– ಶುಕ್ಲಾ ಬಾಹ್ಯಾಕಾಶ ಯಾನವು ಶತಕೋಟಿ ಕನಸುಗಳಿಗೆ ಸ್ಫೂರ್ತಿ ಎಂದ ಪ್ರಧಾನಿ
ನವದೆಹಲಿ: ಐತಿಹಾಸಿಕ ಬಾಹ್ಯಾಕಾಶ ಯಾನ ಪೂರೈಸಿ ಭೂಮಿಗೆ ವಾಪಸ್ ಆದ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubhanshu Shukla) ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸ್ವಾಗತ ಕೋರಿದ್ದಾರೆ.
ಶುಕ್ಲಾ ಅವರ ಪ್ರಯಾಣವು ಶತಕೋಟಿ ಕನಸುಗಳಿಗೆ ಸ್ಫೂರ್ತಿ. ಇದು ಭಾರತದ ಮಾನವ ಬಾಹ್ಯಾಕಾಶ ಹಾರಾಟದ ಮಿಷನ್ ಗಗನಯಾನಕ್ಕೆ ಒಂದು ಮೈಲಿಗಲ್ಲು ಎಂದು ಮೋದಿ ಬಣ್ಣಿಸಿದ್ದಾರೆ. ಇದನ್ನೂ ಓದಿ: ನಗುಮುಖದಲ್ಲಿ ಕ್ಯಾಪ್ಸುಲ್ನಿಂದ ಹೊರಬಂದು ಕೈಬೀಸಿದ ಶುಭಾಂಶು ಶುಕ್ಲಾ
I join the nation in welcoming Group Captain Shubhanshu Shukla as he returns to Earth from his historic mission to Space. As India’s first astronaut to have visited International Space Station, he has inspired a billion dreams through his dedication, courage and pioneering…
— Narendra Modi (@narendramodi) July 15, 2025
ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ತಮ್ಮ ಐತಿಹಾಸಿಕ ಬಾಹ್ಯಾಕಾಶ ಕಾರ್ಯಾಚರಣೆಯಿಂದ ಭೂಮಿಗೆ ಮರಳುತ್ತಿರುವುದನ್ನು ಸ್ವಾಗತಿಸಲು ನಾನು ರಾಷ್ಟ್ರದೊಂದಿಗೆ ಸೇರುತ್ತೇನೆ. ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಭಾರತದ ಮೊದಲ ಗಗನಯಾತ್ರಿಯಾಗಿ, ಅವರು ತಮ್ಮ ಸಮರ್ಪಣೆ, ಧೈರ್ಯ ಮತ್ತು ಪ್ರವರ್ತಕ ಮನೋಭಾವದ ಮೂಲಕ ಶತಕೋಟಿ ಕನಸುಗಳಿಗೆ ಸ್ಫೂರ್ತಿ ನೀಡಿದ್ದಾರೆ. ಇದು ನಮ್ಮದೇ ಆದ ಮಾನವ ಬಾಹ್ಯಾಕಾಶ ಹಾರಾಟ ಮಿಷನ್- ಗಗನಯಾನಕ್ಕೆ ಮತ್ತೊಂದು ಮೈಲಿಗಲ್ಲು ಎಂದು ಪ್ರಧಾನಿ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
2025 ರ ಜೂ.26 ರಂದು ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ ಆಕ್ಸ್-4 (Axiom-4 mission) ಕಾರ್ಯಾಚರಣೆಯು, ಆರು ಮಿಲಿಯನ್ ಮೈಲುಗಳಿಗಿಂತ ಹೆಚ್ಚು ಪ್ರಯಾಣಿಸಿದೆ. ಭೂಮಿಯ ಸುತ್ತ 250 ಕ್ಕೂ ಹೆಚ್ಚು ಕಕ್ಷೆಗಳನ್ನು ಪೂರ್ಣಗೊಳಿಸಿದೆ. ಇದನ್ನೂ ಓದಿ: ಭುವಿಗೆ ಶುಭಾಂಶು ಶುಕ್ಲಾ – ಕ್ಯಾಲಿಫೋರ್ನಿಯಾ ಕಡಲ ತೀರದಲ್ಲಿ ಸ್ಪ್ಲ್ಯಾಷ್ ಡೌನ್
ತಮ್ಮ 17 ದಿನಗಳ ವಾಸ್ತವ್ಯದ ಅವಧಿಯಲ್ಲಿ ಗಗನಯಾತ್ರಿಗಳು 60 ಕ್ಕೂ ಹೆಚ್ಚು ವೈಜ್ಞಾನಿಕ ಪ್ರಯೋಗಗಳನ್ನು ನಡೆಸಿದ್ದಾರೆ. ಇದು ಅಂತರರಾಷ್ಟ್ರೀಯ ಸಂಶೋಧನಾ ಪ್ರಯತ್ನಗಳಿಗೆ ಅಮೂಲ್ಯವಾದ ಡೇಟಾವನ್ನು ಕೊಡುಗೆ ನೀಡಿದೆ. ಭಾರತದ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸ್-4ನ ಸದಸ್ಯರಾದ ಕಮಾಂಡರ್ ಪೆಗ್ಗಿ ವಿಟ್ಸನ್ (ಯುಎಸ್ಎ), ಮಿಷನ್ ಸ್ಪೆಷಲಿಸ್ಟ್ ಸಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ (ಪೋಲೆಂಡ್) ಮತ್ತು ಟಿಬೋರ್ ಕಾಪು (ಹಂಗೇರಿ) ಭೂಮಿಗೆ ವಾಪಸ್ ಆಗಿದ್ದಾರೆ.