Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರತಿ ರಾಜ್ಯದಲ್ಲಿ ಒಂದು ವಿಶ್ವದರ್ಜೆಯ ಪ್ರವಾಸಿ ತಾಣ ಅಭಿವೃದ್ಧಿಪಡಿಸಿ: ಮೋದಿ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರತಿ ರಾಜ್ಯದಲ್ಲಿ ಒಂದು ವಿಶ್ವದರ್ಜೆಯ ಪ್ರವಾಸಿ ತಾಣ ಅಭಿವೃದ್ಧಿಪಡಿಸಿ: ಮೋದಿ ಕರೆ

Latest

ಪ್ರತಿ ರಾಜ್ಯದಲ್ಲಿ ಒಂದು ವಿಶ್ವದರ್ಜೆಯ ಪ್ರವಾಸಿ ತಾಣ ಅಭಿವೃದ್ಧಿಪಡಿಸಿ: ಮೋದಿ ಕರೆ

Public TV
Last updated: May 24, 2025 4:29 pm
Public TV
Share
2 Min Read
PM Narendra Modi Niti Aayog
SHARE

– ಟೀಂ ಇಂಡಿಯಾ ರೀತಿ ಕೇಂದ್ರ, ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕು: ಪ್ರಧಾನಿ

ನವದೆಹಲಿ: ವಿಕಸಿತ ಭಾರತ (Viksit Bharat) ಗುರಿಯನ್ನು ಸಾಧಿಸಲು ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ‘ಟೀಂ ಇಂಡಿಯಾ’ ರೀತಿ ಕೆಲಸ ಮಾಡಬೇಕೆಂದು ಪ್ರಧಾನಿ ಮೋದಿ (Narendra Modi) ಕರೆ ನೀಡಿದರು.

ನೀತಿ ಆಯೋಗದ (Niti Aayog) ಹತ್ತನೇ ಸಭೆಯ ಅಧ್ಯಕ್ಷತೆ ವಹಿಸಿದ ಅವರು, ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾತನಾಡಿದರು. ನಾವು ಅಭಿವೃದ್ಧಿಯ ವೇಗವನ್ನು ಹೆಚ್ಚಿಸಬೇಕು. ಕೇಂದ್ರ ಮತ್ತು ಎಲ್ಲಾ ರಾಜ್ಯಗಳು ಒಟ್ಟಾಗಿ ಟೀಂ ಇಂಡಿಯಾದಂತೆ ಒಟ್ಟಾಗಿ ಕೆಲಸ ಮಾಡಿದರೆ, ಯಾವುದೇ ಗುರಿ ಅಸಾಧ್ಯವಲ್ಲ. ವಿಕಸಿತ ಭಾರತ ಭಾರತ ಪ್ರತಿಯೊಬ್ಬ ಭಾರತೀಯನ ಗುರಿ. ಪ್ರತಿಯೊಂದು ರಾಜ್ಯ ವಿಕಸಿತ ಆದಾಗ, ಭಾರತ ವಿಕಸಿತವಾಗುತ್ತದೆ. ಇದು 140 ಕೋಟಿ ನಾಗರಿಕರ ಆಕಾಂಕ್ಷೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಮೋದಿ ನೇತೃತ್ವದ ನೀತಿ ಆಯೋಗದ ಸಭೆಗೆ ಸಿದ್ದರಾಮಯ್ಯ ಗೈರು

PM Narendra Modi Niti Aayog

ರಾಜ್ಯಗಳು ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಅಗತ್ಯ ಸೌಲಭ್ಯಗಳು ಮತ್ತು ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಕನಿಷ್ಠ ಒಂದು ಪ್ರವಾಸಿ ತಾಣವನ್ನು ವಿಶ್ವದರ್ಜೆಯ ತಾಣವನ್ನಾಗಿ ಅಭಿವೃದ್ಧಿಪಡಿಸಬೇಕು. ಒಂದು ರಾಜ್ಯ, ಒಂದು ಜಾಗತಿಕ ತಾಣ. ಇದು ನೆರೆಯ ನಗರಗಳನ್ನು ಪ್ರವಾಸಿ ಸ್ಥಳಗಳಾಗಿ ಅಭಿವೃದ್ಧಿಪಡಿಸಲು ಸಹ ಕಾರಣವಾಗುತ್ತದೆ ಎಂದರು. ಇದನ್ನೂ ಓದಿ: ಪ್ರೀತಿಸಿದವನೊಂದಿಗೆ ಮನೆಬಿಟ್ಟು ಹೋದ ಮಗಳು – ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಶಂಕೆ

PM Narendra Modi Niti Aayog 2

ಭಾರತ ವೇಗವಾಗಿ ನಗರೀಕರಣಗೊಳ್ಳುತ್ತಿದೆ. ಭವಿಷ್ಯಕ್ಕೆ ಸಿದ್ಧವಾಗಿರುವ ನಗರಗಳತ್ತ ನಾವು ಕೆಲಸ ಮಾಡಬೇಕು. ಬೆಳವಣಿಗೆ, ನಾವೀನ್ಯತೆ ಮತ್ತು ಸುಸ್ಥಿರತೆಯು ನಮ್ಮ ನಗರಗಳ ಅಭಿವೃದ್ಧಿಗೆ ಎಂಜಿನ್ ಆಗಿರಬೇಕು. ನಮ್ಮ ಕಾರ್ಯಪಡೆಯಲ್ಲಿ ಮಹಿಳೆಯರನ್ನು ಸೇರಿಸಿಕೊಳ್ಳುವ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕು. ಅವರು ಕಾರ್ಯಪಡೆಯಲ್ಲಿ ಗೌರವಯುತವಾಗಿ ಸಂಯೋಜಿಸಲ್ಪಡುವಂತೆ ನಾವು ಕಾನೂನುಗಳು, ನೀತಿಗಳನ್ನು ರೂಪಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: `ಯುವನಿಧಿ’ ಗ್ಯಾರಂಟಿ ಹಣದಿಂದ ಲ್ಯಾಪ್‌ಟಾಪ್‌ ಖರೀದಿಸಿದ ವಿದ್ಯಾರ್ಥಿನಿ ಇಶಾ ಆಸಿಫ್‌

PM Narendra Modi Niti Aayog 1

ಸರ್ಕಾರ ಜಾರಿಗೆ ತಂದ ನೀತಿಗಳು ಸಾಮಾನ್ಯ ನಾಗರಿಕರ ಜೀವನದಲ್ಲಿ ಬದಲಾವಣೆ ತರುವ ರೀತಿಯಲ್ಲಿ ನಾವು ಕೆಲಸ ಮಾಡಬೇಕು. ಜನರು ಬದಲಾವಣೆಯನ್ನು ಅನುಭವಿಸಿದಾಗ ಮಾತ್ರ, ಅದು ಬದಲಾವಣೆಯನ್ನು ಬಲಪಡಿಸುತ್ತದೆ. ಬದಲಾವಣೆಯನ್ನು ಒಂದು ಚಳುವಳಿಯಾಗಿ ಪರಿವರ್ತಿಸುತ್ತದೆ. 140 ಕೋಟಿ ಜನರ ಆಕಾಂಕ್ಷೆಗಳನ್ನು ಈಡೇರಿಸಲು ನಮಗೆ ಒಂದು ತಂಡವಾಗಲು ಉತ್ತಮ ಅವಕಾಶವಿದೆ. 2047ರ ವೇಳೆಗೆ ಭಾರತವನ್ನು ವಿಕಸಿತ ಮಾಡುವುದು ನಮ್ಮ ಗುರಿಯಾಗಿದೆ. ಪ್ರತಿಯೊಂದು ರಾಜ್ಯ, ಪ್ರತಿಯೊಂದು ನಗರ, ಪ್ರತಿಯೊಂದು ನಗರ ಪಾಲಿಕೆ ಮತ್ತು ಪ್ರತಿಯೊಂದು ಗ್ರಾಮವನ್ನು ವಿಕಸಿತ ಮಾಡುವ ಗುರಿ ನಮಗಿರಬೇಕು. ನಾವು ಈ ಮಾರ್ಗಗಳಲ್ಲಿ ಕೆಲಸ ಮಾಡಿದರೆ, ವಿಕಸಿತ ಭಾರತ ಆಗಲು 2047ರವರೆಗೆ ಕಾಯಬೇಕಾಗಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಡ್ರೆಸ್ ತಪ್ಪಾಗಿದ್ದಕ್ಕೆ ಗಲಾಟೆ – ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಡೆಲಿವರಿ ಬಾಯ್!

ಪುದುಚೇರಿ ಸಿಎಂ ರಂಗಸ್ವಾಮಿ, ಕರ್ನಾಟಕ ಸಿಎಂ ಸಿದ್ಧರಾಮಯ್ಯ ಮತ್ತು ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಸಭೆಗೆ ಗೈರುಹಾಜರಾಗಿದ್ದರು. ಆಂಧ್ರಪ್ರದೇಶ, ತಮಿಳುನಾಡು ಮತ್ತು ತೆಲಂಗಾಣ ಮುಖ್ಯಮಂತ್ರಿಗಳಾದ ಎನ್ ಚಂದ್ರಬಾಬು ನಾಯ್ಡು, ಎಂಕೆ ಸ್ಟಾಲಿನ್ ಮತ್ತು ರೇವಂತ್ ರೆಡ್ಡಿ ಉಪಸ್ಥಿತರಿದ್ದರು. ಜಮ್ಮು ಕಾಶ್ಮೀರದ ಸಿಎಂ ಒಮರ್ ಅಬ್ದುಲ್ಲಾ ಮತ್ತು ಹಿಮಾಚಲ ಪ್ರದೇಶದ ಸುಖವಿಂದರ್ ಸುಖು ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: Vijayapura | ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತ – ಯುವಕ ಸಾವು

TAGGED:narendra modiNew Delhiniti aayogtourismViksit Bharatನರೇಂದ್ರ ಮೋದಿನವದೆಹಲಿನೀತಿ ಆಯೋಗಪ್ರವಾಸಿ ತಾಣವಿಕಸಿತ ಭಾರತ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Pinarayi Vijayan
Latest

ಶಬರಿಮಲೆ ವಿಚಾರದಲ್ಲಿ ಪಿಣರಾಯಿ ಯೂಟರ್ನ್ – ಮಹಿಳೆಯರ ಪ್ರವೇಶ ಹಿಂದಿನ ನಿಲುವು ಬದಲಾಯಿಸಿದ ಸರ್ಕಾರ

Public TV
By Public TV
3 hours ago
Iran warned UAE residents
Latest

ಯುಎಇ ಬಂದರು ಪ್ರದೇಶಗಳಿಂದ ಹೊರಗೆ ಹೋಗಿ: ಜನರಿಗೆ ಇರಾನ್‌ ಎಚ್ಚರಿಕೆ

Public TV
By Public TV
4 hours ago
Crime 3
Latest

ಮಂಗ ಓಡಿಸಲು ಹೋದವನ ದುರಂತ ಅಂತ್ಯ – ಕೈಯಲ್ಲಿದ್ದ ಎರ್‌ಗನ್‌ನಿಂದ ಹಾರಿದ ಗುಂಡಿಗೆ ಯುವಕ ಬಲಿ

Public TV
By Public TV
4 hours ago
Stray Dogs 1
Crime

ತೆಲಂಗಾಣದಲ್ಲಿ ನೂರಾರು ಬೀದಿ ನಾಯಿಗಳ ಹತ್ಯೆ – ಪ್ರಕರಣ ದಾಖಲು

Public TV
By Public TV
5 hours ago
Donald Trump 1
Latest

ಶೀಘ್ರವೇ ಹಾರ್ಮುಜ್‌ ಜಲಸಂಧಿ ಓಪನ್‌: ಡೊನಾಲ್ಡ್‌ ಟ್ರಂಪ್‌

Public TV
By Public TV
5 hours ago
Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?