ಕೊಲಂಬೊ: ಶ್ರೀಲಂಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ಅವರನ್ನ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಲಂಕಾದಲ್ಲಿ ನೆಲೆಸಿರುವ ಭಾರತೀಯ ಮೂಲದ ತಮಿಳು ಸಮುದಾಯಕ್ಕೆ (Indian-Origin Tamil community) ಸಿಹಿ ಸುದ್ದಿ ಕೊಟ್ಟಿದ್ದಾರೆ.
The meeting with leaders of Indian Origin Tamil (IOT) was fruitful. The community constitutes a living bridge between the two countries for over 200 years. India will support construction of 10,000 houses, healthcare facilities, the sacred site Seetha Eliya temple and other… pic.twitter.com/5A2VDDjnM1
— Narendra Modi (@narendramodi) April 5, 2025
ಹೌದು. ಶ್ರೀಲಂಕಾದಲ್ಲಿ (Sri Lanka) ನೆಲೆಸಿರುವ ಭಾರತೀಯ ಮೂಲದ ತಮಿಳು ಸಮುದಾಯಕ್ಕೆ 10,000 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಹೇಳಿದ್ದಾರೆ. ಜೊತೆಗೆ ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸುವ ಭರವಸೆಯನ್ನೂ ನೀಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ ಶ್ರೀಲಂಕಾದ ಅತ್ಯುನ್ನತ ಗೌರವ ‘ಮಿತ್ರ ವಿಭೂಷಣ’ ಪ್ರಶಸ್ತಿ ಪ್ರದಾನ
#WATCH | Colombo | Prime Minister Narendra Modi says, “…10,000 houses for the Indian origin Tamil community in Sri Lanka will be completed soon…”
(Source – ANI/DD) pic.twitter.com/KawTd9TmKV
— ANI (@ANI) April 5, 2025
ಭಾರತ ಸರ್ಕಾರ ತಮಿಳುನಾಡು ಮತ್ತು ಶ್ರೀಲಂಕಾದಲ್ಲಿರುವ ಭಾರತದ ಜನರ ನಡುವೆ ಶಾಂತಿಯುತ ಸಂಬಂಧ ಕಾಪಾಡಲು ಪ್ರಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರ ಮೊದಲ ಹೆಜ್ಜೆಯನ್ನಿಟ್ಟಿದೆ. ಶ್ರೀಲಂಕಾ ಸರ್ಕಾರವು ತಮಿಳರ ಆಕಾಂಕ್ಷೆಗಳನ್ನು ಈಡೇರಿಸುತ್ತದೆ ಮತ್ತು ಸಂವಿಧಾನತ್ಮಕವಾಗಿ ಕೆಲಸ ಮಾಡುತ್ತದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದರು.
ಪ್ರಧಾನಿ ಮೋದಿ ಹಾಗೂ ಲಂಕಾ ಅಧ್ಯಕ್ಷರ ಮಧ್ಯೆ ವಿಸ್ತೃತವಾದ ಮಾತುಕತೆಯ ಬಳಿಕ 7 ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಇದನ್ನೂ ಓದಿ: ಏ.10ರಿಂದ ಅಮೆರಿಕದ ಸರಕುಗಳ ಮೇಲೆ 34% ಆಮದು ಸುಂಕ – ಚೀನಾ ಪ್ರತೀಕಾರದ ಸುಂಕಕ್ಕೆ ದೊಡ್ಡಣ್ಣ ಗರಂ
ಮೀನುಗಾರರ ಬಿಡುಗಡೆ:
ಉಭಯ ದೇಶಗಳ ರಕ್ಷಣಾ ಒಪ್ಪಂದದ ಮಾತುಕತೆಯ ನಡುವೆ ಮೀನುಗಾರರ ಜೀವನೋಪಾಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇದನ್ನೂ ಓದಿ: ನೇಪಾಳದಲ್ಲಿ 5.0 ತೀವ್ರತೆಯ ಭೂಕಂಪನ – ಉತ್ತರ ಭಾರತದಲ್ಲೂ ಎಫೆಕ್ಟ್
ಈ ವಿಷಯದಲ್ಲಿ ಮಾನವೀಯ ದೃಷ್ಟಿಕೋನವನ್ನು ತೆಗೆದುಕೊಳ್ಳಲು ಒಪ್ಪಿಗೆ ನೀಡಲಾಗಿದೆ. ಮೀನುಗಾರರನ್ನು ತಕ್ಷಣ ಬಿಡುಗಡೆ ಮಾಡಲು ಮತ್ತು ಅವರ ದೋಣಿಗಳನ್ನು ಹಿಂದಿರುಗಿಸಲು ಒತ್ತಿ ಹೇಳಿದರು. ಭಾರತ ಮತ್ತು ಶ್ರೀಲಂಕಾ ನಡುವಿನ ಸಂಬಂಧವು ಪರಸ್ಪರ ನಂಬಿಕೆ ಮತ್ತು ಸದ್ಭಾವನೆಯನ್ನು ಆಧರಿಸಿದೆ ಎಂದು ಅವರು ಹೇಳಿದರು.