ಚಂಡೀಗಢ: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿನ ಹಕ್ಕುಗಳನ್ನು ದೋಚುತ್ತಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆರೋಪಿಸಿದ್ದಾರೆ.
ಚಂಡೀಗಢವನ್ನು ತಕ್ಷಣವೇ ಪಂಜಾಬ್ಗೆ ವರ್ಗಾಯಿಸುವ ನಿರ್ಣಯವನ್ನು ಅಂಗೀಕರಿಸಿದ ಒಂದು ದಿನದ ಬಳಿಕ ಅಧಿವೇಶನದಲ್ಲಿ ಮಾತನಾಡಿದ ಭಗವಂತ್ ಮಾನ್ ಅವರು, , ಭಾರತವನ್ನು ಮುಕ್ತಗೊಳಿಸಲು ಪಂಜಾಬ್ನ ಜನರು ಶೇಕಡಾ 80 ರಷ್ಟು ತ್ಯಾಗ ಮಾಡಿದ್ದಾರೆ. ಆದರೆ ಭಾರತದ ಪ್ರಧಾನಿ ಪಂಜಾಬ್ನ ಹಕ್ಕುಗಳನ್ನು ದೋಚುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬುಲ್ಡೋಜರ್ ಜನರನ್ನು ಹತ್ತಿಕ್ಕಲು ಪ್ರಾರಂಭಿಸಿದೆ: ಅಖಿಲೇಶ್ ಯಾದವ್
ತಮ್ಮ ರಾಜ್ಯಗಳ ಹಕ್ಕುಗಳನ್ನು ರಕ್ಷಿಸಲು ದಕ್ಷಿಣದ ರಾಜ್ಯಗಳ ನಾಯಕರು ಪ್ರದರ್ಶಿಸಿದಂತೆಯೇ ಏಕತೆ ಮತ್ತು ಧನ್ಯತೆಯ ಮನೋಭಾವವನ್ನು ಪ್ರದರ್ಶಿಸಲು ರಾಜ್ಯದ ಎಲ್ಲಾ ಸಂಸದರು ಮತ್ತು ಶಾಸಕರು ಒಂದಾಗಬೇಕು ಎಂದು ಸಲಹೆ ನೀಡಿದ್ದಾರೆ.
ನಮ್ಮಲ್ಲಿ ಏಕೆ ಒಗ್ಗಟ್ಟು ಬರುವುದಿಲ್ಲ ಎಂದು ಆಗಾಗ ಅಂದುಕೊಳ್ಳುತ್ತೇನೆ. ನಾನು ಈ ಬಗ್ಗೆ ದಕ್ಷಿಣ ನಾಯಕರ ಬಳಿ ಕೇಳಿದೆ, ಅದಕ್ಕೆ ಅವರು ತಮ್ಮ ಪಕ್ಷದ ಮಾರ್ಗಗಳು ವಿಭಿನ್ನವಾಗಿವೆ ಎಂದು ಉತ್ತರಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಡುಪಿಯಲ್ಲಿ ಮುಸ್ಲಿಂ ಅಂಗಡಿ ಹೆಸರು ಬದಲಿಸುವಂತೆ ಪಟ್ಟು