Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:RSSಗೆ 100 ವರ್ಷ – ನಾಳೆ ಪೋಸ್ಟ್ ಸ್ಟ್ಯಾಂಪ್, ನಾಣ್ಯ ಬಿಡುಗಡೆ ಮಾಡಲಿದ್ದಾರೆ ಪ್ರಧಾನಿ ಮೋದಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | RSSಗೆ 100 ವರ್ಷ – ನಾಳೆ ಪೋಸ್ಟ್ ಸ್ಟ್ಯಾಂಪ್, ನಾಣ್ಯ ಬಿಡುಗಡೆ ಮಾಡಲಿದ್ದಾರೆ ಪ್ರಧಾನಿ ಮೋದಿ

Latest

RSSಗೆ 100 ವರ್ಷ – ನಾಳೆ ಪೋಸ್ಟ್ ಸ್ಟ್ಯಾಂಪ್, ನಾಣ್ಯ ಬಿಡುಗಡೆ ಮಾಡಲಿದ್ದಾರೆ ಪ್ರಧಾನಿ ಮೋದಿ

Public TV
Last updated: September 30, 2025 4:36 pm
Public TV
Share
2 Min Read
Modi 1
SHARE

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) 100 ವರ್ಷ ತುಂಬಿದ ಹಿನ್ನೆಲೆ ಅ.1ರಂದು ದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆಯುವ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮೋದಿ ಆರ್‌ಎಸ್‌ಎಸ್ ಕೊಡುಗೆಗಳನ್ನು ಎತ್ತಿ ತೋರಿಸುವ, ವಿಶೇಷವಾಗಿ ವಿನ್ಯಾಸಗೊಳಿಸಲಾದ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದನ್ನೂ ಓದಿ: ದಸರಾ ನೋಡಲು ಹೋಗಿದ್ದ ಉದ್ಯಮಿ ಮನೆಯಲ್ಲಿ ಕಳ್ಳತನ – 12 ಲಕ್ಷ ಮೌಲ್ಯದ ಚಿನ್ನ, 29 ಲಕ್ಷ ಕ್ಯಾಶ್ ಕಳವು

1925ರ ವಿಜಯದಶಮಿಯಂದು ಆರ್‌ಎಸ್‌ಎಸ್ ಸ್ಥಾಪನೆಗೊಂಡಿದ್ದು, 2025ರ ವಿಜಯದಶಮಿಗೆ 100 ವರ್ಷಗಳನ್ನು ಪೂರೈಸಲಿದೆ. ಇತ್ತೀಚಿಗೆ ನಡೆದ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಆರ್‌ಎಸ್‌ಎಸ್ ಸಾಧನೆಯನ್ನು ಹಾಡಿಹೊಗಳಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಕಮಿಷನ್ ದಂಧೆಯಲ್ಲಿ ತೊಡಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ: ಪ್ರಹ್ಲಾದ್ ಜೋಶಿ ಕಿಡಿ

PM Modi to attend RSS Program

ತಮ್ಮ 126ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಆರ್‌ಎಸ್‌ಎಸ್ ಸ್ವಯಂಸೇವಕರ ಪ್ರತಿಯೊಂದು ಕೆಲಸ, ಪ್ರತಿಯೊಂದು ಪ್ರಯತ್ನವೂ ದೇಶ ಮೊದಲು ಎಂಬ ಭಾವನೆಯನ್ನು ಸದಾಕಾಲ ಅತ್ಯುತ್ತಮವಾಗಿರಿಸುತ್ತದೆ. ಈ ಬಾರಿಯ ವಿಜಯದಶಮಿ ಮತ್ತೊಂದು ಕಾರಣದಿಂದ ಬಹಳ ವಿಶೇಷವೆನಿಸುತ್ತದೆ. ಇದೇ ದಿನದಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪನೆಯ 100ನೇ ವರ್ಷವೂ ಆಗಿದೆ. ಒಂದು ಶತಮಾನದ ಈ ಪ್ರಯಾಣವು ಎಷ್ಟು ಅದ್ಭುತ, ಅಭೂತಪೂರ್ವವಾಗಿದೆ ಮತ್ತು ಅಷ್ಟೇ ಸ್ಫೂರ್ತಿದಾಯಕವಾಗಿದೆ ಎಂದಿದ್ದರು. ಇದನ್ನೂ ಓದಿ: ಗಾಯಕ ಜುಬೀನ್ ಗಾರ್ಗ್ ಸಾವಿನ ತನಿಖೆಗೆ ಸಿಂಗಾಪುರ ಸರ್ಕಾರದ ಸಹಕಾರ: ಅಸ್ಸಾಂ ಸಿಎಂ

100 ವರ್ಷಗಳ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪನೆಯಾದಾಗ, ದೇಶವು ಶತಮಾನಗಳ ಗುಲಾಮಗಿರಿಯ ಸರಪಳಿಯಲ್ಲಿ ಬಂಧಿಸಲ್ಪಟ್ಟಿತ್ತು. ಶತಮಾನಗಳ ಈ ಗುಲಾಮಗಿರಿಯು ನಮ್ಮ ಸ್ವಾಭಿಮಾನ ಮತ್ತು ಆತ್ಮವಿಶ್ವಾಸಕ್ಕೆ ಆಳವಾದ ಗಾಯವುಂಟು ಮಾಡಿತ್ತು. ವಿಶ್ವದ ಅತ್ಯಂತ ಪ್ರಾಚೀನ ನಾಗರಿಕತೆಯ ಮುಂದೆ ಸ್ವಯಂ ಗುರುತು ಇಲ್ಲದಂತಹ ಬಿಕ್ಕಟ್ಟಿನ ಪರಿಸ್ಥಿತಿ ಎದುರಾಗಿತ್ತು. ದೇಶವಾಸಿಗಳು ಕೀಳರಿಮೆಯ ಬಲಿಪಶುಗಳಾಗುತ್ತಿದ್ದರು. ಆದ್ದರಿಂದಲೇ ದೇಶದ ಸ್ವಾತಂತ್ರ‍್ಯದೊಂದಿಗೆ ಸೈದ್ಧಾಂತಿಕ ಗುಲಾಮಗಿರಿಯಿಂದಲೂ ಮುಕ್ತವಾಗುವುದು ಅಗತ್ಯವಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಪರಮಪೂಜ್ಯ ಡಾ. ಹೆಡ್ಗೆವಾರ್ ಅವರು ಈ ವಿಷಯ ಕುರಿತು ಚಿಂತಿಸಲಾರಂಭಿಸಿದರು ಮತ್ತು ಈ ಭಗೀರಥ ಕಾರ್ಯಕ್ಕಾಗಿ ಅವರು 1925ರಲ್ಲಿ ವಿಜಯದಶಮಿಯ ಪವಿತ್ರ ಸಂದರ್ಭದಲ್ಲಿ ‘ರಾಷ್ಟ್ರೀಯ ಸ್ವಯಂಸೇವಕ ಸಂಘ’ ಸ್ಥಾಪಿಸಿದರು ಎಂದು ಹೇಳಿದ್ದರು. ಇದನ್ನೂ ಓದಿ: ವಿಶ್ವಕರ್ಮ ಮಂಡಳಿ ಮಾಡಿ ಸರ್ಕಾರ ಮರೆತಂತಿದೆ: ಶಂಕರಾತ್ಮಾನಂದ ಸರಸ್ವತಿ ಶ್ರೀ ಕಿಡಿ

ಡಾಕ್ಟರ್ ಹೆಡ್ಗೆವಾರ್ ಅವರ ನಿಧನಾನಂತರ, ಪರಮಪೂಜ್ಯ ಗುರೂಜಿ ಅವರು ರಾಷ್ಟ್ರ ಸೇವೆಯ ಈ ಮಹಾಯಜ್ಞವನ್ನು ಮುನ್ನಡೆಸಿದರು. ಪರಮ ಪೂಜ್ಯ ಗುರೂಜಿಯವರು ‘ರಾಷ್ಟ್ರಾಯ ಸ್ವಾಹಾ, ರಾಷ್ಟ್ರಾಯ ಇದಂ ನ ಮಮ’ ಎನ್ನುತ್ತಿದ್ದರು. ಅಂದ್ರೆ, ಇದು ನನ್ನದಲ್ಲ, ಇದು ರಾಷ್ಟ್ರದ್ದು ಎಂದರ್ಥ. ಇದರಲ್ಲಿ ಸ್ವಾರ್ಥವನ್ನು ತೊರೆದು ರಾಷ್ಟ್ರಕ್ಕಾಗಿ ಸಮರ್ಪಣಾ ಭಾವದಿಂದ ಕೆಲಸ ಮಾಡುವಂತಹ ಪ್ರೇರಣೆ ಅಡಗಿದೆ. ಗುರೂಜಿ ಗೋಲ್ವಾಲ್ಕರ್ ಅವರ ಈ ವಾಕ್ಯವು ಲಕ್ಷಾಂತರ ಸ್ವಯಂ ಸೇವಕರಿಗೆ ತ್ಯಾಗ ಮತ್ತು ಸೇವೆಯ ಹಾದಿ ತೋರಿಸಿತು. ಏಕೆಂದ್ರೆ ತ್ಯಾಗ ಮತ್ತು ಸೇವಾ ಭಾವನೆ ಹಾಗೂ ಶಿಸ್ತಿನ ಬೋಧನೆಯ ಸಂಘದ ನಿಜವಾದ ಶಕ್ತಿಯಾಗಿದೆ. ಇಂದು ಆರ್‌ಎಸ್‌ಎಸ್ ನೂರು ವರ್ಷಗಳಿಂದ ಅವಿಶ್ರಾಂತವಾಗಿ, ಅವಿರತವಾಗಿ ರಾಷ್ಟ್ರದ ಸೇವಾ ಕಾರ್ಯದಲ್ಲಿ ತೊಡಗಿಕೊಂಡಿದೆ. ಆದ್ದರಿಂದಲೇ ದೇಶದಲ್ಲಿ ಯಾವುದೇ ನೈಸರ್ಗಿಕ ವಿಕೋಪ ಎಲ್ಲಿಯೇ ಎದುರಾಗಲಿ, ಆರ್‌ಎಸ್‌ಎಸ್‌ನ ಸ್ವಯಂಸೇವಕರು ಎಲ್ಲರಿಗಿಂತ ಮೊದಲು ಅಲ್ಲಿಗೆ ತಲುಪುತ್ತಾರೆ ಎಂದು ಶ್ಲಾಘಿಸಿದ್ದರು. ಇದನ್ನೂ ಓದಿ: ಪ್ರವಾಹ ಪೀಡಿತ ಕಲ್ಯಾಣ ಕರ್ನಾಟಕದಲ್ಲಿ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

TAGGED:coinnarendra modiNew DelhirssStampಅಂಚೆ ಚೀಟಿಆರ್‍ಎಸ್‍ಎಸ್ನರೇಂದ್ರ ಮೋದಿನವದೆಹಲಿನಾಣ್ಯ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

ಸಾಂದರ್ಭಿಕ ಚಿತ್ರ
Latest

ಬಂಗಾಳದಲ್ಲಿ ಕೇಸರಿ ಸುನಾಮಿ – ಮಮತಾ ಆಡಳಿತಕ್ಕೆ ಅಂತ್ಯ ಹಾಡಲು ಆರ್‌ಎಸ್‌ಎಸ್ ‘ಸೈಲೆಂಟ್ ಆಪರೇಷನ್’ ಯಶಸ್ವಿ!

Public TV
ByPublic TV
31 minutes ago
Duck
Chikkamagaluru

ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Public TV
ByPublic TV
33 minutes ago
01 1
Latest

ಗಂಗೋತ್ರಿಯಿಂದ ಗಂಗಾ ಸಾಗರದ ತನಕ ಕಮಲ ಅರಳಿದೆ, ಬಂಗಾಳ ಭಯಮುಕ್ತವಾಗಿದೆ: ಮೋದಿ

Public TV
ByPublic TV
42 minutes ago
pm modi 5
Latest

ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ

Public TV
ByPublic TV
1 hour ago
Siddaramaiah
Bengaluru City

SIR ಮೋಸದಾಟ, ಚುನಾವಣಾ ಆಯೋಗದ ಕೈವಾಡದಿಂದ ಮಮತಾಗೆ ಸೋಲು: ಸಿದ್ದರಾಮಯ್ಯ ಆಕ್ರೋಶ

Public TV
ByPublic TV
1 hour ago
Narenndra Modi BJP Victory Specch delhi lection
Latest

ವಾಜಪೇಯಿ ಕನಸು ನನಸು – ಬಿಜೆಪಿ ಆಡಳಿತ ರಾಜ್ಯಗಳ ಸಂಖ್ಯೆ 20ಕ್ಕೆ ಏರಿಕೆ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?