Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ವಿರುದ್ಧ ರಾಷ್ಟ್ರೀಯತೆಯ ಬಣ ಪ್ರಯೋಗಿಸಿದ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾಂಗ್ರೆಸ್ ವಿರುದ್ಧ ರಾಷ್ಟ್ರೀಯತೆಯ ಬಣ ಪ್ರಯೋಗಿಸಿದ ಮೋದಿ

Districts

ಕಾಂಗ್ರೆಸ್ ವಿರುದ್ಧ ರಾಷ್ಟ್ರೀಯತೆಯ ಬಣ ಪ್ರಯೋಗಿಸಿದ ಮೋದಿ

Public TV
Last updated: May 3, 2018 6:46 pm
Public TV
Share
2 Min Read
modi
SHARE

ಕಲಬುರಗಿ: ಕರ್ನಾಟಕ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ರಾಷ್ಟ್ರೀಯತೆಯ ಬಣ ಪ್ರಯೋಗಿಸಿದ್ದಾರೆ.

ಕಲಬುರಗಿ ನಗರದ ಎನ್‍ವಿ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ ಸೇನೆ ಹಾಗೂ ಯೋಧರ ಬಗ್ಗೆ ಗೌರವ ಇಲ್ಲದ ಕಾಂಗ್ರೆಸ್ ನಿಂದ ದೇಶಕ್ಕೆ ಗೌರವ ನೀಡುವುದನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

modi 2

ಕಲಬುರಗಿ ಜಿಲ್ಲೆ ಶರಣರು ಸಂತರು ನಡೆದಾಡಿದ ಪುಣ್ಯ ಭೂಮಿ. ಅನೇಕ ಮಹಾಪುರಷರು ನಡೆದಾಡಿದ ಈ ನೆಲಕ್ಕೆ ಜನರಿಗೆ ನನ್ನ ಕೋಟಿ ಕೋಟಿ ನಮಸ್ಕಾರಗಳು ಎಂದು ಭಾಷಣ ಆರಂಭಿಸಿದ ಅವರು, ಇಂತಹ ಉರಿ ಬಿಸಿಲಲ್ಲೂ ಇಷ್ಟೊಂದು ಜನ ಸಮಾವೇಶದಲ್ಲಿ ಭಾಗವಹಿಸಿರುವುದನ್ನು ಗಮನಿಸಿದರೆ ದೇಶದಲ್ಲಿ ಕಾಂಗ್ರೆಸ್ ಮುಕ್ತ ಮಾಡಲು ಇದು ಸಕಾಲ ಎಂದೇನಿಸುತ್ತಿದೆ. ಇದು ಕಾಂಗ್ರೆಸ್‍ಗೆ ಎಚ್ಚರಿಕೆಯ ಗಂಟೆ. ಹಲವು ಚುನಾವಣೆಗಳು ಈ ಹಿಂದೆ ಬಂದಿದೆ ಹೋಗಿದೆ. ಆದ್ರೆ ಕರ್ನಾಟಕದ ಜನತೆ ಈ ಬಾರಿ ಸರ್ಕಾರ ಬದಲಿಸುವ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯದ ನಾಲ್ಕು ಮೂಲೆಗಳಲ್ಲಿ ಕೇಸರಿ ಬಾವುಟ ಹಾರಿಸಲಿದ್ದೇವೆ. ಕರ್ನಾಟಕವನ್ನು ಲೂಟಿ ಹೊಡೆಯಲು ಬಿಡುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿಯಿಂದ ಜನರಲ್ಲಿ ಹೊಸ ವಿಶ್ವಾಸ ಮೂಡಿದೆ. ಈ ಚುನಾವಣೆ ಕರ್ನಾಟಕದ ಯುವಜನತೆಯ ಭವಿಷ್ಯ ನಿರ್ಧರಿಸಲಿದೆ. ಇಲ್ಲಿಯ ಯುವಕರಿಗೆ ತಮ್ಮ ಹಕ್ಕು ದೊರೆಯಬೇಕಾಗಿದೆ. ಕರ್ನಾಟಕದ ಉಜ್ವಲ ಭವಿಷ್ಯಕ್ಕಾಗಿ ಬಿಜೆಪಿಗೆ ಮತ ನೀಡಿ ಮನವಿ ಮಾಡಿದರು.

ಕಲಬುರಗಿ ಸಮಾವೇಶದಲ್ಲಿ ಜನರ ಉತ್ಸಾಹ ಅದ್ಭುತವಾಗಿತ್ತು. ಕರ್ನಾಟಕದಲ್ಲಿ @BSYBJP ಅವರ ನಾಯಕತ್ವದಲ್ಲಿ ಕಲಬುರಗಿಯ ಜನರು ಬಿಜೆಪಿ ಸರಕಾರವನ್ನು ನೋಡಬಯಸುತ್ತಾರೆ. ಕರ್ನಾಟಕದಲ್ಲಿ ಅಭಿವೃದ್ಧಿ ವಿರೋಧಿ ಮತ್ತು ರೈತ ವಿರೋಧಿ ಕಾಂಗ್ರೆಸ್ ಸರಕಾರವನ್ನು ನೋಡಿ ಜನ ರೋಸಿಹೋಗಿದ್ದಾರೆ. @BJP4Karnataka pic.twitter.com/pDhDrlATNZ

— Narendra Modi (@narendramodi) May 3, 2018

ಕಲಬುರಗಿ ಭಾರತ ಐಕ್ಯತೆಯ ಸಂಕೇತ: ಕಲಬುರಗಿಯೊಂದಿಗೆ ದೇಶದ ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ ಅವರಿಗೆ ವಿಶೇಷವಾದ ನಂಟಿದೆ. ಸ್ವಾತಂತ್ರ್ಯ ನಂತರ ಹೈದರಾಬಾದ್ ನಿಜಾಮರು ಭಾರತದೊಂದಿಗೆ ವಿಲೀನಗೊಳ್ಳಲು ನಿರಾಕರಿಸಿದ್ದರು. ಈ ವೇಳೆ ಪಟೇಲರು ನಿಜಾಮ ಸೆದೆಬಡಿದು ಕಲಬುರಗಿಯನ್ನು ಭಾರತದೊಳಗೆ ವಿಲೀನಗೊಳಿಸಿದರು. ಕಲಬುರುಗಿ ವಿಲೀನ ನಂತರವೂ ನಿಜಾಮರು ಇಲ್ಲಿ ಹಿಂಸಾಚಾರ ನಡೆಸಿದ್ದರು. ಈ ವೇಳೆ ಹಲವು ಯೋಧರು ತಮ್ಮ ಪ್ರಾಣವನ್ನು ಅರ್ಪಿಸಿದ್ದಾರೆ. ಇದನ್ನು ನೆನೆಯಲು ಕಾಂಗ್ರೆಸ್ ಸರ್ಕಾರಕ್ಕೆ ಅವಕಾಶವಿತ್ತು, ಆದ್ರೆ ಇದನ್ನು ಕಾಂಗ್ರೆಸ್ ಮಾಡಿಲ್ಲ. ದೇಶದ ಯೋಧರಿಗೆ ಕಾಂಗ್ರೆಸ್ ಅಗೌರವ ಸೂಚಿಸಿದೆ. ಸರ್ಜಿಕಲ್ ಸ್ಟ್ರೈಕ್ ವೇಳೆ ಸಾಕ್ಷ್ಯ ಕೇಳಿದರು. ಯೋಧರು ವಿರೋಧಿಗಳ ಮೇಲೆ ದಾಳಿ ನಡೆಸುವ ವೇಳೆ ಕ್ಯಾಮೆರಾ ತೆಗೆದುಕೊಂಡು ಹೋಗಬೇಕಾ ಅಥವಾ ಬಂದುಕು ತೆಗೆದುಕೊಂಡು ಹೋಗ ಬೇಕಾ ಎಂದು ಮೋದಿ ಪ್ರಶ್ನಿಸಿದರು.

ಪಾಟೇಲ್ ಅವರ ಹೆಸರು ಕೇಳಿದರೆ ಕಾಂಗ್ರೆಸ್ ಒಂದು ಪರಿವಾರಕ್ಕೆ ನಿದ್ದೆ ಬರುವುದಿಲ್ಲ. ಕಾಂಗ್ರೆಸ್ ಗೆ ಕರ್ನಾಟಕದ ಶ್ರೇಷ್ಠ ಸೇನಾ ಅಧಿಕಾರಿಗಳಾದ ಜನರಲ್ ತಿಮ್ಮಯ್ಯ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಬಗ್ಗೆಯೂ ಗೌರವವಿಲ್ಲ. ವಂದೇ ಮಾತರಂ ಗೀತೆಗೆ ಅಪಮಾನ ಮಾಡಿದ ಕಾಂಗ್ರೆಸ್ ಗೆ ದೇಶ ಪ್ರೇಮದ ಅರ್ಥ ಎನ್ ಗೊತ್ತು ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು.

ಖರ್ಗೆ ಸಿಎಂ ಸ್ಥಾನ : ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಸಂಪತ್ತು ಎಷ್ಟಿದೆ ನಿಮಗೊತ್ತಾ ಎಂದು ಪ್ರಶ್ನಿಸಿರುವ ಮೂಲಕ ಪ್ರಧಾನಿ ಮೋದಿ ಖರ್ಗೆಗೆ ಟಾಂಗ್ ನೀಡಿದರು. ಈ ಹಿಂದೆ ಚುನಾವಣೆಯಲ್ಲಿ ದಲಿತರ ಕಲ್ಯಾಣ ಮಾಡುತ್ತೇವೆ ಎಂದು ಹೇಳಿ ಖರ್ಗೆ ಅವರನ್ನು ಸಿಎಂ ಮಾಡುವುದಾಗಿ ಕಾಂಗ್ರೆಸ್ ಹೇಳಿತ್ತು. ಆದರೆ ಅಧಿಕಾರ ಬಂದ ಮೇಲೆ ಗುಪ್ತ ಮತದಾನದ ಹೆಸರಿನಲ್ಲಿ ಖರ್ಗೆಯವರನ್ನು ಸಿಎಂ ಮಾಡದೇ ಕಾಂಗ್ರೆಸ್ ದಲಿತರಿಗೆ ಮೋಸ ಮಾಡಿದೆ. ಹೀಗಾಗಿ ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಕಮಲ ಅರಳುತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅವರ ಕುಟುಂಬ ಅರಳುತ್ತೆ ಎಂದು ಟಾಂಗ್ ನೀಡಿದರು.

glb 3

TAGGED:bjpcongresskalaburgikarnataka electionsnamma electionprime ministerPublic TVಕರ್ನಾಟಕ ಚುನಾವಣೆಕಲಬುರಗಿಕಾಂಗ್ರೆಸ್ನಮ್ಮ ಚುನಾವಣೆಪಬ್ಲಿಕ್ ಟಿವಿಪ್ರಧಾನಿ ಮೋದಿಬಿಜೆಪಿ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
9 minutes ago
Hampi Utsava
Bellary

ಹಂಪಿ ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ – ಹೂವಲ್ಲೇ ವಿಜಯನಗರ ಸಾಮ್ರಾಜ್ಯದ ಗತವೈಭವ ಸೃಷ್ಟಿ

Public TV
By Public TV
10 minutes ago
zameer ahmed students
Bellary

ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್

Public TV
By Public TV
13 minutes ago
Hassan Lady Missing
Crime

ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ

Public TV
By Public TV
36 minutes ago
Anti India Terror Accused
Latest

ಭಾರತ ವಿರೋಧಿ ಭಯೋತ್ಪಾದನಾ ಆರೋಪಿಗಳಿಗೆ ಬಾಂಗ್ಲಾ ಚುನಾವಣೆಯಲ್ಲಿ ಗೆಲುವು

Public TV
By Public TV
43 minutes ago
Mumbai metro
Crime

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿತ – ಓರ್ವ ಸಾವು, ಮೂವರು ಗಂಭೀರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?