ಹುಬ್ಬಳ್ಳಿ: ಹೊಲದ ಬಳಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೈಗೈದ ಘಟನೆ ಹುಬ್ಬಳ್ಳಿಯ ಗಬ್ಬೂರ ಕ್ರಾಸ್ ಬಳಿ ನಡೆದಿದೆ.
ಮೃತ ವ್ಯಕ್ತಿಯ ಬಗ್ಗೆ ಗುರುತು ಪತ್ತೆಯಾಗಿಲ್ಲ. ಆದ್ರೆ ಪೊಲೀಸರು ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ರೈತನ ಕೊಲೆಯಾಗಿರಬಹುದು ಅಂತಾ ಶಂಕಿಸಿದ್ದಾರೆ.
ಬಸವರಾಜ ಸತ್ತೂರ ಎಂಬುವರ ಜಮೀನಿನಲ್ಲಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹೊಲದ ಬಳಿ ಕರೆತಂದು ಕುತ್ತಿಗೆಗೆ ಮಚ್ಚಿನಿಂದ ಕೊಚ್ಚಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಸುಮಾರು 45ವರ್ಷ ವಯಸ್ಸಿನ ವ್ಯಕ್ತಿಯ ಶವವಾಗಿದೆ. ಕೊಲೆಯಾದ ವ್ಯಕ್ತಿ ಬಗ್ಗೆ ಇನ್ನಷ್ಟೇ ತಿಳಿದುಬರಬೇಕಿದೆ. ಮೃತ ವ್ಯಕ್ತಿ ರೈತನಿರಬೇಕು ಎಂಬುದು ಆತನ ಬಟ್ಟೆಗಳಿಂದ ಗೊತ್ತಾಗುತ್ತಿದ್ದು, ಹಳೇ ವೈಷಮ್ಯವೇ ಕೊಲೆಗೆ ಕಾರಣವಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಬೆಂಡಿಗೇರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀನೆ ನಡೆಸಿದ್ದಾರೆ.