Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಜೀವನದ ಕೊನೆಗಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ ಕರ್ನಾಟಕ ರಕ್ಷಿಸಿ: ಹೆಚ್‌ಡಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಾನು ಜೀವನದ ಕೊನೆಗಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ ಕರ್ನಾಟಕ ರಕ್ಷಿಸಿ: ಹೆಚ್‌ಡಿಡಿ

Latest

ನಾನು ಜೀವನದ ಕೊನೆಗಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ ಕರ್ನಾಟಕ ರಕ್ಷಿಸಿ: ಹೆಚ್‌ಡಿಡಿ

Public TV
Last updated: February 4, 2026 8:09 pm
Public TV
Share
2 Min Read
HD Devegowda
SHARE

– ರಾಜ್ಯಸಭೆಯಲ್ಲಿ ಗದ್ಗದಿತರಾದ ಹೆಚ್.ಡಿ.ದೇವೇಗೌಡ

ನವದೆಹಲಿ: ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ರಾಜ್ಯಸಭೆಯಲ್ಲಿ ಗದ್ಗದಿತರಾಗಿ ಮಾತಾನಾಡಿದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು (H.D.Deve Gowda), ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡರು.

ರಾಜ್ಯಸಭೆಯಲ್ಲಿ (Rajya Sabha) ಬುಧವಾರ ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಪಾಲ್ಗೊಂಡು ಮಾಜಿ ಪ್ರಧಾನಿಗಳು ಮಾತನಾಡಿದರು. ಇದನ್ನೂ ಓದಿ: ಆಡಳಿತ-ವಿಪಕ್ಷಗಳ ಪ್ರತಿಷ್ಠೆಗೆ ಬಲಿಯಾದ ವಿಧಾನ ಪರಿಷತ್ ಕಲಾಪ

ರಾಜ್ಯದ ಅನೇಕ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಆ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ಕರ್ನಾಟಕ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ರಾಜ್ಯಸಭೆಯ ಹಿರಿಯ ಸದಸ್ಯರೂ ಆಗಿರುವ ಮಾಜಿ ಪ್ರಧಾನಿಗಳು ಕೇಂದ್ರ ಸರ್ಕಾರಕ್ಕೆ ಕೈಮುಗಿದು ವಿನಂತಿಸಿದರು.

ತಮ್ಮ ಸಂಕ್ಷಿಪ್ತ ಭಾಷಣದಲ್ಲಿ ರಾಜ್ಯದ ನೀರಾವರಿ ಬಿಕ್ಕಟ್ಟನ್ನು ಎಳೆಎಳೆಯಾಗಿ ಬಿಡಿಸಿಟ್ಟ ಅವರು, ನನ್ನ ರಾಜ್ಯಸಭಾ ಅವಧಿ ಇನ್ನೊಂದು ತಿಂಗಳಲ್ಲಿ ಮುಗಿಯಲಿದೆ. ನನ್ನ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಅವರ ಹಿತಕಾಯಿರಿ. ನಾವೆಲ್ಲರೂ ಮನುಷ್ಯರು. ಮಳೆ ಬಿದ್ದರೆ ನೀರು, ಇಲ್ಲವಾದರೆ ಇಲ್ಲ. ಈ ಸದನದ ಎಲ್ಲಾ ಸದಸ್ಯರು ಕರ್ನಾಟಕದ ರಕ್ಷಣೆ ಮಾಡಬೇಕು ಎಂಬುದಾಗಿ ನಾನು ಕೈ ಮುಗಿದು ಬೇಡುತ್ತೇನೆ ಎಂದು ಮಾಜಿ ಪ್ರಧಾನಿಗಳು ಮನವಿ ಮಾಡಿದರು.

ಕರ್ನಾಟಕ ನಿರಂತರವಾಗಿ ನೆರೆ ರಾಜ್ಯಗಳ ಜೊತೆ ನೀರಾವರಿ ಹಕ್ಕಿಗಾಗಿ ಹೋರಾಟ ನಡೆಸುತ್ತಿದೆ. ನಾನು ಕೂಡ ನೀರಿಗಾಗಿ 65 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದೇನೆ. ಈ ಸದನದಲ್ಲಿ ನಾನು ನ್ಯಾಯಮಂಡಳಿಗಳು ನೀಡಿರುವ ತೀರ್ಪುಗಳ ಬಗ್ಗೆ ಚರ್ಚಿಸಲು ಬಯಸುವುದಿಲ್ಲ. ಕರ್ನಾಟಕ ರಾಜ್ಯಕ್ಕೆ ನೀರಿನದ್ದೇ ಬಹುದೊಡ್ಡ ಬಿಕ್ಕಟ್ಟಾಗಿದೆ. ಒಂದೆಡೆ ತಮಿಳುನಾಡು, ಮತ್ತೊಂದೆಡೆಯಲ್ಲಿ ಆಂಧ್ರಪ್ರದೇಶ, ಇನ್ನೊಂದು ಕಡೆಯಲ್ಲಿ ಗೋವಾದಿಂದ ತೊಂದರೆ ಎದುರಿಸುತ್ತಿದೆ. ನಾನು ಜೀವನದ ಕೊನೆಗಾಲದಲ್ಲಿ ಇದ್ದೇನೆ. ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ ಎಂದು ಮನವಿ ಮಾಡಿಕೊಂಡರು.

ನರೇಂದ್ರ ಮೋದಿ ಅವರ ಸರ್ಕಾರ ಈ ಬಿಕ್ಕಟ್ಟಿಗೆ ಪರಿಹಾರ ನೀಡಬೇಕು. ನಾನು ನಿಮ್ಮ (ಎನ್‌ಡಿಎ) ಜೊತೆಯಲ್ಲಿಯೇ ಇರುತ್ತೇನೆ. ನನ್ನ ಮಗ ನಿಮ್ಮ ಸಂಪುಟದಲ್ಲಿ ಇದ್ದಾನೆ. ನಾವು ಮುಂದೆಯೂ ನಿಮ್ಮ ಜೊತೆಗೇ ಇರುತ್ತೇವೆ. ಮೈತ್ರಿಕೂಟ ಬದಲಾವಣೆ ಮಾಡುವ ಯಾವ ಪ್ರಶ್ನೆಯೇ ಇಲ್ಲ. ರಾಜ್ಯದ ಜನರಿಗೆ ನ್ಯಾಯ ಒದಗಿಸಿ ಎಂಬುದಷ್ಟೇ ನನ್ನ ಏಕೈಕ ಮನವಿ ಎಂದು ದೇವೇಗೌಡರು ಕೋರಿಕೊಂಡರು. ಇದನ್ನೂ ಓದಿ: ರಾಜ್ಯಕ್ಕೆ ಇನ್ನೊಂದು ಹೈ-ಸ್ಪೀಡ್ ರೈಲ್ವೆ ಕಾರಿಡಾರ್; ರೈಲ್ವೆ ಸಚಿವರನ್ನು ಭೇಟಿಯಾದ ಹೆಚ್‌ಡಿಕೆ

ಇದೇ ವೇಳೆ ಯುರೋಪಿಯನ್ ಒಕ್ಕೂಟ ಹಾಗೂ ಅಮೆರಿಕ ಜೊತೆ ಯಶಸ್ವಿಯಾಗಿ ವ್ಯಾಪಾರ ಒಪ್ಪಂದ ಮಾಡಿಕೊಂಡ ಭಾರತದ ರಾಜತಾಂತ್ರಿಕ ಜಾಣ್ಮೆಯನ್ನು ಕೊಂಡಾಡಿದ ಮಾಜಿ ಪ್ರಧಾನಿಗಳು, ಇದಕ್ಕೆ ಕಾರಣೀಭೂತರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಈ ಬಗ್ಗೆ ನಾನು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂಬ ಅಂಶವನ್ನು ಅವರು ಉಲ್ಲೇಖಿಸಿದರು.

ಮೋದಿ ಅವರನ್ನು ವಿನಾಕಾರಣ ಟೀಕೆ ಮಾಡುತ್ತಿರುವ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಆಗಿದ್ದು, ಜನರ ಆದಾಯ ಹೆಚ್ಚಳ ಆಗುತ್ತಿದೆ ಹಾಗೂ ರೈತಪರವಾಗಿ ಈ ಸರ್ಕಾರ ಕೆಲಸ ಮಾಡುತ್ತಿದೆ. 2047ಕ್ಕೆ ಭಾರತವು ಮೋದಿ ಅವರ ನೇತೃತ್ವದಲ್ಲಿ ವಿಕಸಿತ ಭಾರತ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲವೆಂದು ಹೇಳಿದರು.

TAGGED:H.D.Deve GowdaNew Delhirajya sabhaನವದೆಹಲಿರಾಜ್ಯಸಭಾಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema news

jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories

You Might Also Like

Aaron George
Cricket

U19 World Cup: ಆರನ್ ಜಾರ್ಜ್ ಶತಕ – ದಾಖಲೆಯ ಚೇಸ್‌ನೊಂದಿಗೆ ಫೈನಲ್‌ಗೆ ಭಾರತ ಲಗ್ಗೆ

Public TV
By Public TV
4 minutes ago
Turkish Airlines flight
Latest

ಎಂಜಿನ್‌ನಲ್ಲಿ ಬೆಂಕಿ; ಟರ್ಕಿಶ್ ಏರ್‌ಲೈನ್ಸ್ ವಿಮಾನ ಕೋಲ್ಕತ್ತಾ ಏರ್‌ಪೋರ್ಟ್‌ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್‌

Public TV
By Public TV
54 minutes ago
press meet
Dakshina Kannada

ಫೆ.4 ರಿಂದ 10 ರವರೆಗೆ ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನೇಮೋತ್ಸವ

Public TV
By Public TV
2 hours ago
Legislative Council
Bengaluru City

ಆಡಳಿತ-ವಿಪಕ್ಷಗಳ ಪ್ರತಿಷ್ಠೆಗೆ ಬಲಿಯಾದ ವಿಧಾನ ಪರಿಷತ್ ಕಲಾಪ

Public TV
By Public TV
3 hours ago
MB Patil
Bengaluru City

ಸಮುದಾಯದ ಹಿತಕ್ಕಾಗಿ ಲಿಂಗಾಯತ ಕಾಂಗ್ರೆಸ್ ಪಕ್ಷದ ಶಾಸಕರ ಸಭೆ: ಎಂ‌.ಬಿ.ಪಾಟೀಲ್

Public TV
By Public TV
3 hours ago
Ghaziabad Online Gaming Death Note
Crime

ಅಪ್ಪ, ಅಮ್ಮ ಕ್ಷಮಿಸಿ – ಆತ್ಮಹತ್ಯೆಗೂ ಮುನ್ನ ಸಹೋದರಿಯರು ಬರೆದಿದ್ದ ಡೆತ್ ನೋಟ್ ಪತ್ತೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?