Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ಮೋದಿಯಿಂದ ಬಂಗಾರದ ತೀರ್ಥ ಮಂಟಪ ಉದ್ಘಾಟನೆ, ಭಗವದ್ಗೀತೆಯ 10 ಶ್ಲೋಕ ಪಠಣ – ಉಡುಪಿಯಲ್ಲಿಂದು ಹತ್ತಾರು ವಿಶೇಷ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪ್ರಧಾನಿ ಮೋದಿಯಿಂದ ಬಂಗಾರದ ತೀರ್ಥ ಮಂಟಪ ಉದ್ಘಾಟನೆ, ಭಗವದ್ಗೀತೆಯ 10 ಶ್ಲೋಕ ಪಠಣ – ಉಡುಪಿಯಲ್ಲಿಂದು ಹತ್ತಾರು ವಿಶೇಷ!

Districts

ಪ್ರಧಾನಿ ಮೋದಿಯಿಂದ ಬಂಗಾರದ ತೀರ್ಥ ಮಂಟಪ ಉದ್ಘಾಟನೆ, ಭಗವದ್ಗೀತೆಯ 10 ಶ್ಲೋಕ ಪಠಣ – ಉಡುಪಿಯಲ್ಲಿಂದು ಹತ್ತಾರು ವಿಶೇಷ!

Public TV
Last updated: November 28, 2025 8:17 am
Public TV
Share
3 Min Read
Modi
SHARE

– ಉಡುಪಿಯಲ್ಲಿಂದು ಪ್ರಧಾನಿ ಮೋದಿ ಕಾರ್ಯಕ್ರಮ ಏನೇನು?

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ಕೊಡಲಿದ್ದಾರೆ. ಕೃಷ್ಣ ಮಠಕ್ಕೆ ಭೇಟಿ ಕೊಟ್ಟ ನಂತರ ಲಕ್ಷ್ಯಕಂಠ ಗೀತಾ ಪಠಣ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸುಮಾರು 25,000 ಜನ ಕುಳಿತುಕೊಳ್ಳುವ ಸುಸಜ್ಜಿತ ಪೆಂಡಾಲನ್ನು ಸಿದ್ಧ ಮಾಡಲಾಗಿದೆ.

ವಿಐಪಿ ವಿಐಪಿ ಭಗವದ್ಗೀತೆ (Bhagavad Gita) ಪಟ್ಟಣ ಮಾಡುವವರು ಮತ್ತು ಸಾರ್ವಜನಿಕರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ವೇದಿಕೆಯನ್ನ ಸಂಪೂರ್ಣವಾಗಿ ಹವಾನಿಯಂತ್ರಿತ ಮಾಡಲಾಗಿದೆ. ಪೆಂಡಾಲಿಗೆ 5 ಬೃಹತ್ ಫ್ಯಾನುಗಳನ್ನ ಅಳವಡಿಸಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆಯನ್ನ ಮಠವೇ ಮಾಡಿದ್ದು, ನೀರಿನ ಬ್ಯಾಗ್, ಬಾಟಲ್, ತಿಂಡಿ ತಿನಸು, ತರುವಂತಿಲ್ಲ. ಸಮಾವೇಶದ ನಂತರ ಒಂದು ಲಕ್ಷ ಜನಕ್ಕೆ ಊಟೋಪಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಇದನ್ನೂ ಓದಿ: ಇಂದು ಕೃಷ್ಣನಗರಿ ಉಡುಪಿಗೆ ಮೋದಿ – ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿರುವ ಪ್ರಧಾನಿ

Udupi Modi 1

ಉಡುಪಿಯಲ್ಲಿಂದು ಮೋದಿ ಕಾರ್ಯಕ್ರಮ ಏನೇನು?
* ಬೆಳಗ್ಗೆ 8ಕ್ಕೆ ದೆಹಲಿಯಿಂದ ಹೊರಡಲಿರುವ ಪ್ರಧಾನಿ ಮೋದಿ
* ಬೆ.11:05ಕ್ಕೆ – ಮಂಗಳೂರು ಏರ್‌ಪೋರ್ಟ್‌ಗೆ ಮೋದಿ ಆಗಮನ
* ಬೆ.11:35 – ಸೇನಾ ಹೆಲಿಕಾಪ್ಟರ್‌ನಲ್ಲಿ ಉಡುಪಿಗೆ ಹೆಲಿಪ್ಯಾಡ್‌ಗೆ ಆಗಮನ
* ಉಡುಪಿಯ ರಥಬೀದಿಯಲ್ಲಿ ಮೋದಿ 2 ಕಿ.ಮೀ ರೋಡ್ ಶೋ
* ಚಿನ್ನದ ಕವಚ ಅಳವಡಿಸಿರುವ ಕನಕನ ಕಿಂಡಿ ಲೋಕಾರ್ಪಣೆ
* ಸ್ವರ್ಣ ಖಚಿತ ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣದೇವರ ದರ್ಶನ
* ಅಷ್ಟಮಠಾಧೀಶರೊಂದಿಗೆ ಪ್ರಧಾನಿ ಮೋದಿ ಮಾತುಕತೆ
* ಮಠದಲ್ಲಿ ವೈದಿಕರಿಂದ ಉಪನಿಷತ್ತು, ವೇದ, ಗೀತೆ ಪಠಣ
* ಗೀತಾ ಮಂದಿರಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ
* ಗೀತಾ ಮಂದಿರದಲ್ಲಿ ನೂತನ ಅನಂತಪದ್ಮನಾಭ ದೇವರ ಪ್ರತಿಮೆ ಅನಾವರಣ
* ಧ್ಯಾನ ಮಂದಿರದಲ್ಲಿ ಧ್ಯಾನ ಮಾಡಲಿರುವ ಪ್ರಧಾನಿ ಮೋದಿ
* ಗೀತಾ ಮಂದಿರದಲ್ಲೇ ಲಘು ಉಪಹಾರ ಸ್ವೀಕಾರ
* ಮೋದಿಗಾಗಿ ತುಳುನಾಡಿನ ತಿಂಡಿಗಳ ಸಿದ್ಧತೆ
* ಲಕ್ಷ ಕಂಠ ಭಗವದ್ಗೀತಾ ಸಮಾವೇಶದಲ್ಲಿ ಪ್ರಧಾನಿ ಭಾಗಿ
* ನೆಲದ ಮೇಲೆ ಅಸೀನರಾಗಲಿರುವ ಪ್ರಧಾನಿ ಮೋದಿ
* ಭಗವದ್ಗೀತೆಯ 10 ಶ್ಲೋಕಗಳ ಪಠಣ ಮಾಡಲಿರುವ ಮೋದಿ
* ಬಳಿಕ ಪ್ರಧಾನಿ ಮೋದಿ ಭಾಷಣ

Udupi Modi

ಮಲ್ಪೆ ಕಡಲ ತೀರದಲ್ಲಿ ಮೋದಿಯ ಮರಳು ಶಿಲ್ಪ
ಪ್ರಧಾನಿ ನರೇಂದ್ರ ಮೋದಿ ಉಡುಪಿ (Udupi) ಭೇಟಿ ಹಿನ್ನೆಲೆಯಲ್ಲಿ ಮಲ್ಪೆ ಕಡಲ ತೀರದಲ್ಲಿ ಕಲಾವಿದರು ಕೈಚಳಕ ಮೆರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ವಿಶೇಷ ಮರಳಿನ ಕಲಾಕೃತಿ ರಚನೆ ಮಾಡಲಾಗಿದೆ. ಸ್ಯಾಂಡ್ ಥೀಮ್ ಕಲಾವಿದರಿಂದ ಮರಳು ಶಿಲ್ಪ ರಚಿಸಿದ್ದು, ಕಡೆಗೋಲು ಕೃಷ್ಣನ ಜೊತೆ ಪ್ರಧಾನಿ ನರೇಂದ್ರ ಮೋದಿಯ ಚಿತ್ರ ರಚಿಸಲಾಗಿದೆ. ಮರಳಿನ ಚಿತ್ರಕ್ಕೆ ಬಣ್ಣವನ್ನ ಕೊಡಲಾಗಿದೆ. ಕಲಾವಿದ ಹರೀಶ್ ಸಾಗ ಮತ್ತು ತಂಡದವರಿಂದ ದಿನವಿಡೀ ಪರಿಶ್ರಮ ಪಟ್ಟು ಮಾಡಿದ್ದಾರೆ. ಇದನ್ನೂ ಓದಿ: ಉಡುಪಿಗೆ ಇಂದು ಪ್ರಧಾನಿ ಮೋದಿ ಆಗಮನ – ಕಾರ್ಯಕ್ರಮ 40 ನಿಮಿಷ ಪ್ರೀಪೋನ್‌

ಬಂಗಾರದ ತೀರ್ಥ ಮಂಟಪ ಉದ್ಘಾಟನೆ
ಪ್ರಧಾನಿ ನರೇಂದ್ರ ಮೋದಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ಕೊಡುವ ಸಂದರ್ಭ ಬಂಗಾರದ ತೀರ್ಥ ಮಂಟಪ ಉದ್ಘಾಟನೆ ಮಾಡಲಿದ್ದಾರೆ. ಕೃಷ್ಣಮಠದ ಗರ್ಭಗುಡಿಯ ಹೊರ ಭಾಗದಲ್ಲಿರುವ ತೀರ್ಥ ಮಂಟಪವನ್ನ ಸಂಪೂರ್ಣವಾಗಿ ಬಂಗಾರದಿಂದ ಮುಚ್ಚಲಾಗಿದೆ. 4 ಕಂಬಗಳು ಮೇಲ್ಚಾವಣಿಗೆ ಬಂಗಾರ ಹಾಸಲಾಗಿದೆ. ಶಂಖ ಚಕ್ರ ಗಧಾ ಪದ್ಮ ಗಜಪಕ್ಷಿ ಅಲಂಕಾರ ರಚಿಸಲಾಗಿದೆ. ತಮಿಳುನಾಡಿನ ಉದ್ಯಮಿ ರವಿ ಶ್ಯಾಮ್, ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ 50ನೇ ವರ್ಷದ ಸನ್ಯಾಸ ದೀಕ್ಷೆ ಹಿನ್ನೆಲೆಯಲ್ಲಿ ಈ ಸೇವೆಯನ್ನು ನೀಡುತ್ತಿದ್ದಾರೆ.

Udupi Pm Modi

ಕೃಷ್ಣ ಮಠಕ್ಕೆ ಬರುವ ಮುನ್ನ ಶ್ರೀಕೃಷ್ಣನ ದರ್ಶನ
ಉಡುಪಿ ಶ್ರೀಕೃಷ್ಣ ಮಠಕ್ಕೆ ರಥಬೀದಿ ಮೂಲಕ ಆಗಮಿಸುವ ಪ್ರಧಾನಿ ಮೋದಿ ಮೊದಲು ಕನಕನ ಕಿಂಡಿಯ ಮೂಲಕ ಶ್ರೀ ಕೃಷ್ಣ ದೇವರ ದರ್ಶನ ಮಾಡುತ್ತಾರೆ. ಬಂಗಾರ ಲೇಪಿತ ಕನಕನ ಕಿಂಡಿ ಉದ್ಘಾಟಿಸಿ ಕನಕದಾಸರ ಗುಡಿ ದರ್ಶನ ಮಾಡುತ್ತಾರೆ. ಇದನ್ನೂ ಓದಿ: ಪಾಂಚಜನ್ಯ ಊದಲು ಮೋದಿ ಬರ್ತಿದ್ದಾರೆ: ಸುನಿಲ್ ಕುಮಾರ್

ಇನ್ನೂ ಮೋದಿ ಭೇಟಿ ಹಿನ್ನೆಲೆ ಇಂದು ಉಡುಪಿ ನಗರ ಠಾಣೆ, ಮಲ್ಪೆ, ಮಣಿಪಾಲ ಠಾಣಾ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಡಿಸಿ ಸ್ವರೂಪ ಆದೇಶ ಹೊರಡಿಸಿದ್ದಾರೆ. ಇನ್ನು ಮೋದಿ ಉಡುಪಿ ಕಾರ್ಯಕ್ರಮ ಮುಗಿಸಿದ ಬಳಿಕ ಮಂಗಳೂರಿಗೆ ತೆರಳಿ ಅಲ್ಲಿಂದ ಗೋವಾದಲ್ಲಿ ಶ್ರೀರಾಮ ಮೂರ್ತಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ.

TAGGED:bjpdroneModi Road Shownarendra modiudupiUdupi Sri Krishna mathaಉಡುಪಿನರೇಂದ್ರ ಮೋದಿಮೋದಿ ರೋಡ್‌ ಶೋ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post
kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood

You Might Also Like

IND vs NZ 3
Cricket

ದುಬೆ ಬೆಂಕಿ ಬ್ಯಾಟಿಂಗ್‌ ವ್ಯರ್ಥ – ಸರಣಿಯಲ್ಲಿ ಮೊದಲ ಗೆಲುವು; ಕಿವೀಸ್‌ಗೆ 50 ರನ್‌ಗಳ ಜಯ

Public TV
By Public TV
13 minutes ago
Rock Climbing
Districts

ರಾಕ್ ಕ್ಲೈಂಬಿಂಗ್ ಕ್ರೀಡೆಗೆ ಆನೆಗೊಂದಿ ಫೇಮಸ್

Public TV
By Public TV
1 hour ago
Droupadi Murmu 1
Latest

ವಿಬಿ-ಜಿ ರಾಮ್ ಜಿ ಕಾನೂನು ಮೂಲಕ ಗ್ರಾಮೀಣ ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ಮುನ್ನುಡಿ: ರಾಷ್ಟ್ರಪತಿ ಮುರ್ಮು ಶ್ಲಾಘನೆ

Public TV
By Public TV
1 hour ago
Kavital Police Station
Crime

ಕೌಟುಂಬಿಕ ಕಲಹಕ್ಕೆ ಗರ್ಭಿಣಿ ಸೊಸೆಯನ್ನ ಕೊಂದ ಮಾವ – ಆರೋಪಿ ಅರೆಸ್ಟ್

Public TV
By Public TV
1 hour ago
Anantha Subbarao 2
Bengaluru City

ಹಿರಿಯ ಕಾರ್ಮಿಕ ಹೋರಾಟಗಾರ ಅನಂತ ಸುಬ್ಬರಾವ್ ಹೃದಯಾಘಾತದಿಂದ ನಿಧನ

Public TV
By Public TV
2 hours ago
Mysuru Raid
Crime

ಮೈಸೂರು | ಫೆನಾಯಿಲ್ ಘಟಕದ ಹೆಸರಲ್ಲಿ ಡ್ರಗ್ಸ್ ತಯಾರಿಕೆ; ಗುಜರಾತ್‌ ಪೆಡ್ಲರ್‌ನಿಂದ ಸಿಕ್ತು ಲಿಂಕ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?