ಕೊಪ್ಪಳ: ಶುಕ್ರವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೊಪ್ಪಳದ ಭತ್ತದ ನಾಡು ಗಂಗಾವತಿ ನಗರಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗಾಗಿ ಸಿದ್ಧಗೊಂಡಿರುವ ಎರಡು ಕಾರುಗಳು ಈಗಾಗಲೇ ನಗರಕ್ಕೆ ಆಗಮಿಸಿದೆ.
ದೆಹಲಿ ಪಾಸಿಂಗ್ ಹೊಂದಿರುವ ಕಪ್ಪು ಬಣ್ಣದ ಫಾರ್ಚುನರ್ ಮತ್ತು ಟಾಟಾ ಸಫಾರಿ ಕಾರುಗಳು ನಗರಕ್ಕೆ ಬಂದಿವೆ. ಈ ಎರಡು ಕಾರುಗಳು ನಗರ ಪೊಲೀಸ್ ಠಾಣೆ ಆವರಣದಲ್ಲಿದೆ.
ಕನಕಗಿರಿ ರಸ್ತೆಯ ಕೃಷಿ ವಿಜ್ಞಾನ ಕೇಂದ್ರದ ಬಳಿ ಪ್ರಧಾನಿ ಮೋದಿ ಸಮಾವೇಶ ನಡೆಯಲಿದ್ದು, ಪ್ರಧಾನಿ ಮೋದಿ ಅವರು ಹೆಲಿಪ್ಯಾಡ್ ನಿಂದ ಕಾರ್ಯಕ್ರಮದ ವೇದಿಕೆಗೆ ಈ ಕಾರುಗಳಲ್ಲಿ ಆಗಮಿಸಿ ಅಭ್ಯರ್ಥಿ ಸಂಗಣ್ಣ ಕರಡಿ ಅವರ ಪರ ಪ್ರಚಾರ ನಡೆಸಲಿದ್ದಾರೆ.
ಮಂಗಳವಾರ ಮೋದಿ ಚಿತ್ರದುರ್ಗ ಮತ್ತು ಮೈಸೂರಿಗೆ ಆಗಮಿಸಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ಇದೇ ವೇಳೆ ಅಂಬರೀಶ್ ಬಗ್ಗೆಯೂ ಮಾತನಾಡಿದ್ದರು. ಜೊತೆ ಸುಮಲತಾ ಅಂಬರೀಶ್ ಅವರಿಗೆ ಆಶೀರ್ವಾದ ಮಾಡಿ ಎಂದು ಮತದಾರರಲ್ಲಿ ಮನವಿ ಮಾಡಿದ್ದರು.