ಪೊಲೀಸ್‍ ನನ್ನೇ ಇರಿದು ಹಣ ದೋಚಿದ ಕಳ್ಳ

Public TV
1 Min Read
ctd police attack 2

ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗದಲ್ಲಿ ಮುಖ್ಯಪೇದೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಣ, ಒಡವೆ ಹಾಗೂ ಮೊಬೈಲ್ ದೋಚಿಕೊಂಡು ಪರಾರಿಯಾಗಿರೋ ಘಟನೆ ನಡೆದಿದೆ.

ಹಿರಿಯೂರು ತಾಲೂಕಿನ ಐಮಂಗಳ ಪೊಲೀಸ್ ಠಾಣೆಯ ಪ್ರಕಾಶ್ ಹಲ್ಲೆಗೊಳಗಾದ ಮುಖ್ಯ ಪೇದೆ. ಬುಧವಾರ ರಾತ್ರಿ ಖಾಸಗಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ತಮ್ಮ ದ್ವಿಚಕ್ರ ವಾಹನ ತರಲು ಹೋದಾಗ ಅಪರಿಚಿತನೊಬ್ಬ ಏಕಾಏಕಿ ದಾಳಿ ನಡೆಸಿದ್ದಾನೆ. ತನ್ನ ಬಳಿಯಿದ್ದ ಹುಕ್‍ನಿಂದ ಕಿವಿ, ಎದೆ ಭಾಗಕ್ಕೆ ಇರಿದಿದ್ದಾನೆ. ಪೊಲೀಸ್ ಪ್ರಕಾಶ್ ಬಳಿ ಇದ್ದ ಹನ್ನೊಂದು ಸಾವಿರ ರೂ. ನಗದು, ಚಿನ್ನದ ಸರ ಹಾಗೂ ಮೊಬೈಲ್ ದೋಚಿದ್ದಾನೆ.

ಗಾಯಾಳು ಪ್ರಕಾಶ್ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ctd police attack 1

 

 

Share This Article
Leave a Comment

Leave a Reply

Your email address will not be published. Required fields are marked *