ಮುಂಬೈ: ಯುದ್ಧ ಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆ ಆಪರೇಷನ್ ಗಂಗಾ ಯಶಸ್ಸಿಗೆ ಜಾಗತಿಕ ರಂಗದಲ್ಲಿ ಭಾರತದ ಹೆಚ್ಚುತ್ತಿರುವ ಪ್ರಭಾವವೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪುಣೆಯಲ್ಲಿ ಸಿಂಬಯಾಸಿಸ್ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಮೋದಿ, ಆಪರೇಷನ್ ಗಂಗಾ ಮೂಲಕ ನಾವು ಸಾವಿರಾರು ಭಾರತೀಯರನ್ನು ಯುದ್ಧ ವಲಯದಿಂದ ಸುರಕ್ಷಿತವಾಗಿ ಸ್ಥಳಾಂತರಿಸುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಭಾರತಕ್ಕೆ ಗಟ್ಸ್ ಇಲ್ಲ ಅನ್ನೋರು ಮೊದಲು ಉಕ್ರೇನ್ ಗಡಿವರೆಗೆ ತಲುಪಿ ಧಮ್ ತೋರಿಸಬೇಕಿತ್ತು: ಸುಜಯ್
ಹಲವಾರು ದೊಡ್ಡ ದೇಶಗಳು ತಮ್ಮ ನಾಗರಿಕರನ್ನು ಸ್ಥಳಾಂತರಿಸಲು ಕಷ್ಟಪಡುತ್ತಿವೆ. ಆದರೆ ಭಾರತದ ಬೆಳೆಯುತ್ತಿರುವ ಪ್ರಭಾವದಿಂದಾಗಿ ಆಪರೇಷನ್ ಗಂಗಾ ಯೋಜನೆ ಉಕ್ರೇನ್ನ ಯುದ್ಧ ವಲಯದಿಂದ ಸಾವಿರಾರು ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ಮರಳಿ ತರಲು ಸಾಧ್ಯವಾಗುತ್ತಿದೆ ಎಂದರು. ಇದನ್ನೂ ಓದಿ: ಯುದ್ಧವನ್ನು 6 ಗಂಟೆಗಳ ಕಾಲ ನಿಲ್ಲಿಸೋದು ಸಾಮಾನ್ಯದ ಮಾತಾ!: ಹಾಲಪ್ಪ
ಕಳೆದ ವಾರದಿಂದ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಕರೆತರಲು ಆಪರೇಷನ್ ಗಂಗಾ ಕಾರ್ಯಾಚರಣೆ ಪ್ರಾರಂಭಿಸಲಾಯಿತು. ಉಕ್ರೇನ್ನಲ್ಲಿ ಸಿಲುಕಿದ್ದ 13,700 ಭಾರತೀಯರನ್ನು ಸುರಕ್ಷಿತವಾಗಿ ಮನೆಗೆ ಮರಳಿಸಲಾಗಿದೆ ಎಂದು ಭಾರತ ಸರ್ಕಾರ ಶನಿವಾರ ತಿಳಿಸಿದೆ.