ನವದೆಹಲಿ: ದೆಹಲಿಯಲ್ಲಿ ಭೀಕರವಾಗಿ ಹತ್ಯೆಯಾದ ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್ (Shraddha Walker) ಪ್ರಕರಣವನ್ನು ಸಿಬಿಐ (CBI) ತನಿಖೆಗೆ ವರ್ಗಾಯಿಸುವಂತೆ ದೆಹಲಿ ಹೈಕೋರ್ಟ್ಗೆ (Delhi HighCourt) ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದೆ.
ವಕೀಲ (Advocate) ಜೋಶಿನಿ ತುಲಿ (Joshini Tuli) ಈ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಲು ಮನವಿ ಮಾಡಲಾಗಿದೆ. ಇದನ್ನೂ ಓದಿ: ಪ್ರಬಲ ನಾಯಕನಿಲ್ಲದಿದ್ರೆ ಅಫ್ತಾಬ್ನಂಥ ಹಂತಕರು ಪ್ರತಿ ನಗರದಲ್ಲೂ ಹುಟ್ತಾರೆ – ಅಸ್ಸಾಂ ಸಿಎಂ
ಅರ್ಜಿಯಲ್ಲಿ ಏನಿದೆ?: ಶ್ರದ್ಧಾ ಹತ್ಯೆಯಾಗಿ 6 ತಿಂಗಳಾಗಿದೆ, ದೇಹದ ತುಂಡುಗಳನ್ನು ಹಲವು ಸ್ಥಳಗಳಲ್ಲಿ ಎಸೆಯಲಾಗಿದೆ. ಸಾಕ್ಷಿಗಳನ್ನು ಹುಡುಕಲು ದೆಹಲಿ ಪೊಲೀಸರ (Delhi Police) ಬಳಿ ಆಡಳಿತಾತ್ಮಕ ಅಥವಾ ಸಿಬ್ಬಂದಿ ಕೊರತೆ ಮತ್ತು ಸಾಕಷ್ಟು ತಾಂತ್ರಿಕ ಮತ್ತು ವೈಜ್ಞಾನಿಕ ಸಲಕರಣೆಗಳ ಕೊರತೆ ಇದೆ. ಈ ಹಿನ್ನಲೆ ಅವರು ಸಮರ್ಥವಾಗಿ ತನಿಖೆ ನಡೆಸಲಾಗುವುದಿಲ್ಲ. ಇದನ್ನೂ ಓದಿ: ಪೀಸ್ ಪೀಸ್ ಪ್ರೇಮಿಯ ಮತ್ತಷ್ಟು ಕ್ರೂರತೆ ಬಹಿರಂಗ- ದೆಹಲಿ ಮಾತ್ರವಲ್ಲ ಡೆಹ್ರಾಡೂನ್ನಲ್ಲೂ ದೇಹದ ತುಂಡು ಎಸೆತ
ಅಲ್ಲದೇ ದೆಹಲಿ ಪೊಲೀಸರು ತನಿಖೆಯ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ವಿವರಗಳನ್ನು ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಬಹಿರಂಗಪಡಿಸಿದ್ದಾರೆ. ಮಾಹಿತಿಯ ಪ್ರಕಾರ ತನಿಖೆಯ ಮುಂದುವರಿಕೆಗಾಗಿ ಆರೋಪಿಗಳನ್ನು ಐದು ವಿವಿಧ ರಾಜ್ಯಗಳಿಗೆ ಕರೆದೊಯ್ಯಲಾಗುವುದು ಎಂದು ಹೇಳಲಾಗಿದೆ. ಆದ್ದರಿಂದ ಈ ಪ್ರಕರಣವು ಅಂತರರಾಜ್ಯ ಮತ್ತು ದೆಹಲಿ ಪೊಲೀಸರ ಪ್ರಾದೇಶಿಕ ವ್ಯಾಪ್ತಿಯನ್ನು ಮೀರಿದೆ.
ಇದು ಸೈಬರ್ ಕ್ರೈಂ (Cyber Crime) ವ್ಯಾಪ್ತಿಗೂ ಬರಲಿದೆ. ಡೇಟಿಂಗ್ ಆ್ಯಪ್ಗಳ (Dating App) ಸುರಕ್ಷತೆಯ ಬಗ್ಗೆಯೂ ಯೋಚಿಸಬೇಕಿದೆ. ಎಲ್ಲ ಆಯಾಮದಲ್ಲಿ ತನಿಖೆ ನಡೆಯಲು ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವುದು ಸೂಕ್ತ, ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಈ ಬಗ್ಗೆ ಸೂಚನೆ ನೀಡಬೇಕು ಎಂದು ವಕೀಲರು ಮನವಿ ಮಾಡಿದ್ದಾರೆ.