ಪ್ಯಾಲೆಸ್ತೀನ್‌ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಿ ಮೋದಿ – ಗಾಜಾ ಪರಿಸ್ಥಿತಿ ಬಗ್ಗೆ ಭಾರತ ಕಳವಳ

Public TV
1 Min Read
Narendra Modi Mahmoud Abbas

ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನ್ಯೂಯಾರ್ಕ್‌ನಲ್ಲಿ ಪ್ಯಾಲೆಸ್ತೀನ್‌ ಅಧ್ಯಕ್ಷ ಮಹಮೂದ್‌ ಅಬ್ಬಾಸ್‌ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಸಭೆ ನಡೆಸಿದರು.

ಗಾಜಾದಲ್ಲಿನ ಮಾನವೀಯ ಪರಿಸ್ಥಿತಿಯ ಬಗ್ಗೆ ಪ್ರಧಾನ ಮಂತ್ರಿಯವರು ಕಳವಳ ವ್ಯಕ್ತಪಡಿಸಿದರು. ಪ್ಯಾಲೆಸ್ತೀನಿಯನ್ ಜನರಿಗೆ ಭಾರತದ ಬೆಂಬಲ ಇರಲಿದೆ ಎಂದು ತಿಳಿಸಿದರು.

ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ ಪರಿಹಾರಕ್ಕಾಗಿ ಭಾರತವು ದೀರ್ಘಕಾಲ ಪ್ರಯತ್ನಿಸಲಿದೆ. ಅ.7 ರಂದು ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಮೊದಲ ಜಾಗತಿಕ ನಾಯಕರಲ್ಲಿ ಪಿಎಂ ಮೋದಿ ಒಬ್ಬರು. ಆದರೆ, ಗಾಜಾದಲ್ಲಿ ಹದಗೆಡುತ್ತಿರುವ ಪರಿಸ್ಥಿತಿಯ ಬಗ್ಗೆ ಭಾರತ ಪದೇ ಪದೇ ಕಳವಳ ವ್ಯಕ್ತಪಡಿಸಿದೆ.

ಭಾರತವು ತನ್ನ ಬದ್ಧತೆಯ ಭಾಗವಾಗಿ ಗಾಜಾದ ಜನರಿಗೆ ಮಾನವೀಯ ನೆರವನ್ನು ಕಳುಹಿಸಿತು. ಜುಲೈನಲ್ಲಿ, ಭಾರತವು 2024-25 ನೇ ವರ್ಷಕ್ಕೆ ಪ್ಯಾಲೆಸ್ತೀನ್ ನಿರಾಶ್ರಿತರಿಗಾಗಿ ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ, UNRWA ಗೆ 2.5 ಮಿಲಿಯನ್ ಡಾಲರ್‌ಗಳ ಮೊದಲ ಕಂತನ್ನು ಬಿಡುಗಡೆ ಮಾಡಿತು.

ಇದಕ್ಕೂ ಮುನ್ನ, ಪ್ರಧಾನಿ ಮೋದಿ ನೇಪಾಳಿ ಪ್ರಧಾನಿ ಕೆಪಿ ಶರ್ಮಾ ಒಲಿ ಮತ್ತು ಕುವೈತ್ ಕ್ರೌನ್ ಪ್ರಿನ್ಸ್ ಶೇಖ್ ಸಬಾಹ್ ಖಲೀದ್ ಅಲ್-ಹಮದ್ ಅಲ್-ಮುಬಾರಕ್ ಅಲ್-ಸಬಾಹ್ ಅವರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಿದ್ದರು.

Share This Article