Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೂರ್ಯಗ್ರಹಣ ಬರಿಗಣ್ಣಲ್ಲಿ ನೋಡಲೇಬೇಡಿ – ಗ್ರಹಣದ ಬಗ್ಗೆ ಮಾಹಿತಿ ನೀಡಿದ್ದಾರೆ ಭೌತಶಾಸ್ತ್ರಜ್ಞ ಎ.ಪಿ ಭಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಸೂರ್ಯಗ್ರಹಣ ಬರಿಗಣ್ಣಲ್ಲಿ ನೋಡಲೇಬೇಡಿ – ಗ್ರಹಣದ ಬಗ್ಗೆ ಮಾಹಿತಿ ನೀಡಿದ್ದಾರೆ ಭೌತಶಾಸ್ತ್ರಜ್ಞ ಎ.ಪಿ ಭಟ್

Karnataka

ಸೂರ್ಯಗ್ರಹಣ ಬರಿಗಣ್ಣಲ್ಲಿ ನೋಡಲೇಬೇಡಿ – ಗ್ರಹಣದ ಬಗ್ಗೆ ಮಾಹಿತಿ ನೀಡಿದ್ದಾರೆ ಭೌತಶಾಸ್ತ್ರಜ್ಞ ಎ.ಪಿ ಭಟ್

Public TV
Last updated: October 22, 2022 3:01 pm
Public TV
Share
3 Min Read
solar eclipse
SHARE

ಉಡುಪಿ: ಸಂಜೆಯ ಸೂರ್ಯಗ್ರಹಣ (Solar Eclipse) ಕಣ್ತುಂಬಿಕೊಳ್ಳಲು ಕರಾವಳಿ ಜನ ಸಿದ್ಧರಾಗುತ್ತಿದ್ದಾರೆ. ಆಶ್ವಯುಜ ಮಾಸದ ಅಂತ್ಯದಲ್ಲಿ ಬರುವ ಅಮಾವಾಸ್ಯೆ ಚಂದ್ರ, ಈ ವರ್ಷ ಅಕ್ಟೋಬರ್ 25ರಂದು ವರ್ಷದ 2ನೇ ಸೂರ್ಯಗ್ರಹಣವನ್ನು ತರುತ್ತಿದೆ.

ಸೂರ್ಯಗ್ರಹಣವೆಂದರೇನು? ಗ್ರಹಣ ಆಗೋದು ಹೇಗೆ? ಜನ ಏನ್ಮಾಡಬೇಕು? ಹೇಗೆ ಗ್ರಹಣ ನೋಡಬೇಕು ಅಂತ ಹಿರಿಯ ಭೌತಶಾಸ್ತ್ರಜ್ಞ ಉಡುಪಿಯ ಎ.ಪಿ ಭಟ್ (A.P.Bhat) ವಿವರಿಸಿದ್ದಾರೆ. ಚಂದ್ರನು ಸೂರ್ಯ ಮತ್ತು ಭೂಮಿಯ ನಡುವಿನಲ್ಲಿ ಬರುವ, ಇರುವ ಕಾಲವನ್ನು ಸೂರ್ಯಗ್ರಹಣ ಎಂದು ಕರೆಯುತ್ತೇವೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ಮೂಲಕ ರಾಜ್ಯದಲ್ಲಿ 150 ಕ್ಷೇತ್ರ ಗೆಲ್ಲುತ್ತೇವೆ: ಡಿಕೆಶಿ

a.p.bhat

ಪ್ರತಿ ಅಮಾವಾಸ್ಯೆಯ ದಿನ ಚಂದ್ರನು ಭೂಮಿ ಮತ್ತು ಸೂರ್ಯನ ಮಧ್ಯೆ ಹಾದು ಹೋಗುವಾಗ, ಈ ಮೂರು ಆಕಾಶಕಾಯಗಳು ಒಂದು ಸರಳರೇಖೆಯಲ್ಲಿರುವುದಿಲ್ಲ. ಚಂದ್ರನ ಭೂಮಿಯ ಸುತ್ತ ಸುತ್ತುವ ಚಲನೆಯ ಸಮತಲ ಹಾಗೂ ಸೂರ್ಯನ ಸಮತಲ (ಭೂಮಿಯ ದೃಷ್ಟಿಯಿಂದ)ಗಳ ನಡುವಿನಲ್ಲಿ 5 ಡಿಗ್ರಿಗಳ ಅಂತರವಿರುವುದರಿಂದ ಪ್ರತಿ ಅಮಾವಾಸ್ಯೆಗೆ ಗ್ರಹಣ ಸಂಭಸುವುದಿಲ್ಲ. ಚಂದ್ರನು ರಾಹು ಅಥವಾ ಕೇತು ಬಿಂದುವಿನಲ್ಲಿ ಬಂದಾಗ ಮಾತ್ರ ಸೂರ್ಯಗ್ರಹಣ ಸಂಭವಿಸುತ್ತದೆ.

ಚಂದ್ರನು ಸೂರ್ಯನಿಗೆ ಅಡ್ಡ ಬಂದು, ಸೂರ್ಯನ ಒಂದು ಭಾಗವು ಮಾತ್ರ ಗೋಚರಿಸಿದರೆ, ಅದು ಪಾರ್ಶ್ವ ಸೂರ್ಯಗ್ರಹಣ ಆಗಿರುತ್ತದೆ. ಅದೇ ರೀತಿ ಚಂದ್ರನು ಸೂರ್ಯನನ್ನು ಸಂಪೂರ್ಣವಾಗಿ ಆವರಿಸಿದರೆ ಅದು ಖಗ್ರಾಸ ಸೂರ್ಯಗ್ರಹಣ. ಅ.25ರ ಸೂರ್ಯಗ್ರಹಣವು ಗೋಚರಿಸುವ ಎಲ್ಲ ಪ್ರದೇಶಗಳಲ್ಲಿ ಪಾರ್ಶ್ವ ಸೂರ್ಯ ಗ್ರಹಣವಾಗಿರುತ್ತದೆ.

ಸಾಮಾನ್ಯವಾಗಿ ಪ್ರತಿ ಸೂರ್ಯಗ್ರಹಣದ ಮೊದಲು ಅಥವಾ ನಂತರ ಬರುವ ಹುಣ್ಣಿಮೆಯ ದಿನ ಚಂದ್ರಗ್ರಹಣ ಸಂಭವಿಸುತ್ತದೆ. ಈ ಬಾರಿ ಕೂಡ ನವೆಂಬರ್ 8ರಂದು ಚಂದ್ರಗ್ರಹಣವನ್ನು (ಚಂದ್ರ ಮತ್ತು ಸೂರ್ಯನ ಮಧ್ಯೆ ಭೂಮಿ ಬರುವ ಸಂದರ್ಭ) ನೋಡಬಹುದು. ಇದನ್ನೂ ಓದಿ: ರಾಜ್ಯಾದ್ಯಂತ 10,889 ಮಸೀದಿಗಳಿಗೆ ಲೌಡ್ ಸ್ಪೀಕರ್ ಬಳಸಲು ಅನುಮತಿ ನೀಡಿದ ಸರ್ಕಾರ

world map

ಯಾವ ಪ್ರದೇಶಗಳಲ್ಲಿ ಗೋಚರ?
ಈ ಗ್ರಹಣವು ಭಾರತದ ಎಲ್ಲಾ ಪ್ರದೇಶಗಳಲ್ಲಿ ಹಾಗೂ ಯೂರೋಪ್ ಮತ್ತು ಏಷ್ಯಾದ ಮಧ್ಯಭಾಗದ ವಿವಿಧ ದೇಶಗಳಲ್ಲಿ ಗೋಚರಿಸುತ್ತದೆ. ರಷ್ಯಾದಲ್ಲಿ ಈ ಗ್ರಹಣವು ಗೋಚರಿಸುವಾಗ ಚಂದ್ರನು ಸೂರ್ಯನನ್ನು ಗರಿಷ್ಠ ಅಂದರೆ ಶೇ.82ರಷ್ಟನ್ನು ಆವರಿಸಿಕೊಂಡಿರುತ್ತಾನೆ. ಭಾರತದಲ್ಲಿ ಈ ಗ್ರಹಣವು ಉತ್ತರದ ಲೇಕ್‌ನಲ್ಲಿ ಶೇ.54ರಷ್ಟು ಹಾಗೂ ದೆಹಲಿಯಲ್ಲಿ ಶೇ.44ರಷ್ಟು ಸೂರ್ಯನನ್ನು ಆವರಿಸಿರುವುದು ಕಂಡು ಬರುತ್ತದೆ.

ಕರ್ನಾಟಕದಲ್ಲಿ ಎಲ್ಲಿಂದ ಗ್ರಹಣ ನೋಡಬಹುದು?
ಕರ್ನಾಟಕದ ಎಲ್ಲ ಭಾಗಗಳಿಂದ ಗ್ರಹಣವನ್ನು ನೋಡಬಹುದು. ರಾಜ್ಯದ ನಾನಾ ಸ್ಥಳಗಳಲ್ಲಿ ಈ ಗ್ರಹಣವು ಸಂಜೆ 5 ರಿಂದ 6 ಗಂಟೆಗೆ ನಡೆಯಲಿರುವ ಸೂರ್ಯಾಸ್ತದವರೆಗೂ ಗೋಚರಿಸುತ್ತದೆ. ಪಶ್ಚಿಮ ಮತ್ತು ನೈಋತ್ಯದ ಕಡೆ ಕ್ಷಿತಿಜವು ಗ್ರಹಣ ವೀಕ್ಷಿಸಲು ಉತ್ತಮ ಸ್ಥಳವಾಗಿರುತ್ತದೆ. ಸಮುದ್ರ ತೀರದಲ್ಲಿ ಗ್ರಹಣ ಬಹಳ ಚೆನ್ನಾಗಿ ಕಾಣುತ್ತದೆ.

ಬೆಂಗಳೂರಿನಲ್ಲಿ ಈ ಗ್ರಹಣ ಶೇ.10ರಷ್ಟು ಮಾತ್ರ ಕಂಡುಬರುತ್ತದೆ. ಸುಂದರ ಪ್ರಾಕೃತಿಕ ದೃಶ್ಯದೊಂದಿಗೆ ಕಡಲ ತೀರಕ್ಕೆ ಸಮೀಪವಿರುವ ಉಡುಪಿಯು ಈ ಗ್ರಹಣ ವೀಕ್ಷಿಸಲು ಉತ್ತಮ ಪ್ರದೇಶ. ಉಡುಪಿಯಲ್ಲಿ ಈ ಗ್ರಹಣವು ಸಂಜೆ 5.08ಕ್ಕೆ ಪ್ರಾರಂಭಗೊಂಡು 5:50ರ ಸುಮಾರಿಗೆ ಗರಿಷ್ಠ ಪ್ರಮಾಣದಲ್ಲಿ ಗೋಚರಿಸುತ್ತದೆ. ಇದನ್ನೂ ಓದಿ: ಈ ಬಾರಿ ಸಂಪುಟ ವಿಸ್ತರಣೆಯೋ, ಪುನರ್‌ ರಚನೆಯೋ ಕಾದು ನೋಡಿ: ಬೊಮ್ಮಾಯಿ

solar eclipse1

ಉಡುಪಿಯಲ್ಲಿ ಈ ಗ್ರಹಣವು ಮುಗಿಯುವ ಸಮಯ ಸಂಜೆ 6:28. ಆದರೆ ಅಂದಿನ ಸೂರ್ಯಾಸ್ತವು 6:06ಕ್ಕೆ ಆಗುವುದು. ಹೀಗಾಗಿ ಅ.25ರಂದು ಉಡುಪಿಯಲ್ಲಿ ಅಸ್ತಮಿಸುವ ಸೂರ್ಯನು ಗ್ರಹಣ ಹಿಡಿದ ಸೂರ್ಯನಾಗಿರುತ್ತಾನೆ. ಇದು ಒಂದು ಅಪರೂಪದ ವಿಶಿಷ್ಟ ದೃಶ್ಯವಾಗಿರುತ್ತದೆ.

ನೋಡುವುದು ಹೇಗೆ?: ಉಡುಪಿಯ ಪೂರ್ಣಪ್ರಜ್ಞ ಹವ್ಯಾಸಿ ಖಗೋಳ ವೀಕ್ಷಕರ ಸಂಘವು (ಪಿಎಎಸಿ) ಪ್ರತಿ ಗ್ರಹಣದ ಸಮಯದಂತೆ ಈ ಬಾರಿಯ ಗ್ರಹಣವನ್ನು ಕೂಡ ವೀಕ್ಷಿಸಲು ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಲ್ಪೆ ಅಭಿವೃದ್ಧಿ ಸಮಿತಿಯ ಸಹಯೋಗದೊಂದಿಗೆ ಅವಕಾಶ ಒದಗಿಸಲಿದೆ. ಆಸಕ್ತ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಆಸಕ್ತ ಸಾರ್ವಜನಿಕರು ಈ ಗ್ರಹಣವನ್ನು ಮಲ್ಪೆ ಬೀಚ್‌ನಲ್ಲಿ ಸಂಜೆ 5:00ರಿಂದ ಸೂರ್ಯಾಸ್ತದವರೆಗೂ ನೋಡಬಹುದಾಗಿದೆ. ಇದನ್ನೂ ಓದಿ: ಜನಪ್ರತಿನಿಧಿಗಳೇ ಬದುಕಿದ್ದೀರಾ? ಅಧಿಕಾರಿಗಳೇ ಇತ್ತ ಗಮನಿಸಿ – ಫ್ಲೆಕ್ಸ್‌ಗೆ ಚಪ್ಪಲಿ ಹಾರ ಹಾಕಿ ಆಕ್ರೋಶ

ಗ್ರಹಣವನ್ನು ಬರಿಗಣ್ಣಿನಲ್ಲಿ ನೋಡಬೇಡಿ… ಎಚ್ಚರಿಕೆ!
ಯಾರೂ ಸಹ ಯಾವುದೇ ಸೂರ್ಯಗ್ರಹಣವನ್ನು ಬರಿಗಣ್ಣಿನಿಂದ ನೋಡಬಾರದು. ಟೆಲಿಸ್ಕೋಪ್, ದುರ್ಬೀನ್, ಕ್ಯಾಮೆರಾಗಳಿಂದ ಕೂಡ ಸೂರ್ಯಗ್ರಹಣವನ್ನು ನೋಡುವುದು ಹಾನಿಕಾರಕ. ಸೂರ್ಯಗ್ರಹಣವನ್ನು ಯಾವಾಗಲೂ ವಿಶೇಷವಾದ ಗ್ರಹಣ ವೀಕ್ಷಣಾ ಕನ್ನಡಕಗಳಿಂದ ಮಾತ್ರ ನೋಡಬೇಕು. ಪಿನ್-ಹೋಲ್‌ಗಳ ಮೂಲಕ ಸೂರ್ಯನ ಪ್ರಕ್ಷೇಪಣವನ್ನು ಯಾವುದೇ ಹಾನಿಯಿಲ್ಲದೆ ನೋಡಬಹುದು. ಎಕ್ಸ್-ರೇ ಹಾಳೆಗಳಿಂದ ಕೂಡ ಗ್ರಹಣವನ್ನು ನೋಡಬಾರದು.

Live Tv
[brid partner=56869869 player=32851 video=960834 autoplay=true]

TAGGED:A.P.BhatPhysicistsolar eclipseudupiಉಡುಪಿಎ.ಪಿ.ಭಟ್‌ಭೌತಶಾಸ್ತ್ರಜ್ಞಸೂರ್ಯಗ್ರಹಣ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Haveri Bus Accident 1
Districts

ವೇಗವಾಗಿ ಬಂದು ಬೇಕರಿಗೆ ನುಗ್ಗಿದ ಬಸ್ – 2 ವರ್ಷದ ಮಗು ಸಾವು, ಎದೆ ಝಲ್ ಎನ್ನುವ ವಿಡಿಯೋ ವೈರಲ್

Public TV
By Public TV
3 minutes ago
Sunilkumar
Bagalkot

ಅಹಿಂದಕ್ಕೆ ಅನ್ಯಾಯ ಎಸಗಿದ ಕಾಂಗ್ರೆಸ್‌ ಸರ್ಕಾರವನ್ನು ತಿರಸ್ಕರಿಸಿ: ಸುನಿಲ್‌ ಕುಮಾರ್‌

Public TV
By Public TV
36 minutes ago
Shreyas Iyer
Cricket

IPL 2026 | ಜಿಟಿ ವಿರುದ್ಧ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ದಂಡ

Public TV
By Public TV
47 minutes ago
Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
57 minutes ago
ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
1 hour ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?