ತುಮಕೂರು: ಮಹಿಳೆಯೊಬ್ಬರು ಪತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಕೊಂದು ಶವವನ್ನು ಚರಂಡಿಗೆ ಎಸೆದ ಘಟನೆ ತುಮಕೂರು ನಗರದ ಬಡ್ಡಿಹಳ್ಳಿಯಲ್ಲಿ ನಡೆದಿದೆ.
ನಾರಾಯಣ್(52) ಮೃತ ದುರ್ದೈವಿ. ನಾರಾಯಣ್ ಪತ್ನಿ ಅನ್ನಪೂರ್ಣ ಈ ಗಂಭೀರ ಕೊಲೆ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಮೋದಿ ಸರ್ಕಾರದಿಂದ ಲವ್ ಲೆಟರ್ ಬಂದಿದೆ – ಆಪ್ ನಾಯಕ
ಅನ್ನಪೂರ್ಣ ಅವರಿಗೆ ಅಕ್ರಮ ಸಂಬಂಧ ಇತ್ತು. ಇದೇ ವಿಚಾರಕ್ಕೆ ನಾರಾಯಣ್ ಮತ್ತು ಅನ್ನಪೂರ್ಣ ಅವರ ನಡುವೆ ಪ್ರತಿನಿತ್ಯ ಜಗಳ ಆಗುತ್ತಲೇ ಇತ್ತು. ಅನ್ನಪೂರ್ಣ ಇದೇ ವಿಚಾರಕ್ಕೆ ಗಂಡನನ್ನು ಹತ್ಯೆ ಮಾಡಿದ್ದಾಳೆ ಎಂಬ ಆರೋಪ ಬಂದಿದೆ. ಇದನ್ನೂ ಓದಿ: ವೈಟ್ ಬೋರ್ಡ್ ವಾಹನದಲ್ಲಿ ಪ್ರಯಾಣಿಕರನ್ನು ಸಾಗಿಸೋದು ಅಕ್ಷಮ್ಯ ಅಪರಾಧ: ಸುಧಾಕರ್
ಮೃತ ನಾರಾಯಣ್ ನೆಲಮಂಗಲ ಬಳಿಯ ಟೋಲ್ ನಲ್ಲಿ ಕೆಲಸ ಮಾಡಿಕೊಂಡಿದ್ದರು. ತುಮಕೂರು ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅನ್ನಪೂರ್ಣ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.