ಅಮರಾವತಿ: ಭೋಗಾಪುರಂನಲ್ಲಿರುವ ಅಳ್ಳೂರಿ ಸೀತಾರಾಮ ರಾಜು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Alluri Sitarama Raju International Airport) ಸೇರಿದಂತೆ ಆಂಧ್ರ ಪ್ರದೇಶದಲ್ಲಿ (Andhra Pradesh) 17,900 ಕೋಟಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಉದ್ಘಾಟಿಸಿದರು.
ವಿಜಯನಗರಂ ಜಿಲ್ಲೆಯ ಭೋಗಾಪುರಂನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಯೋಜನೆಗಳು ‘ಸ್ವರ್ಣ ಆಂಧ್ರ’ ನಿರ್ಮಾಣದ ಕನಸನ್ನು ಮತ್ತಷ್ಟು ವೇಗಗೊಳಿಸಲಿದ್ದು, ರಾಜ್ಯವು ಅಭಿವೃದ್ಧಿಯಲ್ಲಿ ಹೊಸ ದಾಖಲೆ ನಿರ್ಮಿಸಿದೆ ಎಂದು ಹೇಳಿದರು. ಇದನ್ನೂ ಓದಿ: ಬಾಕ್ಸಾಫೀಸ್ನಲ್ಲಿ ಜನ ನಾಯಗನ್ ಗಳಿಕೆ ಎಷ್ಟು?

ಪ್ರಧಾನಿ ಮೋದಿ ಅವರ ಪ್ರವಾಸದ ಪ್ರಮುಖ ಆಕರ್ಷಣೆಯಾಗಿದ್ದದ್ದು ಭೋಗಾಪುರಂನಲ್ಲಿರುವ ಅಳ್ಳೂರಿ ಸೀತಾರಾಮ ರಾಜು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಘಾಟನೆ. ಸುಮಾರು 5,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ವಿಮಾನ ನಿಲ್ದಾಣವು ಆಂಧ್ರ ಪ್ರದೇಶದ ಮೂರನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ. ಇದನ್ನೂ ಓದಿ: ಪತ್ನಿಗೆ ಅನೈತಿಕ ಸಂಬಂಧ ಆರೋಪ – ವಿಡಿಯೋ ಮಾಡಿ ಹತ್ಯೆ, ಬಳಿಕ ನೇಣಿಗೆ ಶರಣಾದ ಪತಿ
ಸ್ವಾತಂತ್ರ್ಯ ಹೋರಾಟಗಾರ ಹಾಗೂ ಆದಿವಾಸಿ ನಾಯಕ ಅಳ್ಳೂರಿ ಸೀತಾರಾಮ ರಾಜು ಅವರ ಹೆಸರನ್ನು ಈ ವಿಮಾನ ನಿಲ್ದಾಣಕ್ಕೆ ಇಡಲಾಗಿದೆ. ಮೊದಲ ಹಂತದಲ್ಲೇ ವರ್ಷಕ್ಕೆ 60 ಲಕ್ಷ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿರುವ ಈ ವಿಮಾನ ನಿಲ್ದಾಣವನ್ನು ಮುಂದಿನ ದಿನಗಳಲ್ಲಿ 4 ಕೋಟಿ ಪ್ರಯಾಣಿಕರನ್ನು ನಿರ್ವಹಿಸುವಂತೆ ವಿಸ್ತರಿಸುವ ಯೋಜನೆ ರೂಪಿಸಲಾಗಿದೆ. ಇದನ್ನೂ ಓದಿ: ಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ – ಸೋಮವಾರ ಸಂಜೆ ಪ್ರಮಾಣವಚನ ಫಿಕ್ಸ್
ವಿಮಾನ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ಅಳ್ಳೂರಿ ಸೀತಾರಾಮ ರಾಜು ಅವರು ಆದಿವಾಸಿಗಳ ಹಕ್ಕುಗಳಿಗಾಗಿ ಹೋರಾಡಿದ ನೆಲದಲ್ಲೇ ಈ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. ಇದು ಉತ್ತರ ಆಂಧ್ರದ ಅಭಿವೃದ್ಧಿಗೆ ಹೊಸ ರನ್ವೇ ಆಗಿದ್ದು, ರಾಜ್ಯದ ಯುವಜನತೆಗೆ ಉಜ್ವಲ ಭವಿಷ್ಯದ ಲಾಂಚ್ಪ್ಯಾಡ್ ಆಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರಿಗೆ ಕಾವೇರಿ ಆತಂಕ – ಕುಡಿಯುವ ನೀರಿನ ಬಳಕೆಗೆ ಹೊಸ ಮಾರ್ಗಸೂಚಿಗೆ ಜಲಮಂಡಳಿ ಸಿದ್ಧತೆ

ಈ ವೇಳೆ ಕಾಂಗ್ರೆಸ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಮೋದಿ, ಹಿಂದೆ ವಿಮಾನ ನಿಲ್ದಾಣಗಳಿಗೆ ಒಂದೇ ಕುಟುಂಬದ ಹೆಸರನ್ನು ಇಡುವ ಸಂಪ್ರದಾಯವಿತ್ತು. ನಮ್ಮ ಸರ್ಕಾರ ಆ ಸಂಪ್ರದಾಯವನ್ನು ಬದಲಿಸಿದೆ. ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ವಾಲ್ಮೀಕಿ ಹಾಗೂ ಪಂಜಾಬ್ನ ವಿಮಾನ ನಿಲ್ದಾಣಕ್ಕೆ ಸಂತ್ ರವಿದಾಸ್ ಅವರ ಹೆಸರಿಟ್ಟಿದ್ದೇವೆ. ಇದೀಗ ಭೋಗಾಪುರಂ ವಿಮಾನ ನಿಲ್ದಾಣಕ್ಕೆ ಅಳ್ಳೂರಿ ಸೀತಾರಾಮ ರಾಜು ಅವರ ಹೆಸರಿಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ನಾನು ಮೈಸೂರಿನ ಅಳಿಯ, ರಾಜ್ಯದಲ್ಲಿ ಬಲಿಷ್ಠ ಸರ್ಕಾರಕ್ಕೆ ಮತ್ತೇ ಅವಕಾಶ ಮಾಡಿಕೊಡಿ: ಡಿ.ಕೆ ಶಿವಕುಮಾರ್
ಆಂಧ್ರ ಸರ್ಕಾರದ ಪ್ರಕಾರ, ಈ ವಿಮಾನ ನಿಲ್ದಾಣವು ಉತ್ತರ ಆಂಧ್ರದ ಆರ್ಥಿಕ ಬೆಳವಣಿಗೆಗೆ ಪ್ರಮುಖ ಕೇಂದ್ರವಾಗಲಿದೆ. ಕೃತಕ ಬುದ್ಧಿಮತ್ತೆ, ಬಿಲ್ಡಿಂಗ್ ಇನ್ಫರ್ಮೇಷನ್ ಮಾಡೆಲಿಂಗ್, ಏರ್ಸೈಡ್ 4.0 ತಂತ್ರಜ್ಞಾನ ಹಾಗೂ ಬಯೋಮೆಟ್ರಿಕ್ ಪ್ರಯಾಣಿಕರ ಸಂಸ್ಕರಣೆಯಂತಹ ಅತ್ಯಾಧುನಿಕ ಸೌಲಭ್ಯಗಳನ್ನು ಇಲ್ಲಿ ಅಳವಡಿಸಲಾಗಿದೆ. ಇದನ್ನೂ ಓದಿ: ಎಥೆನಾಲ್ ಮಿಶ್ರಣ ಇರದಿದ್ರೆ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 125 ರೂ. ಇರ್ತಿತ್ತು: ಕೇಂದ್ರ
ಪ್ರಧಾನಿ ಮೋದಿ ಆಗಮಿಸಿದ ವೇಳೆ 13,500ಕ್ಕೂ ಹೆಚ್ಚು ಆದಿವಾಸಿ ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಸಾಂಪ್ರದಾಯಿಕ ಧಿಮ್ಸಾ ನೃತ್ಯ ಪ್ರದರ್ಶಿಸಿ ಅವರನ್ನು ಸ್ವಾಗತಿಸಿದರು. ಈ ಪ್ರದರ್ಶನವು ದಾಖಲೆ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಗಮನ ಸೆಳೆಯಿತು. ಧಿಮ್ಸಾ ನೃತ್ಯದ ಬಗ್ಗೆ ಮಾತನಾಡಿದ ಪ್ರಧಾನಿ, ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಅಭಿವೃದ್ಧಿ ಮತ್ತು ಸಂಸ್ಕೃತಿಯ ಸಮತೋಲನದ ದೃಷ್ಟಿಕೋನವನ್ನು ಶ್ಲಾಘಿಸಿದರು. ಒಂದು ಕಡೆ ಆಕಾಶ ಮುಟ್ಟುವ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದ್ದರೆ, ಮತ್ತೊಂದು ಕಡೆ ನಮ್ಮ ಆದಿವಾಸಿ ಸಹೋದರಿಯರು ಧಿಮ್ಸಾ ನೃತ್ಯದ ಮೂಲಕ ವಿಶ್ವದಾಖಲೆ ನಿರ್ಮಿಸುತ್ತಿದ್ದಾರೆ. ಚಂದ್ರಬಾಬು ಅವರ ಈ ದೂರದೃಷ್ಟಿಯನ್ನು ನಾನು ಮೆಚ್ಚುತ್ತೇನೆ ಎಂದರು. ಇದನ್ನೂ ಓದಿ: ಎಲ್ಲೆಂದರಲ್ಲಿ ಕಸ ಸುರಿಯುವ ವಾಹನಗಳನ್ನ ಮುಲಾಜಿಲ್ಲದೇ ಮುಟ್ಟುಗೋಲು ಹಾಕಿಕೊಳ್ಳಿ; ಪೊಲೀಸರಿಗೆ ಸಿಎಂ ಸೂಚನೆ

ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಾತನಾಡಿ, ಪ್ರಧಾನಿ ಮೋದಿ ಉದ್ಘಾಟಿಸಿರುವ ಈ ವಿಮಾನ ನಿಲ್ದಾಣವು ಉತ್ತರ ಆಂಧ್ರದ ಕಿರೀಟದ ರತ್ನವಾಗಿದೆ. ಈ ಭಾಗದ ಜನರ ಬಹುಕಾಲದ ಕನಸು ಇಂದು ನನಸಾಗಿದೆ ಎಂದು ಹೇಳಿದರು. ಇದನ್ನೂ ಓದಿ: ʻಬರʼ ಸಿಡಿಲಿನ ನಡುವೆ ರಾಜ್ಯಕ್ಕೆ ಸಿಹಿ ಸುದ್ದಿ – ಭರ್ತಿಯತ್ತ ಕಬಿನಿ, ಯಾವುದೇ ಕ್ಷಣದಲ್ಲಿ ನದಿಗೆ ನೀರು
ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಇಂಡಿಯಾ ಸೆಮಿಕಂಡಕ್ಟರ್ ಮಿಷನ್ ಅಡಿಯಲ್ಲಿ ಅನುಮೋದನೆ ಪಡೆದಿರುವ ಆಂಧ್ರ ಪ್ರದೇಶದ ಮೊದಲ ಸೆಮಿಕಂಡಕ್ಟರ್ ಉತ್ಪಾದನಾ ಘಟಕಕ್ಕೂ ಚಾಲನೆ ನೀಡಿದರು. ಈ ಘಟಕದಲ್ಲಿ ವರ್ಷಕ್ಕೆ ಸುಮಾರು 9.6 ಕೋಟಿ ಚಿಪ್ಗಳನ್ನು ಉತ್ಪಾದಿಸುವ ಸಾಮರ್ಥ್ಯವಿದ್ದು, ರಾಜ್ಯದಲ್ಲಿ ಸೆಮಿಕಂಡಕ್ಟರ್ ಕೈಗಾರಿಕಾ ಪರಿಸರ ನಿರ್ಮಾಣಕ್ಕೆ ಇದು ನೆರವಾಗಲಿದೆ. ಇದನ್ನೂ ಓದಿ: ಮಾಲತಿ ಹೊಳೆಯಲ್ಲಿ ಸಿಲುಕಿದ ಕಾರು – ಸಂಕಷ್ಟದಲ್ಲಿದ್ದವರನ್ನು ಪ್ರಾಣದ ಹಂಗು ತೊರೆದು ರಕ್ಷಿಸಿದ ಸ್ಥಳೀಯರು
ಇದೇ ವೇಳೆ, 5,550 ಕೋಟಿ ರೂ. ವೆಚ್ಚದ ಕರ್ನೂಲ್-ಐವಿ ನವೀಕರಿಸಬಹುದಾದ ಇಂಧನ ವಲಯ (4.5 ಗಿಗಾವ್ಯಾಟ್) ವಿದ್ಯುತ್ ಪ್ರಸರಣ ಯೋಜನೆಗೆ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಜೊತೆಗೆ ಕರ್ನೂಲ್ ಹಾಗೂ ಅನಂತಪುರ ಜಿಲ್ಲೆಗಳ ಗಾಳಿ ಮತ್ತು ಸೌರ ವಿದ್ಯುತ್ ಯೋಜನೆಗಳಿಗೆ ಸಂಬಂಧಿಸಿದ ಹಲವು ಪ್ರಸರಣ ವ್ಯವಸ್ಥೆಗಳನ್ನೂ ಉದ್ಘಾಟಿಸಿದರು. ಇದನ್ನೂ ಓದಿ: ʼನನಗಿನ್ನೂ 15 ವರ್ಷ, ನನ್ನನ್ನು ಕ್ಷಮಿಸಿʼ – ಪ್ರಧಾನಿ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದಕ್ಕೆ ಅಪ್ರಾಪ್ತೆ ಕ್ಷಮೆಯಾಚನೆ
ಜೊತೆಗೆ 1,880 ಕೋಟಿಗೂ ಅಧಿಕ ಮೌಲ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಮೋದಿ ಲೋಕಾರ್ಪಣೆಗೊಳಿಸಿದರು. ಈ ಯೋಜನೆಗಳು ಆಂಧ್ರ ಪ್ರದೇಶದಲ್ಲಿ ಮೂಲಸೌಕರ್ಯ, ಕೈಗಾರಿಕೆ, ಸಾರಿಗೆ, ವಿದ್ಯುತ್ ಹಾಗೂ ಉದ್ಯೋಗ ಸೃಷ್ಟಿಗೆ ಮಹತ್ವದ ಉತ್ತೇಜನ ನೀಡಲಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ಕೇರಳ | ಇಡುಕ್ಕಿಯಲ್ಲಿ ಭಾರೀ ಮಳೆಗೆ ಭೂಕುಸಿತ – ಮೂವರು ಸಾವು, ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

