ನವದೆಹಲಿ: ದಾಖಲೆಗಳೊಂದಿಗೆ ತೆರೆ ಕಂಡ ಐತಿಹಾಸ ಮಹಾ ಕುಂಭಮೇಳವನ್ನು (Maha Kumbh) ಪ್ರಧಾನಿ ನರೇಂದ್ರ ಮೋದಿ (Narendra Modi) ಬಣ್ಣಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಮೋದಿ, ಈ ಏಕತೆಯ ಮಹಾಕುಂಭವನ್ನು ಯಶಸ್ವಿಗೊಳಿಸಲು ದೇಶವಾಸಿಗಳ ಕಠಿಣ ಪರಿಶ್ರಮ, ಪ್ರಯತ್ನಗಳು ಮತ್ತು ದೃಢಸಂಕಲ್ಪದಿಂದ ಪ್ರಭಾವಿತನಾಗಿದ್ದೇನೆ. ಹೀಗಾಗಿ, ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಮೊದಲನೆಯ ಜ್ಯೋತಿರ್ಲಿಂಗವಾದ ಶ್ರೀ ಸೋಮನಾಥನ ದರ್ಶನಕ್ಕೆ ಹೋಗುತ್ತೇನೆ. ಭಕ್ತಿಯ ಸಂಕೇತವಾಗಿ ಸಂಕಲ್ಪ ಪುಷ್ಪವನ್ನು ಅರ್ಪಿಸುವ ಮೂಲಕ ಪ್ರತಿಯೊಬ್ಬ ಭಾರತೀಯನಿಗಾಗಿ ಪ್ರಾರ್ಥಿಸುತ್ತೇನೆ. ದೇಶವಾಸಿಗಳಲ್ಲಿ ಈ ಏಕತೆಯು ನಿರಂತರವಾಗಿ ಇರಲಿ ಎಂದು ನಾನು ಬಯಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ವಿಶ್ವ ದಾಖಲೆಯೊಂದಿಗೆ ಅತಿದೊಡ್ಡ ಅಧ್ಯಾತ್ಮಿಕ ಮೇಳಕ್ಕೆ ವಿದ್ಯುಕ್ತ ತೆರೆ – 45 ದಿನದಲ್ಲಿ 65 ಕೋಟಿ ಭಕ್ತರ ಪುಣ್ಯಸ್ನಾನ
ಈ ಮಹಾ ಕುಂಭಮೇಳದಲ್ಲಿ ಸಮಾಜದ ಪ್ರತಿಯೊಂದು ಸ್ಥರದ ಮತ್ತು ಪ್ರತಿಯೊಂದು ಕ್ಷೇತ್ರದ ಜನರು ಒಟ್ಟುಗೂಡಿದರು. ‘ಏಕ ಭಾರತ ಶ್ರೇಷ್ಠ ಭಾರತ’ದ ಈ ಅವಿಸ್ಮರಣೀಯ ದೃಶ್ಯವು ಕೋಟ್ಯಂತರ ದೇಶವಾಸಿಗಳಲ್ಲಿ ಆತ್ಮವಿಶ್ವಾಸದ ಮಹಾ ಹಬ್ಬವಾಯಿತು ಎಂದು ಪ್ರಧಾನಿ ಕೊಂಡಾಡಿದ್ದಾರೆ.
ಮಹಾ ಕುಂಭಮೇಳ ಪೂರ್ಣಗೊಂಡಿತು. ಏಕತೆಯ ಮಹಾ ಯಜ್ಞ ಪೂರ್ಣಗೊಂಡಿತು. ಪ್ರಯಾಗರಾಜ್ನಲ್ಲಿ 45 ದಿನಗಳ ಕಾಲ ನಡೆದ ಏಕತೆಯ ಮಹಾಕುಂಭದಲ್ಲಿ 140 ಕೋಟಿ ಭಾರತೀಯರು ಒಂದೇ ಬಾರಿಗೆ ಒಟ್ಟುಗೂಡಿದ ನಂಬಿಕೆ ಅದ್ಭುತವಾಗಿದೆ. ಮಹಾ ಕುಂಭ ಮುಗಿದ ನಂತರ ನನ್ನ ಮನಸ್ಸಿಗೆ ಬಂದ ಆಲೋಚನೆಗಳನ್ನು ಬರೆಯಲು ಪ್ರಯತ್ನಿಸಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ಮಹಾ ಕುಂಭಮೇಳದ ಕಡೆಯ ದಿನ – ಕೋಟ್ಯಂತರ ಜನರಿಂದ ಪುಣ್ಯಸ್ನಾನ