Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: SIR ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಅನ್ಯಾಯವಾಗಿ ಟಾರ್ಗೆಟ್‌ ಮಾಡಲಾಗ್ತಿದೆ: ‘ಸುಪ್ರೀಂ’ನಲ್ಲಿ ಮಮತಾ ಬ್ಯಾನರ್ಜಿ ತೀಕ್ಷ್ಣ ವಾದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | SIR ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಅನ್ಯಾಯವಾಗಿ ಟಾರ್ಗೆಟ್‌ ಮಾಡಲಾಗ್ತಿದೆ: ‘ಸುಪ್ರೀಂ’ನಲ್ಲಿ ಮಮತಾ ಬ್ಯಾನರ್ಜಿ ತೀಕ್ಷ್ಣ ವಾದ

Court

SIR ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಅನ್ಯಾಯವಾಗಿ ಟಾರ್ಗೆಟ್‌ ಮಾಡಲಾಗ್ತಿದೆ: ‘ಸುಪ್ರೀಂ’ನಲ್ಲಿ ಮಮತಾ ಬ್ಯಾನರ್ಜಿ ತೀಕ್ಷ್ಣ ವಾದ

Public TV
Last updated: February 4, 2026 4:27 pm
Public TV
Share
3 Min Read
Mamata Banerjee Supreme Court
SHARE

– ಇದಕ್ಕೆಲ್ಲ ನೇರ ಕಾರಣ ಚುನಾವಣಾ ಆಯೋಗ… ಕ್ಷಮಿಸಿ, ವಾಟ್ಸಾಪ್ ಆಯೋಗ ಎಂದ ದೀದಿ

ನವದೆಹಲಿ: ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಮೂಲಕ ಅಮಾಯಕ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ. ಎಸ್‌ಐಆರ್ (SIR) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಅನ್ಯಾಯವಾಗಿ ಗುರಿಯಾಗಿಸಲಾಗುತ್ತಿದೆ. ಇದಕ್ಕೆಲ್ಲ ನೇರ ಕಾರಣ ಚುನಾವಣಾ ಆಯೋಗ… ಕ್ಷಮಿಸಿ, ವಾಟ್ಸಾಪ್ ಆಯೋಗ ಎಂದು ಸಿಎಂ ಮಮತಾ ಬ್ಯಾನರ್ಜಿ (Mamata Banerjee) ತೀಕ್ಷ್ಣ ವಾದ ಮಂಡಿಸಿದ್ದಾರೆ.

ಚುನಾವಣಾ ಆಯೋಗದ ಎಸ್‌ಐಆರ್ ಪ್ರಕ್ರಿಯೆ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ (Supreme Court) ಸಿಜೆಐ ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ನ್ಯಾಯಾಲಯದ ಅನುಮತಿ ಪಡೆದು ಸಿಎಂ ಮಮತಾ ಬ್ಯಾನರ್ಜಿ ವಾದ ಮಂಡಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ SIR ಜಾರಿಗೊಳಿಸಿ, ಅಕ್ರಮ ಬಾಂಗ್ಲಾ ವಲಸಿಗರನ್ನು ಗಡೀಪಾರು ಮಾಡಿ – ಕೇಂದ್ರ ಗೃಹ ಸಚಿವರಿಗೆ ಯತ್ನಾಳ್ ಪತ್ರ

ELECTION COMMISSION OF INDIA

ಪಶ್ಚಿಮ ಬಂಗಾಳದಲ್ಲಿ ಸುಮಾರು 1.30 ಕೋಟಿ ಮತದಾರರ ಹೆಸರನ್ನು ಕೈಬಿಟ್ಟಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆಗೆ ಮೈಕ್ರೋ ಅಬ್ಸರ್ವರ್‌ಗಳನ್ನು ನೇಮಿಸುವ ಮೂಲಕ ಪಶ್ಚಿಮ ಬಂಗಾಳದ ಪ್ರಜಾಪ್ರಭುತ್ವದ ಆಶಯಕ್ಕೆ ಧಕ್ಕೆ ತರಲಾಗಿದೆ ಎಂದರು. ಆಧಾರ್‌ ಆಗಲಿ, ವಸತಿ ಪತ್ರವನ್ನಾಗಲಿ ಪರಿಗಣಿಸದೆ ಇರುವ ಆಯೋಗದ ನಡೆಯ ಬಗ್ಗೆ ವಾದ ಮಂಡನೆ ವೇಳೆ ಆಕ್ರೋಶ ಹೊರಹಾಕಿದರು.

ನಮ್ಮ ವಕೀಲರು ನಮ್ಮ ಪ್ರಕರಣವನ್ನು ಮೊದಲಿನಿಂದಲೂ ಹೋರಾಡುತ್ತಿದ್ದರು. ಆದರೆ, ಎಲ್ಲವೂ ಮುಗಿದ ನಂತರ ನಮಗೆ ನ್ಯಾಯ ಸಿಗುತ್ತಿಲ್ಲ. ನ್ಯಾಯವು ಬಾಗಿಲಿನ ಹಿಂದೆ ಇದ್ದಾಗ ನಮಗೆ ಎಲ್ಲಿಯೂ ನ್ಯಾಯ ಸಿಗುತ್ತಿಲ್ಲ. ನಾನು ಚುನಾವಣಾ ಆಯೋಗಕ್ಕೆ ಎಲ್ಲಾ ವಿವರಗಳನ್ನು ಒಳಗೊಂಡಂತೆ ಆರು ಪತ್ರಗಳನ್ನು ಬರೆದಿದ್ದೇನೆ. ಆದರೆ, ಯಾವುದೇ ಉತ್ತರವಿಲ್ಲ ಎಂದು ಆರೋಪಿಸಿದರು. ಇದನ್ನೂ ಓದಿ: ಉತ್ತರ ಪ್ರದೇಶ SIR ಪ್ರಕಟ; 2.89 ಕೋಟಿ ಮತದಾರರ ಹೆಸರು ಡಿಲೀಟ್‌

ಈ ಆರೋಪದ ಬೆನ್ನಲ್ಲೇ ಸಿಜೆಐ ಸೂರ್ಯಕಾಂತ್ ಮಧ್ಯಪ್ರವೇಶ ಮಾಡಿದರು. ಪಶ್ಚಿಮ ಬಂಗಾಳ ರಾಜ್ಯವು ತನ್ನದೇ ಆದ ಅರ್ಜಿಯನ್ನು ಸಲ್ಲಿಸಿದೆ. ಸುಪ್ರೀಂ ಕೋರ್ಟ್‌ನಲ್ಲಿರುವ ಅತ್ಯುತ್ತಮ ಕಾನೂನು ತಂಡವು ರಾಜ್ಯದ ಪ್ರಕರಣವನ್ನು ಪ್ರತಿನಿಧಿಸಲು ಇದೆ ಎಂದು ಹೇಳಿದರು. ಆದಾಗ್ಯೂ, ಮಮತಾ ಬ್ಯಾನರ್ಜಿ ಅವರಿಗೆ ತಮ್ಮ ವಾದವನ್ನು ಮುಂದುವರಿಸಲು ಅವಕಾಶ ನೀಡಿತು. ರಾಜ್ಯದಲ್ಲಿ ಕಂಡುಬರುತ್ತಿರುವ ಕಾರ್ಯವಿಧಾನದ ತೊಂದರೆಗಳನ್ನು ಒಪ್ಪಿಕೊಂಡಿತು. ಎಲ್ಲರೂ ಪರಿಹಾರವನ್ನು ಕಂಡುಕೊಳ್ಳುವ ಕಡೆಗೆ ನೋಡಬೇಕು ಎಂದು ಹೇಳಿದರು.

ಪ್ರತಿಯೊಂದು ಸಮಸ್ಯೆಗೂ ಪರಿಹಾರವಿದೆ. ಯಾವುದೇ ಮುಗ್ಧ ನಾಗರಿಕರು ಹೊರಗುಳಿಯದಂತೆ ನಾವು ಪರಿಹಾರದ ಕಡೆಗೆ ನೋಡಬೇಕು ಎಂದು ಮಮತಾ ಹೇಳಿದರು. ಮಮತಾ ವಾದಕ್ಕೆ ಚುನಾವಣಾ ಆಯೋಗದ ಪರ ಹಾಜರಾಗಿದ್ದ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮಮತಾ ಬ್ಯಾನರ್ಜಿ ತಮ್ಮ ಕೈಗಳನ್ನು ಮಡಚಿ ನನಗೆ ವಾದ ಮಂಡಿಸಲು ಅವಕಾಶ ನೀಡಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.

ಬಳಿಕ ವಾದ ಮಂಡನೆ ಮುಂದುವರಿಸಿದ ಅವರು, ವಿವಾಹಿತ ಮಹಿಳೆಯರು ಅತ್ತೆ-ಮಾವನ ಮನೆಗೆ ಸ್ಥಳಾಂತರಗೊಂಡಿದ್ದಕ್ಕಾಗಿ ಅಥವಾ ಗಂಡನ ಉಪನಾಮ ಬಳಸಿದ್ದಕ್ಕಾಗಿ ಹೆಸರು ತೆಗೆದು ಹಾಕಲಾಗುತ್ತಿದೆ. ಆಧಾರ್ ಕಾರ್ಡ್ ಪುರಾವೆ ದಾಖಲೆಗಳಲ್ಲಿ ಒಂದಾಗಿರುತ್ತದೆ ಎಂದು ನ್ಯಾಯಾಲಯ ಆದೇಶ ನೀಡಿದ್ದರಿಂದ ಬಂಗಾಳದ ಜನರು ತುಂಬಾ ಸಂತೋಷಪಟ್ಟಿದ್ದಾರೆ. ಆದರೆ, ಆಯೋಗ ಇದನ್ನು ದಾಖಲೆಯಾಗಿ ಪರಿಗಣಿಸುತ್ತಿಲ್ಲ. ಇತರ ರಾಜ್ಯಗಳಲ್ಲಿ ನಿವಾಸ ಪ್ರಮಾಣಪತ್ರ, ಕುಟುಂಬ ನೋಂದಣಿ ಕಾರ್ಡ್, ಸರ್ಕಾರಿ ವಸತಿ ಕಾರ್ಡ್ ಅನ್ನು ಅನುಮತಿಸಲಾಗಿದೆ. ಆರೋಗ್ಯ ಕಾರ್ಡ್ ಅನ್ನು ಅನುಮತಿಸಲಾಗಿದೆ ಎಂದರು.

ಎಸ್‌ಐಆರ್‌ನ ಕಾನೂನು ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳ ಮೇಲಿನ ನಿರ್ಧಾರವನ್ನು ಕಾಯ್ದಿರಿಸಿರುವುದರಿಂದ ಆಧಾರ್‌ನಂತಹ ಕೆಲವು ವಿಷಯಗಳ ಬಗ್ಗೆ ನ್ಯಾಯಾಲಯವು ಪ್ರತಿಕ್ರಿಯಿಸಲು ಸಾಧ್ಯವಾಗುವುದಿಲ್ಲ ಎಂದು ಸಿಜೆಐ ಸೂರ್ಯಕಾಂತ್ ಹೇಳಿದರು. ಬಳಿಕ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಿ ನಿರ್ದೇಶನಗಳನ್ನು ನೀಡುವುದಾಗಿ ಭರವಸೆ ನೀಡಿದರು. ಇದಕ್ಕೆ ಉತ್ತರಿಸಿದ ಮಮತಾ ನಾವು ತುಂಬಾ ಕೃತಜ್ಞರಾಗಿರುತ್ತೇವೆ ಎಂದು ಕೈಮುಗಿದು ಹೇಳಿದರು. ಅಂತಿಮವಾಗಿ ಚುನಾವಣಾ ಆಯೋಗ, ಕೇಂದ್ರ ಸರ್ಕಾರ ಸಹಿತ ಎಲ್ಲ ಪಕ್ಷಕಾರರಿಗೂ ನೋಟಿಸ್‌ ನೀಡಿದ ಸುಪ್ರೀಂ ಕೋರ್ಟ್ ವಿಚಾರಣೆ ಮುಂದೂಡಿತು.

TAGGED:Mamata BanerjeesirSupreme Courtಎಸ್‌ಐಆರ್‌ಮಮತಾ ಬ್ಯಾನರ್ಜಿಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Mantralaya Guruvaibhavotsava Rishab Shetty Jaggesh
Districts

ಗುರುವೈಭವೋತ್ಸವಕ್ಕೆ ವಿದ್ಯುಕ್ತ ತೆರೆ – ಶ್ರೀಗಳಿಂದ ನಟ ರಿಷಬ್ ಶೆಟ್ಟಿ, ಜಗ್ಗೇಶ್‌ಗೆ ಸನ್ಮಾನ

Public TV
By Public TV
2 minutes ago
Ballari Kanaka Durgamma Sidi Bandi Rathotsava 1
Bengaluru City

ಬಳ್ಳಾರಿ ಸಿಡಿ ಬಂಡಿ ರಥೋತ್ಸವ – ಬಾಳೆ ಹಣ್ಣು, ಜೀವಂತ ಕೋಳಿ ಎಸೆದ ಭಕ್ತರು

Public TV
By Public TV
1 hour ago
Kadalur Uday
Districts

ವಾರದೊಳಗೆ ಸಿಎಂ ಗೊಂದಲಕ್ಕೆ ತೆರೆ ಎಳೆಯಿರಿ: ಕದಲೂರು ಉದಯ್

Public TV
By Public TV
1 hour ago
DK Shivakumar and Munirathna
Bengaluru City

ನಿಂತ ಕೆಲಸ ಮತ್ತೆ ಆರಂಭಿಸಿ – ಡಿಕೆಶಿ ನಿವಾಸಕ್ಕೆ ತೆರಳಿ ಮುನಿರತ್ನ ಮನವಿ

Public TV
By Public TV
1 hour ago
Shivamogga Hindu Student Murder Siddaramaiah
Bengaluru City

ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ – 15 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Public TV
By Public TV
2 hours ago
kamakshipalya police station
Bengaluru City

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಟ್ವಿಸ್ಟ್ – ಕ್ರಾಸ್ ಎಕ್ಸಾಮಿನ್ ವೇಳೆ ಪೊಲೀಸರ ಎಡವಟ್ಟು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?