Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ಲಾಸ್ಮಾ ಥೆರಪಿ ಆರಂಭವಾಗಿರುವುದು ರಾಜ್ಯಕ್ಕೆ ಐತಿಹಾಸಿಕ ಕ್ಷಣ: ಡಾ. ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ಲಾಸ್ಮಾ ಥೆರಪಿ ಆರಂಭವಾಗಿರುವುದು ರಾಜ್ಯಕ್ಕೆ ಐತಿಹಾಸಿಕ ಕ್ಷಣ: ಡಾ. ಸುಧಾಕರ್

Bengaluru City

ಪ್ಲಾಸ್ಮಾ ಥೆರಪಿ ಆರಂಭವಾಗಿರುವುದು ರಾಜ್ಯಕ್ಕೆ ಐತಿಹಾಸಿಕ ಕ್ಷಣ: ಡಾ. ಸುಧಾಕರ್

Public TV
Last updated: April 25, 2020 4:22 pm
Public TV
Share
3 Min Read
vlcsnap 2020 04 25 09h45m14s232
SHARE

ಬೆಂಗಳೂರು: ಕೋವಿಡ್ ಸೋಂಕಿತರಿಗೆ ಹೆಚ್ಚು ಪರಿಣಾಮಕಾರಿ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿರುವ ಪ್ಲಾಸ್ಮಾ ಚಿಕಿತ್ಸೆಗೆ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರು ಈ ಉಪಕ್ರಮಕ್ಕೆ ಚಾಲನೆ ನೀಡಿದರು. ಗಂಭೀರ ಪರಿಸ್ಥಿತಿಯಲ್ಲಿರುವ ಕೊರೊನಾ ಸೋಂಕಿತ ವ್ಯಕ್ತಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ಪರಿಣಾಮಕಾರಿಯಾಗಿ ಇರುವುದು ಕಂಡು ಬಂದಿದೆ. ಇದೀಗ ರಾಜ್ಯದಲ್ಲಿ ಕೂಡ ಈ ಪ್ರಕ್ರಿಯೆ ಲಭ್ಯವಾದಂತಾಗಿದೆ.

Happy to announce the commencement of Clinical Trials for Plasma Therapy that holds great promise to treat severely infected #COVID19 patients. Health Min @sriramulubjp & I initiated this significant step at Victoria Hospital today morning.. @PMOIndia @BSYBJP @drharshvardhan pic.twitter.com/D2YOpRVFbm

— Dr Sudhakar K (@mla_sudhakar) April 25, 2020

ಈ ಸಂದರ್ಭದಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು, ಕರ್ನಾಟಕ ರಾಜ್ಯಕ್ಕೆ ಇದೊಂದು ಐತಿಹಾಸಿಕ ಕ್ಷಣವಾಗಿದ್ದು, ಪ್ಲಾಸ್ಮಾ ಚಿಕಿತ್ಸೆಯಿಂದ ಸೋಂಕಿತರು ಗುಣಮುಖರಾದರೆ ಅತ್ಯಂತ ಸಂತೋಷದ ಸಂಗತಿ ಎಂದು ಹೇಳಿದರು. ಇಂದಿನಿಂದ ಇದರ ಕ್ಲಿನಿಕಲ್ ಪ್ರಯೋಗ ಆರಂಭವಾಗಿದ್ದು, ವೆಂಟಿಲೇಟರ್ ನಲ್ಲಿರುವ ಪೀಡಿತರಿಗೆ ಈ ಚಿಕಿತ್ಸೆ ನೀಡಲಾಗುವುದು. ಕೋವಿಡ್‍ನಿಂದ ಗುಣಮುಖರಾಗಿರುವ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸಹಕರಿಸಲು ಮುಂದೆ ಬಂದಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

PLASHA TERAPHY

ಈ ಚಿಕಿತ್ಸೆಗೆ ಗುಣಮುಖರಾಗಿರುವ ವ್ಯಕ್ತಿಗಳು ಸ್ವಯಂಪ್ರೇರಿತರಾಗಿ ಬಂದು ಸಹಕಾರ ನೀಡಬೇಕಾಗಿದೆ. ಗುಣಮುಖರಾಗಿರುವ ವ್ಯಕ್ತಿಗಳು 2 ವಾರದ ಅಂತರದಲ್ಲಿ ಕನಿಷ್ಠ ಇಬ್ಬರು ಅಥವಾ ಮೂವರಿಗೆ ಈ ನೆರವು ನೀಡಬಹುದಾಗಿದ್ದು, ಈ ನಿಟ್ಟಿನಲ್ಲಿ ಸಹಕರಿಸಬೇಕೆಂದು ಸಚಿವ ಸುಧಾಕರ್ ಹೇಳಿದರು

ವಿಕ್ಟೋರಿಯಾ ಆಸ್ಪತ್ರೆಯ ಡೀನ್ ಡಾ.ಸಿ.ಆರ್ ಜಯಂತಿ, ಬೆಂಗಳೂರು ಇನ್‍ಸ್ಟಿಟ್ಯೂಟ್ ಆಫ್ ಆಂಕಾಲಜಿಯ ಡಾ. ವಿಶಾಲ್ ರಾವ್ ಹಾಗೂ ಬೆಂಗಳೂರು ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ರಮೇಶ್ ಈ ಸಂದರ್ಭದಲ್ಲಿ ಹಾಜರಿದ್ದರು.

This is the technology in covid designated Victoria Hospital to ensure safety of our Doctors & health workers treating Covid patients. pic.twitter.com/HWXwBYsaWf

— Dr Sudhakar K (@mla_sudhakar) April 25, 2020

ಪ್ಲಾಸ್ಮಾ ಥೆರಪಿ:
ಪ್ಲಾಸ್ಮಾ ಥೆರಪಿಯು ನೆರೆಯ ಕೇರಳ ರಾಜ್ಯದಲ್ಲಿ ಅತ್ಯಂತ ಯಶಸ್ವಿಯಾಗಿದ್ದು, ಕರ್ನಾಟಕದಲ್ಲೂ ಇದನ್ನು ನಡೆಸಲು ಅನುಮತಿ ನೀಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಸರ್ಕಾರ ಮನವಿ ಸಲ್ಲಿಸಿತ್ತು. ಇತ್ತೀಚೆಗಷ್ಟೇ ಕೇಂದ್ರ ಸಾರ್ವಜನಿಕ ಆರೋಗ್ಯ ನಿರ್ದೇಶನಾಲಯವು ಬೆಂಗಳೂರು ಇನ್‍ಸ್ಟಿಟ್ಯೂಟ್ ಆಫ್ ಆಂಕಾಲಜಿಯ ವೈದ್ಯ ಡಾ. ವಿಶಾಲ್ ರಾವ್ ಅವರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಅನುಮತಿ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಪ್ಲಾಸ್ಮಾ ಥೆರಪಿಯನ್ನು ಈ ಹಿಂದೆಯೂ ಕೂಡ ಎಬೋಲಾ ಮತ್ತು ಸ್ವೈನ್ ಫ್ಲೂ ನಂತಹ ಕಾಯಿಲೆಗಳಿಗೆ ಯಶಸ್ವಿಯಾಗಿ ಉಪಯೋಗಿಸಲಾಗಿದ್ದು, ಕೋವಿಡ್ ಸೋಂಕಿತರಿಗೆ ಪರಿಣಾಮಕಾರಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಇದೊಂದು ಮಹತ್ವದ ಬೆಳವಣಿಗೆ ಎಂದೇ ಹೇಳಬಹುದಾಗಿದೆ.

Corona Virus New

ಏನಿದು ಪ್ಲಾಸ್ಮಾ ಥೆರಪಿ?
* ಪ್ಲಾಸ್ಮಾ ಎಂದರೆ ರಕ್ತದ ಕಣ (ಹಳದಿ ದ್ರವಾಂಶ). ರಕ್ತದಲ್ಲಿರುವ ರೋಗ ನಿರೋಧಕ ಅಂಶ ಇರುವುದು ಪ್ಲಾಸ್ಮಾದಲ್ಲಿ
* ಪ್ಲಾಸ್ಮಾ ಥೆರಪಿ ಎಂದರೆ ಗುಣಮುಖರಾಗಿರುವ ವ್ಯಕ್ತಿಯ ರಕ್ತದಲ್ಲಿರುವ ಪ್ಲಾಸ್ಮಾವನ್ನು ಚಿಂತಾಜನಕ ಸ್ಥಿತಿಯಲ್ಲಿರುವ ರೋಗಿಯ ರಕ್ತಕ್ಕೆ ಇಂಜೆಕ್ಟ್ ಮಾಡುವುದು.
* ಗುಣಮುಖರಾದವರ ರಕ್ತದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರುತ್ತೆ. ಇದೇ ರಕ್ತದಲ್ಲಿರುವ ಪ್ಲಾಸ್ಮಾವನ್ನು ರೋಗಿಗೆ ನೀಡಿದರೆ ಆಗ ಆ ರೋಗಿಯ ರೋಗ ನಿರೋಧಕ ಶಕ್ತಿಯೂ ಹೆಚ್ಚಾಗಿ ಶೀಘ್ರ ಗುಣಮುಖರಾಗುತ್ತಾರೆ.
* ಕೊರೊನಾದಿಂದ ಗುಣಮುಖರಾಗಿರುವ ವ್ಯಕ್ತಿಯ ಪ್ಲಾಸ್ಮಾವನ್ನು ಕೊರೊನಾದಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿರುವ ರೋಗಿಗೆ ಇಂಜೆಕ್ಟ್ ಮಾಡಿದರೆ ಆ ರೋಗಿಯ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ಶೀಘ್ರ ಗುಣಮುಖರಾಗುತ್ತಾರೆ.
* ಪ್ಲಾಸ್ಮಾ ಚಿಕಿತ್ಸೆಯಿಂದ ರೋಗಿಗಳು 3 ರಿಂದ 7 ದಿನದೊಳಗೆ ಗುಣಮುಖರಾಗುವ ನಿರೀಕ್ಷೆ

Corona Lab a

ಯಾರು ಪ್ಲಾಸ್ಮಾ ದಾನ ಮಾಡಬಹುದು?
* ಕೊರೊನಾದಿಂದ ಗುಣಮುಖರಾಗಿರುವ ವ್ಯಕ್ತಿ ಪ್ಲಾಸ್ಮಾ ದಾನ ಮಾಡಬಹುದು
* ಕೊರೊನಾದಿಂದ ಗುಣಮುಖರಾದ ವ್ಯಕ್ತಿ 28 ದಿನಗಳ ಬಳಿಕ ಪ್ಲಾಸ್ಮಾ ದಾನ ಮಾಡಬಹುದು
* ಒಬ್ಬ ರೋಗಿಯನ್ನ ಗುಣಪಡಿಸಲು 200-250 ಮಿಲಿ ಲೀಟರ್ ಪ್ಲಾಸ್ಮಾ ಅಗತ್ಯ
* ಒಬ್ಬ ದಾನಿಯಿಂದ ಇಬ್ಬರಿಂದ ಐವರು ರೋಗಿಗಳನ್ನು ಗುಣಪಡಿಸಬಹುದು
* ರಕ್ತದಾನಕ್ಕಿಂತ ಪ್ಲಾಸ್ಮಾ ದಾನ ಭಿನ್ನ
* ರಕ್ತದಲ್ಲಿರುವ ಪ್ಲಾಸ್ಮಾವನ್ನಷ್ಟೇ ಸಂಗ್ರಹಿಸಿ ರಕ್ತವನ್ನು ಮತ್ತೆ ದಾನಿಗಳ ದೇಹಕ್ಕೆ ಬಿಡಲಾಗುತ್ತದೆ
* ಒಬ್ಬ ದಾನಿ ವಾರದಲ್ಲಿ ಎರಡು ಬಾರಿ ಪ್ಲಾಸ್ಮಾ ದಾನ ಮಾಡಬಹುದು

TAGGED:bengaluruCorona VirusDr. SudhakarPlasma TherapyPublic TVvictoria hospitalಕೊರೊನಾ ವೈರಸ್ಡಾ. ಸುಧಾಕರ್ಪಬ್ಲಿಕ್ ಟಿವಿಪ್ಲಾಸ್ಮಾ ಥೆರಪಿಬೆಂಗಳೂರುವಿಕ್ಟೋರಿಯಾ ಆಸ್ಪತ್ರೆ
Share This Article
Facebook Whatsapp Whatsapp Telegram

Cinema news

dhanush 1
ಸ್ಟಾರ್ ನಟಿ ಜೊತೆ ಶೀಘ್ರವೇ ಧನುಷ್ ಮದ್ವೆ
Cinema Latest South cinema
bigg boss vulture remarks
ರಣಹದ್ದು ಬಗ್ಗೆ ತಪ್ಪಾದ ಮಾಹಿತಿ; ಬಿಗ್ ಬಾಸ್ ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆಯಿಂದ ತಿಳುವಳಿಕೆ ನೋಟಿಸ್
Cinema Latest Main Post TV Shows
Anup Rubens
ಸೀತಾ ಪಯಣದ ಮೂಲಕ ಮತ್ತೆ ಸದ್ದು ಮಾಡಿದ ಅನೂಪ್ ರೂಬೆನ್ಸ್
Cinema Latest Sandalwood Top Stories
AMB Cinemas 2
ಬೆಂಗಳೂರಿನ ಕಪಾಲಿ ಥಿಯೇಟರ್ ಜಾಗದಲ್ಲಿ ಮಹೇಶ್ ಬಾಬು `ಎಎಂಬಿ ಸಿನಿಮಾಸ್’.. ಇದರ ಸ್ಪೆಷಾಲಿಟಿ ಏನು?
Bengaluru City Cinema Latest Main Post South cinema

You Might Also Like

Train
Bengaluru City

ಪೊಂಗಲ್ ಹಬ್ಬ: ಕೊಟ್ಟಾಯಂ-ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

Public TV
By Public TV
9 minutes ago
Rajanna DK Shivakumar
Bengaluru City

ಡಿಕೆಶಿ – ರಾಜಣ್ಣ ನಡ್ವೆ ಪ್ರತಿಷ್ಠೆಯ ಕಣವಾಯ್ತಾ ಅಪೆಕ್ಸ್ ಬ್ಯಾಂಕ್ ಚುನಾವಣೆ? – ನಿರ್ದೇಶಕ ಸ್ಥಾನಕ್ಕೆ ಕೆಎನ್‌ಆರ್‌ ನಾಮಪತ್ರ ಸಲ್ಲಿಕೆ!

Public TV
By Public TV
29 minutes ago
kobbari hori death haveri
Haveri

ಹಾವೇರಿ| ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೆಸರು ಮಾಡಿದ್ದ ಕೊಬ್ಬರಿ ಹೋರಿ ಸಾವು

Public TV
By Public TV
52 minutes ago
Ladli Behna Yojana
Latest

ಫ್ರೀ ಗ್ಯಾರಂಟಿಯಿಂದ BJP ನೇತೃತ್ವದ ಮಧ್ಯಪ್ರದೇಶ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ – ಬಾಕಿ ಸಾಲ 4.64 ಲಕ್ಷ ಕೋಟಿಗೆ ಏರಿಕೆ!

Public TV
By Public TV
56 minutes ago
HDK and Priyank Kharge
Districts

ಜೆಡಿಎಸ್ ಬಗ್ಗೆ ಪ್ರಿಯಾಂಕ್ ಖರ್ಗೆ ಸರ್ಟಿಫಿಕೇಟ್ ಕೊಡೋದು ಬೇಡ – ಹೆಚ್‌ಡಿಕೆ ವಾಗ್ದಾಳಿ

Public TV
By Public TV
1 hour ago
rcb fans
Bengaluru City

ಚಿನ್ನಸ್ವಾಮಿಗೆ 4 ಕೋಟಿ ವೆಚ್ಚದಲ್ಲಿ ಆರ್‌ಸಿಬಿಯಿಂದ 350 AI ಕ್ಯಾಮೆರಾ – ಬೆಂಗಳೂರಿನಲ್ಲೇ ಪಂದ್ಯ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?