ಆಧ್ಯಾತ್ಮದತ್ತ ಮೋದಿ ಚಿತ್ತ- ಕೇದಾರನಾಥದಲ್ಲಿ ಪ್ರಧಾನಿಯಿಂದ ಪೂಜೆ

Public TV
1 Min Read
modi kedaranath

ಡೆಹ್ರಾಡೂನ್: ಅಧಿಕಾರ ಯುದ್ಧ, ಲೋಕಸಭಾ ಚುನಾವಣೆಯ ಅಬ್ಬರದ ಪ್ರಚಾರವೆಲ್ಲ ಮುಗಿದ ಬಳಿಕ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಆಧ್ಯಾತ್ಮದತ್ತ ತನ್ನ ಚಿತ್ತ ಹರಿಸಿದ್ದಾರೆ.

ಉತ್ತರಾಖಂಡ್ ರಾಜ್ಯದ ಕೇದಾರನಾಥದಲ್ಲಿ ಮೋದಿ ಪೂಜೆ ನಡೆಸುದ್ದಾರೆ. ಭೂಮಿಯಿಂದ 11, 755 ಅಡಿ ಎತ್ತರದಲ್ಲಿರುವ ಈ ಪವಿತ್ರ ಭೂಮಿ ಶಿವನ ಪೂಜಾ ಸ್ಥಾನವಾಗಿದೆ. ಈ ಸ್ಥಳದಲ್ಲಿ ಇಂದು ಪ್ರಧಾನಿಯವರು ಪೂಜಾ ಕೈಂಕರ್ಯಗಳನ್ನು ನೆರವೇರಿಸುತ್ತಿದ್ದಾರೆ. ಬದರಿನಾಥಕ್ಕೂ ಭೇಟಿ ನೀಡುವ ಸಾಧ್ಯತೆಗಳಿವೆ.

ದೀಪಾವಳಿ ಹಬ್ಬದ ಹೊತ್ತಲ್ಲಿ ಅಂದರೆ ಕಳೆದ ವರ್ಷದ ನವೆಂಬರ್‍ನಲ್ಲಿ ಮೋದಿ ಕೇದಾರನಾಥದಲ್ಲಿ ಪೂಜೆ ಸಲ್ಲಿಸಿದ್ದರು. 2017ರಲ್ಲಿ ಚಳಿಗಾಲದ ಮುಗಿದು ದೇವಸ್ಥಾನದ ಬಾಗಿಲು ತೆರೆದ ಬೆನ್ನಲ್ಲೇ ಮೇ ತಿಂಗಳಲ್ಲೂ ದೇವಸ್ಥಾನದ ಬಾಗಿಲು ಮುಚ್ಚುವುದಕ್ಕೂ ಮೊದಲು ಅಕ್ಟೋಬರ್‍ನಲ್ಲಿ ಮೋದಿ ಕೇದಾರನಾಥನ ದರ್ಶನ ಪಡೆದಿದ್ದರು. ಇಂದು ಪ್ರಧಾನಿ ಮೋದಿ ಕೇದಾರನಾಥದಲ್ಲಿ ತಂಗಲಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.

ಕಳೆದ 2 ತಿಂಗಳಿಂದ ನಿರಂತರವಾಗಿ ಚುನಾವಣಾ ಪ್ರಚಾರದಲ್ಲಿ ಪ್ರಧಾನಿಯವರು ತೊಡಗಿಕೊಂಡಿದ್ದರು. ನಾಳೆ ಅಂತಿಮ ಹಂತದ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಶುಕ್ರವಾರ ತೆರೆಬಿದ್ದಿದೆ. ಈ ಹಿನ್ನೆಲೆಯಲ್ಲಿ ಮೋದಿಯವರು ಸಂಪೂರ್ಣವಾಗಿ ರಿಲ್ಯಾಕ್ಸ್ ಮೂಡಿಗೆ ತೆರಳಿದ್ದು, ಧ್ಯಾನ ಮಾಡಲು ಉತ್ತರಾಖಂಡದ ಕೇದರನಾಥ್‍ಗೆ ಭೇಟಿ ನೀಡಿದ್ದಾರೆ. ನಾಳೆ ಮಧ್ಯಾಹ್ನದ ಬಳಿಕ ಪ್ರಧಾನಿಯವರು ದೆಹಲಿಗೆ ಆಗಮಿಸಲಿದ್ದಾರೆ ಎನ್ನಲಾಗಿದೆ.

ಮೇ 9ರ ಬಳಿಕ ದರ್ಶನಕ್ಕಾಗಿ ಕೇದಾರನಾಥ ದೇವಾಲಯವನ್ನು ದರ್ಶನಕ್ಕಾಗಿ ತೆರೆಯಲಾಗಿದ್ದು, ಪ್ರಧಾನಿಯಾದ ಬಳಿಕ ಮೋದಿಯವರು 4ನೇ ಬಾರಿಗೆ ಕೇದರನಾಥಕ್ಕೆ ಭೇಟಿ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *