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ ಕುರಿತು ಚರ್ಚೆ ನಡೆಯುತ್ತಿದೆ: ಜಾರಕಿಹೊಳಿ ಬಾಂಬ್
ಶೀಗಿಹಳ್ಳಿ ಗ್ರಾಮಕ್ಕೆ ಅಂತ್ಯಕ್ರಿಯೆ ಮಾಡಲು ಸೂಕ್ತ ಜಾಗದಲ್ಲಿ ಸ್ಮಶಾನ ವ್ಯವಸ್ಥೆ ಕಲ್ಪಿಸುವಂತೆ ಹತ್ತಾರು ಬಾರಿ ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ. ಆದರೂ ಈವರೆಗೂ ಸ್ಮಶಾನ ಜಾಗದ ವ್ಯವಸ್ಥೆ ಆಗದ್ದರಿಂದ ರಸ್ತೆ ಪಕ್ಕದಲ್ಲೇ ಅಂತ್ಯಕ್ರಿಯೆಯನ್ನು ಗ್ರಾಮಸ್ಥರು ಮಾಡುತ್ತಿದ್ದಾರೆ. ಈಬಗ್ಗೆ ಕೂಡಲೇ ಜಿಲ್ಲಾಡಳಿತ ಸೂಕ್ತ ಸ್ಥಳ ಗುರುತಿಸಿ ಗ್ರಾಮದಲ್ಲಿ ಸ್ಮಶಾನಕ್ಕೆ ಜಾಗ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ನೆರೆಮನೆಯ ಹೆಣ್ಣು ನಾಯಿಯನ್ನು ರೇಪ್ ಮಾಡಿದ 67ರ ವೃದ್ಧ