Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಧ್ವನಿವರ್ಧಕಗಳಲ್ಲಿ ಆಜಾನ್ ಕೂಗುವುದು ನಿಷೇಧಿಸಲು ಮನವಿ- ಅರ್ಜಿದಾರರಿಗೆ ಹೈಕೋರ್ಟ್ ತರಾಟೆ

Public TV
Last updated: November 29, 2023 3:29 pm
Public TV
Share
3 Min Read
loudspeakers
SHARE

ನವದೆಹಲಿ: ಮಸೀದಿಗಳಲ್ಲಿ (Mosque) ಧ್ವನಿವರ್ಧಕಗಳ (Speaker) ಮೂಲಕ ಅಜಾನ್ ಕೂಗುವುದರಿಂದ ಶಬ್ದ ಮಾಲಿನ್ಯ ಆಗುವುದಿಲ್ಲ ಎಂದು ಗುಜುರಾತ್ ಹೈಕೋರ್ಟ್ (Gujarat High Court) ಹೇಳಿದೆ. ಧ್ವನಿವರ್ಧಕಗಳ ಮೂಲಕ ಅಜಾನ್ ಕೂಗುವುದು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿತು.

ವೈದ್ಯ ಧರ್ಮೇಂದ್ರ ಪ್ರಜಾಪತಿ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸುನೀತಾ ಅಗರ್ವಾಲ್ (Sunita Agarwal) ಮತ್ತು ನ್ಯಾಯಮೂರ್ತಿ ಅನಿರುದ್ಧಮಯೀ ಅವರ ವಿಭಾಗೀಯ ಪೀಠವು ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಈ ರೀತಿಯ ಪಿಐಎಲ್ (PIL) ಸಲ್ಲಿಕೆ, ಧ್ವನಿವರ್ಧಕಗಳ ಮೂಲಕ ಕೂಗುವುದರಿಂದ ಉಂಟಾಗುವ ಶಬ್ದದ ಪ್ರಮಾಣ ಎಷ್ಟು? ಇದರಿಂದ ಶಬ್ದ ಮಾಲಿನ್ಯ ಹೇಗೆ ಸಾಧ್ಯ ಎಂದು ಪ್ರಶ್ನಿಸಿತು. ಇದನ್ನೂ ಓದಿ: 25 ದಿನಗಳಿಗೆ ಸಾಕಾಗುವಷ್ಟು ಆಹಾರ ಸುರಂಗದಲ್ಲೇ ಉಳಿದಿದೆ: ಕಾರ್ಮಿಕ ಅಖಿಲೇಶ್‌

ನೀವು ಅಡಚಣೆ ಉಂಟುಮಾಡದ ಸಂಗೀತವನ್ನು ನುಡಿಸುತ್ತೀರಾ? ಎಂದು ಅರ್ಜಿದಾರರ ಪರ ವಕೀಲರನ್ನು ಮುಖ್ಯ ನ್ಯಾಯಮೂರ್ತಿಗಳು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅರ್ಜಿದಾರರ ಪರ ವಕೀಲರಾದ ಡಿಜಿ ಶುಕ್ಲಾ ಸಂಗೀತವನ್ನು ಮನೆಯಲ್ಲಿ ನುಡಿಸುತ್ತಾರೆಯೇ ಹೊರತು ಮಸೀದಿಯಂತಹ ಸಾರ್ವಜನಿಕ ಸ್ಥಳದಲ್ಲಿ ಅಲ್ಲ ಎಂದು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಇಡೀ ದೇಶ ಪ್ರಾರ್ಥಿಸುತ್ತಿದ್ರೆ ಗಾಂಧಿ ಕುಟುಂಬ ಮಾತ್ರ ಡ್ಯಾನ್ಸ್ ಮಾಡ್ತಿತ್ತು: ಅಸ್ಸಾಂ ಸಿಎಂ ಕಿಡಿ

ನಾವು ಮನೆಗಳಲ್ಲಿ ನುಡಿಸುವ ಸಂಗೀತದ ಬಗ್ಗೆ ಮಾತನಾಡುತ್ತಿಲ್ಲ. ನೀವು ದೇವಸ್ಥಾನದಲ್ಲಿ ಭಜನೆ ಅಥವಾ ಆರತಿಗಾಗಿ ಜೋರಾಗಿ ಸಂಗೀತವನ್ನು ನುಡಿಸುತ್ತೀರಿ. ಅದು ಜನರಿಗೆ ತೊಂದರೆ ಉಂಟುಮಾಡುವುದಿಲ್ಲವೇ? ಆಜಾನ್ ಹೇಗೆ ತೊಂದರೆ ಉಂಟುಮಾಡುತ್ತದೆ? ಇದು ಇಡೀ ದಿನದಲ್ಲಿ ಹತ್ತು ನಿಮಿಷಗಳ ಕಾಲ ಕೂಗಬಹುದು. ಇದರಿಂದ ಶಬ್ದ ಮಾಲಿನ್ಯ ಹೇಗೆ ಸಾಧ್ಯ ಎಂದು ನ್ಯಾಯಾಧೀಶರು ಮರು ಪ್ರಶ್ನೆ ಹಾಕಿದರು. ಇದನ್ನೂ ಓದಿ: 41 ಕಾರ್ಮಿಕರ ರಕ್ಷಣೆಯಾಯ್ತು.. ದೇಗುಲಕ್ಕೆ ತೆರಳಿ ದೇವರಿಗೆ ಧನ್ಯವಾದ ಹೇಳ್ತೀನಿ: ಸುರಂಗ ತಜ್ಞ ಅರ್ನಾಲ್ಡ್‌

ಆಜಾನ್‌ನಿಂದ ಶಬ್ದದ ಡೆಸಿಬಲ್ ಎಷ್ಟು? ಹಬ್ಬಗಳಲ್ಲಿ ಬಳಸುವ ಡಿಜೆ ಶಬ್ದದ ಡೆಸಿಬಲ್ ಎಷ್ಟು ಎಂದು ಕೇಳಿದ ಸಿಜೆ ಅಗರ್ವಾಲ್ ಉತ್ತರ ನೀಡಿದ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡರು. ಆಜಾನ್ ನಂಬಿಕೆ. ಈ ಅಭ್ಯಾಸವು ವರ್ಷಗಳಿಂದ ಒಟ್ಟಿಗೆ ನಡೆಯುತ್ತಿದೆ. ಇಂತಹ ಅರ್ಜಿಗಳನ್ನು ನಾವು ಮಾನ್ಯ ಮಾಡುವುದಿಲ್ಲ ಎಂದು ತಿಳಿಸಿದರು. ಅದಾಗ್ಯೂ ವಾದ ಮುಂದುವರಿಸಿದ ವಕೀಲರು ಆಜಾನ್ ದೇವಾಲಯಗಳಲ್ಲಿ ಆರತಿಗಿಂತ ಭಿನ್ನವಾಗಿದೆ. ಇದು ದಿನಕ್ಕೆ ಐದು ಬಾರಿ ನಡೆಯುತ್ತದೆ ಎಂದು ವಕೀಲರು ಒತ್ತಿ ಹೇಳಿದರು. ಇದನ್ನೂ ಓದಿ: ನಾವು ಆರಾಮಾಗಿದ್ದು, ಈಗ ದೀಪಾವಳಿ ಆಚರಿಸುತ್ತೇವೆ: ಸಂತಸ ಹಂಚಿಕೊಂಡ ಕಾರ್ಮಿಕರು

ಇದಕ್ಕೆ ಗರಂ ಆದ ಸಿಜೆ ಅಗರ್ವಾಲ್, ಹಾಗಾದರೆ ನಿಮ್ಮ ದೇವಸ್ಥಾನಗಳಲ್ಲಿ ಮುಂಜಾನೆ ಪ್ರಾರಂಭವಾಗುವ ಆ ಡೋಲು ಮತ್ತು ಸಂಗೀತದೊಂದಿಗೆ ಬೆಳಗಿನ ಆರತಿ ಇದು ಯಾರಿಗೂ ಯಾವುದೇ ಶಬ್ದ ಅಥವಾ ಗದ್ದಲವನ್ನು ಉಂಟುಮಾಡುವುದಿಲ್ಲವೇ? ಇದು ಪ್ರತಿ ನಿತ್ಯ ನಡೆಯುತ್ತದೆ. ಇದು ಶಬ್ದ ಮಾಲಿನ್ಯ ಮಾಡುವುದಿಲ್ಲ ಎಂದು ನೀವು ಹೇಳಬಹುದೇ ಎಂದು ಒತ್ತಿ ಕೇಳಿದರು. ಬಳಿಕ ಆಜಾನ್ ದಿನವಿಡೀ ಕೇವಲ 10 ನಿಮಿಷಗಳ ಕಾಲ ನಡೆಯುತ್ತದೆ ಮತ್ತು ಯಾವುದೇ ಮಾಲಿನ್ಯವನ್ನು ಉಂಟುಮಾಡುವುದಿಲ್ಲ ಎಂದು ಪೀಠವು ಪುನರುಚ್ಚರಿಸಿತು. ಇದನ್ನೂ ಓದಿ: ಧೈರ್ಯ ಮೆಚ್ಚುವಂತದ್ದು: ಸುರಂಗದಿಂದ ರಕ್ಷಿಸಲ್ಪಟ್ಟ ಕಾರ್ಮಿಕರ ಜೊತೆ ಮೋದಿ ಮಾತುಕತೆ

ಶಬ್ದ ಮಾಲಿನ್ಯವು ಡೆಸಿಬಲ್‌ಗಳ ಪರಿಭಾಷೆಯಲ್ಲಿ ಅಳತೆಯಾಗಿದೆ. 10 ನಿಮಿಷಗಳಲ್ಲಿ ಎಷ್ಟು ಡೆಸಿಬಲ್‌ಗಳು ಏರುತ್ತದೆ ಮತ್ತು ಅದು ಎಷ್ಟು ಶಬ್ದ ಮಾಲಿನ್ಯವನ್ನು ಉಂಟುಮಾಡುತ್ತದೆ? ಆಜಾನ್ ಸಮಯದಲ್ಲಿ ಡೆಸಿಬಲ್‌ಗಳನ್ನು ಅಳೆಯುವ ಈ ವೈಜ್ಞಾನಿಕ ಅಂಶದಲ್ಲಿ ನೀವು ವಾದಿಸಿ ನಂತರ ಮಾಲಿನ್ಯ ಹೇಗಾಗುತ್ತದೆ ಎಂದು ಹೇಳಬೇಕು ಆದರೆ ನೀವು ಈ ಅಂಶದ ಬಗ್ಗೆ ವಾದ ಮಾಡುತ್ತಿಲ್ಲ ಎಂದು ಪೀಠವು ಹೇಳಿತು. ಇದನ್ನೂ ಓದಿ: ಡಿ.ಕೆ.ಶಿವಕುಮಾರ್‌ಗೆ ರಿಲೀಫ್;‌ ಮೇಲ್ಮನವಿ ಹಿಂಪಡೆದ ಮನವಿ ಪರಿಗಣಿಸಿದ ಹೈಕೋರ್ಟ್

ಅರ್ಜಿದಾರರು ಯಾವುದೇ ನಿರ್ದಿಷ್ಟ ಪ್ರದೇಶದಲ್ಲಿ ಆಜಾನ್ (Azan) ಸಮಯದಲ್ಲಿ ಡೆಸಿಬಲ್ ಮಟ್ಟವನ್ನು ಅಳೆಯದೇ ಅಜಾನ್ ನಡೆಯುವ ಪ್ರದೇಶಗಳಲ್ಲಿ ವಿವಿಧ ಸಮುದಾಯಗಳು ಮತ್ತು ಧರ್ಮದ ಜನರು ವಾಸಿಸುತ್ತಿದ್ದಾರೆ. ಆದ್ದರಿಂದ ತೊಂದರೆಯಾಗಲಿದೆ ಮತ್ತು ಆರೋಗ್ಯದ ಅಪಾಯವನ್ನು ಉಂಟುಮಾಡುತ್ತದೆ ಎನ್ನುವ ಏಕೈಕ ವಾದವನ್ನು ಒಪ್ಪಲು ಸಾಧ್ಯವಿಲ್ಲ. ಇದು ಸಂಪೂರ್ಣವಾಗಿ ತಪ್ಪು ಕಲ್ಪನೆಯ ಪಿಐಎಲ್ ಆಗಿದೆ ಎಂದು ಪೀಠ ಹೇಳಿತು.  ಇದನ್ನೂ ಓದಿ: ಮಾನವೀಯತೆ, ಟೀಮ್‌ವರ್ಕ್‌ಗೆ ಅದ್ಭುತ ಉದಾಹರಣೆ – ಕಾರ್ಯಾಚರಣೆಯಲ್ಲಿ ಭಾಗಿಯಾದವರಿಗೆ ನಮಸ್ಕರಿಸುತ್ತೇನೆ: ಮೋದಿ

TAGGED:AzanGujarat high courtLoudspeakersmosqueNew Delhiಆಜಾನ್ಧ್ವನಿವರ್ಧಕನವದೆಹಲಿಮಸೀದಿಹೈಕೋರ್ಟ್
Share This Article
Facebook Whatsapp Whatsapp Telegram

Cinema News

Dhanush
ಧನುಷ್ ನನ್ನ ಗೆಳೆಯ – ಡೇಟಿಂಗ್ ವದಂತಿಗೆ ತೆರೆ ಎಳೆದ ಮೃಣಾಲ್ ಠಾಕೂರ್
Cinema Latest South cinema Top Stories
Love me like you do forever to go Yash Radhika Pandit Engagement 9th anniversary
ಉಂಗುರಕ್ಕೆ 9ನೇ ವರ್ಷದ ಸಂಭ್ರಮ – ವಿಶೇಷ ನೆನಪು ಹಂಚಿಕೊಂಡ ರಾಧಿಕಾ
Cinema Latest Sandalwood Top Stories
rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories

You Might Also Like

school bus fired
Bengaluru City

ಬೆಂಗಳೂರು| ಅಗ್ನಿಶಾಮಕದಳ ಕಚೇರಿ ಬಳಿಯೇ ಹೊತ್ತಿ ಉರಿದ ಶಾಲಾ ವಾಹನ – ವ್ಯಕ್ತಿ ಸಜೀವ ದಹನ

Public TV
By Public TV
9 minutes ago
Dog bite 1
Bidar

ಬೀದರ್‌ನಲ್ಲಿ ಹೆಚ್ಚಿದ ಬೀದಿನಾಯಿಗಳ ಹಾವಳಿ – ಇತ್ತ ಬ್ರಿಮ್ಸ್‌ನಲ್ಲಿ ಫ್ರೀ ಇಂಜೆಕ್ಷನ್ ಕೊಡದೇ ದೋಖಾ

Public TV
By Public TV
14 minutes ago
Asha 2
Bengaluru City

ಮಾಸಿಕ ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ – ಆಶಾ ಕಾರ್ಯಕರ್ತೆಯರಿಂದ ರಾಜ್ಯವ್ಯಾಪಿ ಹೋರಾಟ

Public TV
By Public TV
1 hour ago
Move the Mudola BCM office to the Taluk Administration Building 2
Bagalkot

ಮುಧೋಳ ಬಿಸಿಎಂ ಕಚೇರಿಯನ್ನು ತಾಲೂಕು ಆಡಳಿತ ಭವನಕ್ಕೆ ಸ್ಥಳಾಂತರಿಸಿ, ಇಲ್ಲವೇ ಬಂದ್ ಮಾಡಿ!

Public TV
By Public TV
9 hours ago
China
Latest

ವಿದೇಶಗಳಲ್ಲೂ ಪೊಲೀಸ್ ಸ್ಟೇಷನ್‌ – 53 ದೇಶಗಳಲ್ಲಿ ಚೀನಾದ ಕುತಂತ್ರ!

Public TV
By Public TV
9 hours ago
Priyanka Gandhi
Latest

`ಮಿಂತಾ ದೇವಿ’ ಟಿ ಶರ್ಟ್ ಹಾಕಿ ಪ್ರತಿಭಟನೆ – 124 ವರ್ಷದ ವೋಟರ್ ಪ್ರತ್ಯಕ್ಷ; ರಾಹುಲ್‌, ಪ್ರಿಯಾಂಕಾಗೆ ತರಾಟೆ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?