Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: SIR ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಅನ್ಯಾಯವಾಗಿ ಟಾರ್ಗೆಟ್‌ ಮಾಡಲಾಗ್ತಿದೆ: ‘ಸುಪ್ರೀಂ’ನಲ್ಲಿ ಮಮತಾ ಬ್ಯಾನರ್ಜಿ ತೀಕ್ಷ್ಣ ವಾದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | SIR ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಅನ್ಯಾಯವಾಗಿ ಟಾರ್ಗೆಟ್‌ ಮಾಡಲಾಗ್ತಿದೆ: ‘ಸುಪ್ರೀಂ’ನಲ್ಲಿ ಮಮತಾ ಬ್ಯಾನರ್ಜಿ ತೀಕ್ಷ್ಣ ವಾದ

Court

SIR ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಅನ್ಯಾಯವಾಗಿ ಟಾರ್ಗೆಟ್‌ ಮಾಡಲಾಗ್ತಿದೆ: ‘ಸುಪ್ರೀಂ’ನಲ್ಲಿ ಮಮತಾ ಬ್ಯಾನರ್ಜಿ ತೀಕ್ಷ್ಣ ವಾದ

Public TV
Last updated: February 4, 2026 4:27 pm
Public TV
Share
3 Min Read
Mamata Banerjee Supreme Court
SHARE

– ಇದಕ್ಕೆಲ್ಲ ನೇರ ಕಾರಣ ಚುನಾವಣಾ ಆಯೋಗ… ಕ್ಷಮಿಸಿ, ವಾಟ್ಸಾಪ್ ಆಯೋಗ ಎಂದ ದೀದಿ

ನವದೆಹಲಿ: ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಮೂಲಕ ಅಮಾಯಕ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ. ಎಸ್‌ಐಆರ್ (SIR) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಅನ್ಯಾಯವಾಗಿ ಗುರಿಯಾಗಿಸಲಾಗುತ್ತಿದೆ. ಇದಕ್ಕೆಲ್ಲ ನೇರ ಕಾರಣ ಚುನಾವಣಾ ಆಯೋಗ… ಕ್ಷಮಿಸಿ, ವಾಟ್ಸಾಪ್ ಆಯೋಗ ಎಂದು ಸಿಎಂ ಮಮತಾ ಬ್ಯಾನರ್ಜಿ (Mamata Banerjee) ತೀಕ್ಷ್ಣ ವಾದ ಮಂಡಿಸಿದ್ದಾರೆ.

ಚುನಾವಣಾ ಆಯೋಗದ ಎಸ್‌ಐಆರ್ ಪ್ರಕ್ರಿಯೆ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ (Supreme Court) ಸಿಜೆಐ ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ನ್ಯಾಯಾಲಯದ ಅನುಮತಿ ಪಡೆದು ಸಿಎಂ ಮಮತಾ ಬ್ಯಾನರ್ಜಿ ವಾದ ಮಂಡಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ SIR ಜಾರಿಗೊಳಿಸಿ, ಅಕ್ರಮ ಬಾಂಗ್ಲಾ ವಲಸಿಗರನ್ನು ಗಡೀಪಾರು ಮಾಡಿ – ಕೇಂದ್ರ ಗೃಹ ಸಚಿವರಿಗೆ ಯತ್ನಾಳ್ ಪತ್ರ

ELECTION COMMISSION OF INDIA

ಪಶ್ಚಿಮ ಬಂಗಾಳದಲ್ಲಿ ಸುಮಾರು 1.30 ಕೋಟಿ ಮತದಾರರ ಹೆಸರನ್ನು ಕೈಬಿಟ್ಟಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆಗೆ ಮೈಕ್ರೋ ಅಬ್ಸರ್ವರ್‌ಗಳನ್ನು ನೇಮಿಸುವ ಮೂಲಕ ಪಶ್ಚಿಮ ಬಂಗಾಳದ ಪ್ರಜಾಪ್ರಭುತ್ವದ ಆಶಯಕ್ಕೆ ಧಕ್ಕೆ ತರಲಾಗಿದೆ ಎಂದರು. ಆಧಾರ್‌ ಆಗಲಿ, ವಸತಿ ಪತ್ರವನ್ನಾಗಲಿ ಪರಿಗಣಿಸದೆ ಇರುವ ಆಯೋಗದ ನಡೆಯ ಬಗ್ಗೆ ವಾದ ಮಂಡನೆ ವೇಳೆ ಆಕ್ರೋಶ ಹೊರಹಾಕಿದರು.

ನಮ್ಮ ವಕೀಲರು ನಮ್ಮ ಪ್ರಕರಣವನ್ನು ಮೊದಲಿನಿಂದಲೂ ಹೋರಾಡುತ್ತಿದ್ದರು. ಆದರೆ, ಎಲ್ಲವೂ ಮುಗಿದ ನಂತರ ನಮಗೆ ನ್ಯಾಯ ಸಿಗುತ್ತಿಲ್ಲ. ನ್ಯಾಯವು ಬಾಗಿಲಿನ ಹಿಂದೆ ಇದ್ದಾಗ ನಮಗೆ ಎಲ್ಲಿಯೂ ನ್ಯಾಯ ಸಿಗುತ್ತಿಲ್ಲ. ನಾನು ಚುನಾವಣಾ ಆಯೋಗಕ್ಕೆ ಎಲ್ಲಾ ವಿವರಗಳನ್ನು ಒಳಗೊಂಡಂತೆ ಆರು ಪತ್ರಗಳನ್ನು ಬರೆದಿದ್ದೇನೆ. ಆದರೆ, ಯಾವುದೇ ಉತ್ತರವಿಲ್ಲ ಎಂದು ಆರೋಪಿಸಿದರು. ಇದನ್ನೂ ಓದಿ: ಉತ್ತರ ಪ್ರದೇಶ SIR ಪ್ರಕಟ; 2.89 ಕೋಟಿ ಮತದಾರರ ಹೆಸರು ಡಿಲೀಟ್‌

ಈ ಆರೋಪದ ಬೆನ್ನಲ್ಲೇ ಸಿಜೆಐ ಸೂರ್ಯಕಾಂತ್ ಮಧ್ಯಪ್ರವೇಶ ಮಾಡಿದರು. ಪಶ್ಚಿಮ ಬಂಗಾಳ ರಾಜ್ಯವು ತನ್ನದೇ ಆದ ಅರ್ಜಿಯನ್ನು ಸಲ್ಲಿಸಿದೆ. ಸುಪ್ರೀಂ ಕೋರ್ಟ್‌ನಲ್ಲಿರುವ ಅತ್ಯುತ್ತಮ ಕಾನೂನು ತಂಡವು ರಾಜ್ಯದ ಪ್ರಕರಣವನ್ನು ಪ್ರತಿನಿಧಿಸಲು ಇದೆ ಎಂದು ಹೇಳಿದರು. ಆದಾಗ್ಯೂ, ಮಮತಾ ಬ್ಯಾನರ್ಜಿ ಅವರಿಗೆ ತಮ್ಮ ವಾದವನ್ನು ಮುಂದುವರಿಸಲು ಅವಕಾಶ ನೀಡಿತು. ರಾಜ್ಯದಲ್ಲಿ ಕಂಡುಬರುತ್ತಿರುವ ಕಾರ್ಯವಿಧಾನದ ತೊಂದರೆಗಳನ್ನು ಒಪ್ಪಿಕೊಂಡಿತು. ಎಲ್ಲರೂ ಪರಿಹಾರವನ್ನು ಕಂಡುಕೊಳ್ಳುವ ಕಡೆಗೆ ನೋಡಬೇಕು ಎಂದು ಹೇಳಿದರು.

ಪ್ರತಿಯೊಂದು ಸಮಸ್ಯೆಗೂ ಪರಿಹಾರವಿದೆ. ಯಾವುದೇ ಮುಗ್ಧ ನಾಗರಿಕರು ಹೊರಗುಳಿಯದಂತೆ ನಾವು ಪರಿಹಾರದ ಕಡೆಗೆ ನೋಡಬೇಕು ಎಂದು ಮಮತಾ ಹೇಳಿದರು. ಮಮತಾ ವಾದಕ್ಕೆ ಚುನಾವಣಾ ಆಯೋಗದ ಪರ ಹಾಜರಾಗಿದ್ದ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮಮತಾ ಬ್ಯಾನರ್ಜಿ ತಮ್ಮ ಕೈಗಳನ್ನು ಮಡಚಿ ನನಗೆ ವಾದ ಮಂಡಿಸಲು ಅವಕಾಶ ನೀಡಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.

ಬಳಿಕ ವಾದ ಮಂಡನೆ ಮುಂದುವರಿಸಿದ ಅವರು, ವಿವಾಹಿತ ಮಹಿಳೆಯರು ಅತ್ತೆ-ಮಾವನ ಮನೆಗೆ ಸ್ಥಳಾಂತರಗೊಂಡಿದ್ದಕ್ಕಾಗಿ ಅಥವಾ ಗಂಡನ ಉಪನಾಮ ಬಳಸಿದ್ದಕ್ಕಾಗಿ ಹೆಸರು ತೆಗೆದು ಹಾಕಲಾಗುತ್ತಿದೆ. ಆಧಾರ್ ಕಾರ್ಡ್ ಪುರಾವೆ ದಾಖಲೆಗಳಲ್ಲಿ ಒಂದಾಗಿರುತ್ತದೆ ಎಂದು ನ್ಯಾಯಾಲಯ ಆದೇಶ ನೀಡಿದ್ದರಿಂದ ಬಂಗಾಳದ ಜನರು ತುಂಬಾ ಸಂತೋಷಪಟ್ಟಿದ್ದಾರೆ. ಆದರೆ, ಆಯೋಗ ಇದನ್ನು ದಾಖಲೆಯಾಗಿ ಪರಿಗಣಿಸುತ್ತಿಲ್ಲ. ಇತರ ರಾಜ್ಯಗಳಲ್ಲಿ ನಿವಾಸ ಪ್ರಮಾಣಪತ್ರ, ಕುಟುಂಬ ನೋಂದಣಿ ಕಾರ್ಡ್, ಸರ್ಕಾರಿ ವಸತಿ ಕಾರ್ಡ್ ಅನ್ನು ಅನುಮತಿಸಲಾಗಿದೆ. ಆರೋಗ್ಯ ಕಾರ್ಡ್ ಅನ್ನು ಅನುಮತಿಸಲಾಗಿದೆ ಎಂದರು.

ಎಸ್‌ಐಆರ್‌ನ ಕಾನೂನು ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳ ಮೇಲಿನ ನಿರ್ಧಾರವನ್ನು ಕಾಯ್ದಿರಿಸಿರುವುದರಿಂದ ಆಧಾರ್‌ನಂತಹ ಕೆಲವು ವಿಷಯಗಳ ಬಗ್ಗೆ ನ್ಯಾಯಾಲಯವು ಪ್ರತಿಕ್ರಿಯಿಸಲು ಸಾಧ್ಯವಾಗುವುದಿಲ್ಲ ಎಂದು ಸಿಜೆಐ ಸೂರ್ಯಕಾಂತ್ ಹೇಳಿದರು. ಬಳಿಕ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಿ ನಿರ್ದೇಶನಗಳನ್ನು ನೀಡುವುದಾಗಿ ಭರವಸೆ ನೀಡಿದರು. ಇದಕ್ಕೆ ಉತ್ತರಿಸಿದ ಮಮತಾ ನಾವು ತುಂಬಾ ಕೃತಜ್ಞರಾಗಿರುತ್ತೇವೆ ಎಂದು ಕೈಮುಗಿದು ಹೇಳಿದರು. ಅಂತಿಮವಾಗಿ ಚುನಾವಣಾ ಆಯೋಗ, ಕೇಂದ್ರ ಸರ್ಕಾರ ಸಹಿತ ಎಲ್ಲ ಪಕ್ಷಕಾರರಿಗೂ ನೋಟಿಸ್‌ ನೀಡಿದ ಸುಪ್ರೀಂ ಕೋರ್ಟ್ ವಿಚಾರಣೆ ಮುಂದೂಡಿತು.

TAGGED:Mamata BanerjeesirSupreme Courtಎಸ್‌ಐಆರ್‌ಮಮತಾ ಬ್ಯಾನರ್ಜಿಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

kabul hospital pak strikes
Latest

ಅನಾಗರಿಕ, ಹೇಡಿತನದ ಕೃತ್ಯ: ಕಾಬೂಲ್‌ ಆಸ್ಪತ್ರೆ ಮೇಲಿನ ಪಾಕ್‌ ದಾಳಿ ಖಂಡಿಸಿದ ಭಾರತ

Public TV
By Public TV
40 seconds ago
Four workers fall ill due to chemical reaction in Hubballi
Dharwad

ಹುಬ್ಬಳ್ಳಿ | ಫ್ಲೈವುಡ್‌ ಕೆಲಸದ ವೇಳೆ ಕೆಮಿಕಲ್ ರಿಯಾಕ್ಷನ್ – ನಾಲ್ವರು ಕಾರ್ಮಿಕರು ಅಸ್ವಸ್ಥ

Public TV
By Public TV
7 minutes ago
congress leader pm modi
Chikkamagaluru

ಸ್ವಪಕ್ಷದ ಮುಖಂಡನ ವಿರುದ್ಧವೇ ದೂರು – ನ್ಯಾಯಕ್ಕಾಗಿ ಪ್ರಧಾನಿ ಮೋದಿ ಕಚೇರಿ ಕದ ತಟ್ಟಿದ ಕಾಂಗ್ರೆಸ್ ನಾಯಕಿ

Public TV
By Public TV
25 minutes ago
DK Shivakumar 9
Bengaluru City

ಬಾಕಿ ಇರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜೊತೆ ಚರ್ಚೆ: ಡಿಕೆಶಿ

Public TV
By Public TV
36 minutes ago
BAMUL
Latest

ಆನ್‌ಲೈನ್‌ ಸಂಸ್ಥೆಗಳಿಂದ ಬೇಕಾಬಿಟ್ಟಿ ದರ ನಿಗದಿ – ಬಮೂಲ್ ಹಾಲಿನ ಉತ್ಪನ್ನಗಳ ಮಾರಾಟ ಕುಸಿತ

Public TV
By Public TV
39 minutes ago
Raichur Hailstorm
Districts

ಬಿಸಿಲನಾಡು ರಾಯಚೂರಿನಲ್ಲಿ ಆಲಿಕಲ್ಲು ಮಳೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?