Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂಟರ್ನ್‌ಶಿಪ್‌ ಯೋಜನೆಗೆ ಚಾಲನೆ, ಸಿಗಲಿದೆ ತಿಂಗಳಿಗೆ 5 ಸಾವಿರ ಭತ್ಯೆ – ಅರ್ಜಿ ಸಲ್ಲಿಸೋದು ಹೇಗೆ? ಮಾನದಂಡ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಂಟರ್ನ್‌ಶಿಪ್‌ ಯೋಜನೆಗೆ ಚಾಲನೆ, ಸಿಗಲಿದೆ ತಿಂಗಳಿಗೆ 5 ಸಾವಿರ ಭತ್ಯೆ – ಅರ್ಜಿ ಸಲ್ಲಿಸೋದು ಹೇಗೆ? ಮಾನದಂಡ ಏನು?

Latest

ಇಂಟರ್ನ್‌ಶಿಪ್‌ ಯೋಜನೆಗೆ ಚಾಲನೆ, ಸಿಗಲಿದೆ ತಿಂಗಳಿಗೆ 5 ಸಾವಿರ ಭತ್ಯೆ – ಅರ್ಜಿ ಸಲ್ಲಿಸೋದು ಹೇಗೆ? ಮಾನದಂಡ ಏನು?

Public TV
Last updated: October 4, 2024 10:25 am
Public TV
Share
3 Min Read
AI ಚಿತ್ರ
AI ಚಿತ್ರ
SHARE

ನವದೆಹಲಿ: ಕೇಂದ್ರದಿಂದ ಪಿಎಂ ಇಂಟರ್ನ್‌ಶಿಪ್‌ ಯೋಜನೆಗೆ ಚಾಲನೆ (PM Internship Scheme) ನೀಡಲಾಗಿದೆ. ಉನ್ನತ ಕಂಪನಿಗಳಲ್ಲಿ ಇಂಟರ್ನ್‌ಶಿಪ್‌ (Internship) ಪಡೆಯುವ ಯುವಕ – ಯುವತಿಯರಿಗೆ ಮಾಸಿಕ 5 ಸಾವಿರ ರೂ. ಆರ್ಥಿಕ ನೆರವು ನೀಡುವ ಉದ್ದೇಶದೊಂದಿಗೆ ಈ ಯೋಜನೆಗೆ ಗುರುವಾರ ಚಾಲನೆ ನೀಡಲಾಯಿತು.

ಕಂಪನಿಗಳಲ್ಲಿ ಇಂಟರ್ನ್‌ಶಿಪ್‌ ಮಾಡುವ ಯುವಕ – ಯುವತಿಯರಿಗೆ ಮಾಸಿಕ 5 ಸಾವಿರ ರೂ. ವರ್ಷಕ್ಕೆ 66 ಸಾವಿರ ರೂ.ನಂತೆ ಆರ್ಥಿಕ ನೆರವನ್ನು ಈ ಯೋಜನೆ ನೀಡಲಿದೆ. ಇದರಿಂದ 1.25 ಲಕ್ಷ ಯುವಕ – ಯುವತಿಯರು ಫಲಾನುಭವಿಗಳಾಗಲಿದ್ದಾರೆ.ಇದನ್ನೂ ಓದಿ: ದಸರಾ ವಿಶೇಷ; ಉತ್ತರ ಕರ್ನಾಟಕ ಶೈಲಿಯ ತಾಲಿಪಟ್ಟು ರೆಸಿಪಿ ನಿಮಗಾಗಿ

21 ರಿಂದ 24 ವರ್ಷದ ಯುವಕ-ಯುವತಿಯರಿಗೆ 1 ವರ್ಷಗಳ ಕಾಲ ಇಂಟರ್ನ್‌ಶಿಪ್‌ನ್ನು ಅವಕಾಶ ಕಲ್ಪಿಸಿಕೊಡುತ್ತದೆ. ಇಂಟರ್ನ್‌ಶಿಪ್‌ ಮಾಡುವವರಿಗೆ ಮಾಸಿಕ 5 ಸಾವಿರ ರೂ. ಭತ್ಯೆ ಮತ್ತು ಒಂದು ಬಾರಿ 6 ಸಾವಿರ ರೂ. ಸಹಾಯ ಭತ್ಯೆಯನ್ನು ಸರ್ಕಾರ ಭರಿಸುತ್ತದೆ.

ಪ್ರಧಾನ ಮಂತ್ರಿ ಇಂಟರ್ನ್‌ಶಿಪ್‌ ಯೋಜನೆಯು ಮುಂದಿನ ಐದು ವರ್ಷಗಳಲ್ಲಿ 1 ಕೋಟಿ ಯುವಕರಿಗೆ ಇಂಟರ್ನ್‌ಶಿಪ್‌ ನೀಡುತ್ತದೆ. ಇದು ಭಾರತಕ್ಕೆ ಉದ್ಯೋಗಿಗಳನ್ನು ಪರಿವರ್ತಿಸುವ ನಿಟ್ಟಿನಲ್ಲಿ ವಿನ್ಯಾಸಗೊಳಿಸಲಾದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಜೊತೆಗೆ ಕೆಲಸದ ನೈಜ್ಯ ವಾತಾವರಣದ ಮನೋಭಾವವನ್ನು ಈ ಮೂಲಕ ಸೃಷ್ಟಿಸುವ ಯೋಜನೆಯನ್ನು ಹೊಂದಿದೆ. ಈಗಾಗಲೇ ಈ ಯೋಜನೆಯಡಿಯಲ್ಲಿ 500 ಕಂಪನಿಗಳು ಸರ್ಕಾರದ ಜತೆ ಒಪ್ಪಂದ ಮಾಡಿಕೊಂಡಿವೆ.

ಯೋಜನೆಯನ್ನು ಎರಡು ಹಂತಗಳಲ್ಲಿ ಜಾರಿಗೊಳಿಸಲಾಗುವುದು. ಈ ವರ್ಷ ಪ್ರಾರಂಭವಾಗುವ ಮೊದಲ ಹಂತದಲ್ಲಿ, ಮೂರು ವರ್ಷಗಳ ಅವಧಿಯಲ್ಲಿ 50 ಲಕ್ಷ ಯುವಕರನ್ನು ಇಂಟರ್ನ್‌ಶಿಪ್‌ನಲ್ಲಿ ಇರಿಸಲಾಗುತ್ತದೆ. ಎರಡನೇ ಹಂತವು ಮುಂದಿನ ಎರಡು ವರ್ಷಗಳಲ್ಲಿ ಇನ್ನೂ 50 ಲಕ್ಷ ಯುವಕರಿಗೆ ತರಬೇತಿ ನೀಡಲು ಗಮನಹರಿಸುತ್ತದೆ. ಪ್ರತಿ ಇಂಟರ್ನ್‌ಶಿಪ್‌ ಆರು ತಿಂಗಳವರೆಗೆ ಇರುತ್ತದೆ. ಈ ಸಮಯದಲ್ಲಿ ಭಾಗವಹಿಸುವವರು ತಾವು ಇಂಟರ್ನ್‌ಶಿಪ್‌ಗೆ ಅವಕಾಶ ಪಡೆದಿರುವ ಕಂಪನಿಗಳಿಂದ ಸಮಗ್ರ ತರಬೇತಿ ಮತ್ತು ಮಾರ್ಗದರ್ಶನವನ್ನು ಪಡೆಯುತ್ತಾರೆ.

#PMInternshipScheme | The Prime Minister’s Internship Scheme 2024 has officially launched today, aiming to empower 1 crore youth through internships in 500 leading companies across India.

Each intern will receive a monthly stipend of ₹5,000, with applications opening on… pic.twitter.com/zjqkcov6Kk

— DD News (@DDNewslive) October 3, 2024

ಅರ್ಹತೆ ಮತ್ತು ಅರ್ಜಿ ಪ್ರಕ್ರಿಯೆ:
ಈ ಯೋಜನೆಯು ಪ್ರಾಥಮಿಕವಾಗಿ ಆರ್ಥಿಕವಾಗಿ ಹಿಂದುಳಿದ ಯುವಜನರನ್ನು ಗುರಿಯಾಗಿರಿಸಿಕೊಂಡಿದೆ. 21 ರಿಂದ 24 ವರ್ಷದವರು ಮುಕ್ತ ಅವಕಾಶವನ್ನು ಹೊಂದಿರುತ್ತಾರೆ. ಕನಿಷ್ಠ 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು ಅಥವಾ  ITI, ಡಿಪ್ಲೋಮಾ, BA, B.Sc, B.Com, BCA ಯಾವುದೇ ಪದವಿ ಪಡೆದಿರುವವರು ಅರ್ಹರು. ಸರ್ಕಾರಿ ಉದ್ಯೋಗಿಗಳನ್ನು ಹೊಂದಿರುವ ಕುಟುಂಬಗಳು ಅಥವಾ ಆದಾಯ ತೆರಿಗೆ ಮೌಲ್ಯಮಾಪನ ಮಾಡುವವರು ಈ ಯೋಜನೆಗೆ ಅರ್ಹರಲ್ಲ. ಅರ್ಜಿಗಳು ಆನ್‌ಲೈನ್ ಪೋರ್ಟಲ್ ಮೂಲಕ ಆರಂಭಗೊಳ್ಳಲಿದ್ದು, ಅ.12 ರಿಂದ ಪ್ರಕ್ರಿಯೆ ಪ್ರಾರಂಭಗೊಳ್ಳುತ್ತದೆ.ಇದನ್ನೂ ಓದಿ: ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಅಧಿಕ ಮಾಲಿನ್ಯ – ರಾಜ್ಯಕ್ಕೆ ಹಸಿರು ನ್ಯಾಯಮಂಡಳಿಯಿಂದ ನೋಟಿಸ್‌

ಅರ್ಜಿ ಪ್ರಕ್ರಿಯೆ:
www.pminternship.mca.gov.in ನಲ್ಲಿ ಯುವಕ-ಯುವತಿಯರು ಅ.12ರಿಂದ 25ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ತಮ್ಮ ಹೆಸರು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಯ ಬಳಿಕ ಅ.26ರಂದು ಅರ್ಹ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಲಾಗುವುದು. ಕಂಪನಿಗಳು ಅ.27ರಿಂದ ನ.7ರವರೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ. ನ.8ರಿಂದ ನ.15ರವರೆಗೆ ಆಯ್ಕೆಯಾದ ಅಭ್ಯರ್ಥಿಗಳು ತಾವು ಆಯ್ಕೆಯಾದ ಕಂಪನಿಯಿಂದ ಆಫರ್ ಲೆಟರ್‌ನ್ನು ಪಡೆದುಕೊಳ್ಳಲಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಇದರ ಜೊತೆಗೆ ಇದು ಉದ್ಯೋಗ ಅಲ್ಲ. ಇದು ತರಬೇತಿ ಕಾರ್ಯಾಗಾರ (ಇಂಟರ್ನ್‌ಶಿಪ್‌) ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಪ್ರಧಾನ ಮಂತ್ರಿ ಇಂಟರ್ನ್‌ಶಿಪ್‌ ಯೋಜನೆಯ ಪ್ರಮುಖ ಮಾಹಿತಿ
ಉದ್ದೇಶ: ಐದು ವರ್ಷಗಳಲ್ಲಿ 1 ಕೋಟಿ ಯುವಕರಿಗೆ ಇಂಟರ್ನ್‌ಶಿಪ್‌ ಒದಗಿಸುವುದು, ಭಾರತದ ಅಗ್ರ 500 ಕಂಪನಿಗಳಲ್ಲಿ ಉದ್ಯೋಗಾವಕಾಶಗಳು
ಅರ್ಹತೆ: 21-24 ವಯಸ್ಸಿನ ಅಭ್ಯರ್ಥಿಗಳು, 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು ಅಥವಾ ITI, ಡಿಪ್ಲೋಮಾ, BA, B.Sc, B.Com, BCA ಯಾವುದೇ ಪದವಿ ಪಡೆದಿರಬೇಕು. ಸರ್ಕಾರಿ ನೌಕರರು ಅಥವಾ ಆದಾಯ ತೆರಿಗೆ ಮೌಲ್ಯಮಾಪಕರು ಇಲ್ಲದ ಕುಟುಂಬದ ಯುವಕ – ಯುವತಿಯರಿಗೆ ಅವಕಾಶ
ವೇತನ: ಕೇಂದ್ರ ಸರ್ಕಾರದಿಂದ 4,500ರೂ. , ಜೊತೆಗೆ ಕಂಪನಿಗಳಿಂದ 500ರೂ.
ಅಪ್ಲಿಕೇಶನ್ ಪೋರ್ಟಲ್: 12 ಅಕ್ಟೋಬರ್ 2024 ಆರಂಭಗೊಳ್ಳುತ್ತದೆ.ಇದನ್ನೂ ಓದಿ: ನವರಾತ್ರಿ ವಿಶೇಷ-2 | ವಿವಾಹಿತ ಮಹಿಳೆಯರು ದೇವಿಗೆ ಸಿಂಧೂರ ಹಚ್ಚುವ ಸಂಭ್ರಮ!

TAGGED:‌ ಕೇಂದ್ರ ಸರ್ಕಾರCentral GovernmentCompaniesindiaInternshipnewdelhiPM Internship Schemepm narendra modiYouthsಇಂಟರ್ನ್‌ಶಿಪ್ಕಂಪನಿನವದೆಹಲಿಪಿಎಂ ಇಂಟರ್ನ್‌ಶಿಪ್‌ ಯೋಜನೆಪ್ರಧಾನಿ ನರೇಂದ್ರ ಮೋದಿಭಾರತಯುವಕ - ಯುವತಿಯರು
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

adugodi women death
Bengaluru City

ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Public TV
By Public TV
7 hours ago
RCB 1
Cricket

ಬೆಂಗಳೂರು ಹೊಡೆತಕ್ಕೆ ಮಕಾಡೆ ಮಲಗಿದ ಡೆಲ್ಲಿ – ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ 

Public TV
By Public TV
8 hours ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮಾ – ಚಪ್ಪಲಿ, ಬಾಟೆಲ್ ತೂರಾಟ, ಕರೆಂಟ್ ಕಟ್

Public TV
By Public TV
8 hours ago
ramanath rai team mangaluru
Dakshina Kannada

ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಂದ್‌: ನಾಳೆ ಬೃಹತ್‌ ಜನಾಂದೋಲನ ನಡಿಗೆ

Public TV
By Public TV
10 hours ago
pm modi 5
Latest

ಭಯದಲ್ಲಿ ಬದುಕಿದ್ದು ಸಾಕು.. ನಮಗಿನ್ನು ನಂಬಿಕೆ ಬೇಕು: ಬಂಗಾಳ ಜನತೆಗೆ ಮೋದಿ ಪತ್ರ

Public TV
By Public TV
10 hours ago
4 Of Mumbai Family Die Of Suspected Food Poisoning After Eating Biryani Watermelon
Crime

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?