ವಾರಣಾಸಿ | 2,200 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

Public TV
2 Min Read
Modi

– ಆಪರೇಷನ್‌ ಸಿಂಧೂರ ಯಶಸ್ಸನ್ನ ಮಹಾದೇವನ ಪಾದಗಳಿಗೆ ಅರ್ಪಿಸುತ್ತೇನೆ; ಮೋದಿ
– 9.7 ಕೋಟಿ ರೈತರ ಖಾತೆಗಳಿಗೆ 20,000 ಕೋಟಿ ಜಮೆ

ಲಕ್ನೋ: ಸ್ವ-ಕ್ಷೇತ್ರ ವಾರಣಾಸಿಗೆ ಇಂದು ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ರಕ್ಷಣೆ, ಪ್ರವಾಸೋದ್ಯಮ, ನಗರಾಭಿವೃದ್ಧಿ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಿಗೆ ಸಂಬಂಧಿಸಿದ ಯೋಜನೆಗಳನ್ನು ಉದ್ಘಾಟಿಸಿದರು.

ಸುಮಾರು 2,200 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳ (Development Projects) ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿದ್ರು. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಹಣವನ್ನ ಜಮೆ ಮಾಡಿದರು. 9.7 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ 20,000 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತದ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಹಣವನ್ನ ಜಮೆ ಮಾಡಿದರು. ಇದನ್ನೂ ಓದಿ: Operation Akhal | ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಸೇನಾ ಕಾರ್ಯಾಚರಣೆ – ಎನ್‌ಕೌಂಟರ್‌ಗೆ ಓರ್ವ ಉಗ್ರ ಬಲಿ

Operation Sindoor

ಇದೇ ವೇಳೆ ವೇದಿಕೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಆಪರೇಷನ್‌ ಸಿಂಧೂರ (Operation Sindoor) ಯಶಸ್ಸಿನ ಕುರಿತು ವಿವರಣೆ ನೀಡಿದ್ರು. ಆಪರೇಷನ್‌ ಸಿಂಧೂರ ಯಶಸ್ಸನ್ನ ನಾನು‌ ಮಹಾದೇವನಿಗೆ ಅರ್ಪಿಸುತ್ತೇನೆ ಎಂದರು. ಇದನ್ನೂ ಓದಿ: ಕೋಮುವಾದ ಹರಡಲು ಯತ್ನಿಸಿದ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ನೀಡಿರೋದು ಭಾರತ ಚಿತ್ರರಂಗಕ್ಕೆ ಅವಮಾನ: ಪಿಣರಾಯಿ ವಿಜಯನ್

ನಮ್ಮ ಹೆಣ್ಣುಮಕ್ಕಳ ಸಿಂಧೂರಕ್ಕೆ ಸೇಡು ತೀರಿಸಿಕೊಳ್ಳಲು ನಾವು ತೆಗೆದುಕೊಂಡ ಪ್ರತಿಜ್ಞೆ ಈಡೇರಿದೆ. ಮಹಾದೇವನ ಆಶೀರ್ವಾದದಿಂದ ಮಾತ್ರ ಅದು ಸಾಧ್ಯವಾಗಿದೆ. ಹಾಗಾಗಿ ʻಆಪರೇಷನ್ ಸಿಂಧೂರʼದ ಯಶಸ್ಸನ್ನ ಮಹಾದೇವನ ಪಾದಗಳಿಗೆ ಅರ್ಪಿಸುತ್ತೇನೆ ಎಂದು ನುಡಿದರು. ಇದನ್ನೂ ಓದಿ: ಭಾರತ ಇನ್ಮುಂದೆ ರಷ್ಯಾದಿಂದ ಕಚ್ಚಾ ತೈಲ ಖರೀದಿಸಲ್ಲ, ಇದು ಒಳ್ಳೆಯ ಹೆಜ್ಜೆ – ಡೊನಾಲ್ಡ್‌ ಟ್ರಂಪ್‌

Share This Article